AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಾಯ ಸಚಿವ ಆರ್.ಅಶೋಕರಿಂದ ಪಿಂಡ ಪ್ರದಾನ ಕಾರ್ಯ; ಕೊವಿಡ್‌ನಿಂದ ಮೃತಪಟ್ಟ 1 ಸಾವಿರಕ್ಕೂ ಹೆಚ್ಚು ಜನರ ಅಸ್ಥಿ ವಿಸರ್ಜನೆ

ಕಾವೇರಿ ನದಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಪೂಜಾ ಕೈಂಕರ್ಯದಲ್ಲಿ ಕಂದಾಯ ಸಚಿವ ಆರ್.ಅಶೋಕ ಪಾಲ್ಗೊಂಡಿದ್ದಾರೆ. 1 ಸಾವಿರಕ್ಕೂ ಹೆಚ್ಚು ಜನರಿಗೆ ಸಾಮೂಹಿಕವಾಗಿ ಪಿಂಡ ಪ್ರಧಾನ ಕಾರ್ಯ ಮಾಡಲಾಗಿದೆ. ಈ ಹಿಂದೆಯೂ ಕೂಡ ರಾಜ್ಯ ಸರ್ಕಾರದ ಪರವಾಗಿ ಸಚಿವ ಆರ್. ಅಶೋಕ ಅವರು ಜೂನ್ 2 ರಂದು ಅಸ್ತಿ ವಿಸರ್ಜನೆ ಮಾಡಿದ್ದರು.

ಕಂದಾಯ ಸಚಿವ ಆರ್.ಅಶೋಕರಿಂದ ಪಿಂಡ ಪ್ರದಾನ ಕಾರ್ಯ; ಕೊವಿಡ್‌ನಿಂದ ಮೃತಪಟ್ಟ 1 ಸಾವಿರಕ್ಕೂ ಹೆಚ್ಚು ಜನರ ಅಸ್ಥಿ ವಿಸರ್ಜನೆ
1 ಸಾವಿರಕ್ಕೂ ಹೆಚ್ಚು ಜನರಿಗೆ ಸಾಮೂಹಿಕವಾಗಿ ಪಿಂಡ ಪ್ರಧಾನ ಕಾರ್ಯ
TV9 Web
| Updated By: preethi shettigar|

Updated on:Oct 04, 2021 | 12:44 PM

Share

ಮಂಡ್ಯ: ಕೊವಿಡ್‌ನಿಂದ ಮೃತಪಟ್ಟವರ ಪಿಂಡ ಪ್ರದಾನ ಕಾರ್ಯವನ್ನು ಕಂದಾಯ ಸಚಿವ ಆರ್.ಅಶೋಕ ಮಾಡಿದ್ದಾರೆ. 1 ಸಾವಿರಕ್ಕೂ ಹೆಚ್ಚು ಮೃತರ ಪಿಂಡ ಪ್ರದಾನ ಕಾರ್ಯ ಮಾಡಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಘೋಸಾಯಿ ಘಾಟ್‌ ಬಳಿಯ ಕಾವೇರಿ ನದಿಯಲ್ಲಿ ಇಂದು (ಅಕ್ಟೋಬರ್ 4) ಪಿಂಡ ಪ್ರದಾನ ಕಾರ್ಯ ನಡೆದಿದೆ.

ಕಾವೇರಿ ನದಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಪೂಜಾ ಕೈಂಕರ್ಯದಲ್ಲಿ ಕಂದಾಯ ಸಚಿವ ಆರ್.ಅಶೋಕ ಪಾಲ್ಗೊಂಡಿದ್ದಾರೆ. 1 ಸಾವಿರಕ್ಕೂ ಹೆಚ್ಚು ಜನರಿಗೆ ಸಾಮೂಹಿಕವಾಗಿ ಪಿಂಡ ಪ್ರಧಾನ ಕಾರ್ಯ ಮಾಡಲಾಗಿದೆ. ಈ ಹಿಂದೆಯೂ ಕೂಡ ರಾಜ್ಯ ಸರ್ಕಾರದ ಪರವಾಗಿ ಸಚಿವ ಆರ್. ಅಶೋಕ ಅವರು ಜೂನ್ 2 ರಂದು ಅಸ್ತಿ ವಿಸರ್ಜನೆ ಮಾಡಿದ್ದರು. ಬೆಳಕವಾಡಿ ಗ್ರಾಮದ ಬಳಿಯ ಕಾವೇರಿ ನದಿ ದಡದಲ್ಲಿ ಅಸ್ತಿ ವಿಸರ್ಜನೆ ಮಾಡಲಾಗಿತ್ತು. ಕುಟುಂಬದವರು ಅಸ್ಥಿ ಕೊಂಡೊಯ್ಯದೇ ಬಾಕಿ ಉಳಿದಿದ್ದ ಸುಮಾರು 950 ಜನರ ಅಸ್ಥಿ ವಿಸರ್ಜನೆ ಮಾಡಲಾಗಿತ್ತು. ಈಗ ಪಿತೃ ಪಕ್ಷದ ಸಂದರ್ಭದಲ್ಲಿ ಮತ್ತೆ ಇನ್ನುಳಿದ ಜನರ ಅಂತಿಮ‌ ವಿಧಿ ವಿಧಾನಕ್ಕೆ ರಾಜ್ಯ ಸರ್ಕಾರ ತಿರ್ಮಾನ ಮಾಡಿದೆ.

ಮಂಡ್ಯ: ಸತ್ತವರು ಅನಾಥರಲ್ಲ, ಒಂದೊಂದು ಕಾರಣಕ್ಕೆ ಅಸ್ತಿ ವಿಸರ್ಜನೆ ಮಾಡಿಲ್ಲ:  ಆರ್.ಅಶೋಕ್ ಹಲವು ಕಾರಣಗಳಿಂದಾಗಿ ಮೃತರ ಕುಟುಂಬಸ್ಥರು ಅಸ್ಥಿ ವಿಸರ್ಜಿಸಿರಲಿಲ್ಲ. ಅನಾಥ ಅಸ್ಥಿಗಳನ್ನು ವಿಸರ್ಜಿಸುವ ಕೆಲಸ ಸರ್ಕಾರ ಮಾಡಿತ್ತು. ಈಗ ಸತ್ತವರಿಗೆ ಸದ್ಗತಿ ದೊರಕಿಸುವ ಕಾರ್ಯ ಮಾಡಲಾಗ್ತಿದೆ. ಪಿಂಡ ಪ್ರಧಾನ ಮಾಡಿದರೆ ಸತ್ತವರ ಆತ್ಮಕ್ಕೆ ಶಾಂತಿ ಸಿಗುವ ನಂಬಿಕೆ ಹಿಂದೂ ಧರ್ಮದಲ್ಲಿದೆ. ಹಾಗಾಗಿ ಸತ್ತವರು ಅನಾಥರಾಗಬಾರದೆಂದು ಸರ್ಕಾರ ಈ ಕೆಲಸ ಮಾಡುತ್ತಿದೆ. ಪ್ರಚಾರ ಸಿಗಲಿ ಎಂದು ನಾನು ಮಾಡುತ್ತಿಲ್ಲ. ಈ ಪುಣ್ಯದ ಕಾರ್ಯದಿಂದ ಆತ್ಮತೃಪ್ತಿ ಸಿಕ್ಕಿದೆ ಎಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗೋಸಾಯ್ ಘಾಟ್‌ನಲ್ಲಿ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

ಕಳೆದ ಬಾರಿಯಂತೆ ಈ ಬಾರಿಯೂ ಕಟ್ಟುನಿಟ್ಟಾಗಿ‌ ಇದ್ದೀನಿ. ಮೂರು ದಿನಗಳ‌ ಕಟ್ಟು ನಿಟ್ಟಾಗಿ ಇರಬೇಕು ಎಂದು ಹೇಳಿದ್ದಾರೆ. ಇವತ್ತು ಅವಲಕ್ಕಿ ಬಿಟ್ಟು ಬೇರೆ ಏನು ಸೇವನೆ ಮಾಡಿಲ್ಲ. ಸತ್ತವರೆಲ್ಲರೂ ನಮ್ಮವರೇ ಎಂದು ಈ ಕಾರ್ಯ ಮಾಡುತ್ತಿದ್ದೇವೆ. ಈ ಪುಣ್ಯದ ಕೆಲಸಗಳಿಗೆ ಮಹಾತ್ಮ ಗಾಂಧೀಜಿ ನನಗೆ ಪ್ರೇರಣೆ. ಅವರಿಗೂ ಪೂಜೆ ಸಲ್ಲಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಆರ್.ಅಶೋಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ಬಲಿಯಾದ ಅನಾಥ ಮೃತ ಶವಗಳಿಗೆ ಸರ್ಕಾರದಿಂದ ಮೋಕ್ಷ

ಬೆಂಗಳೂರು ನಗರದಲ್ಲಿ 185 ಶಿಥಿಲ ಕಟ್ಟಡಗಳು: ಕಂದಾಯ ಸಚಿವ ಆರ್.ಅಶೋಕ್

Published On - 11:43 am, Mon, 4 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ