AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಸ್ವಯಂ ಸೇವಕ ಶಿಬಿರಕ್ಕೆ ಸಿದ್ದರಾಮಯ್ಯ – ಹೆಚ್.​ಡಿ. ಕುಮಾರಸ್ವಾಮಿಗೆ ಪತ್ರ ಬರೆದ ಆರ್​​ಎಸ್ಎಸ್ ಕಾರ್ಯಕರ್ತ

ಆರ್​ಎಸ್​ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಟೀಕಿಸಿದ ಹಿನ್ನಲೆ ಶಿಬಿರಕ್ಕೆ ಬರುವಂತೆ ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಪತ್ರ ಬರೆದು ಆಹ್ವಾನಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಶಿಬಿರಕ್ಕೆ ಸಿದ್ದರಾಮಯ್ಯ - ಹೆಚ್.​ಡಿ. ಕುಮಾರಸ್ವಾಮಿಗೆ ಪತ್ರ ಬರೆದ ಆರ್​​ಎಸ್ಎಸ್ ಕಾರ್ಯಕರ್ತ
ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್
TV9 Web
| Edited By: |

Updated on:Oct 13, 2021 | 1:51 PM

Share

ಮಂಡ್ಯ: ರಾಷ್ಟ್ರೀಯ ಸ್ವಯಂ ಸೇವಕ ಶಿಬಿರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೆಚ್.ಡಿ ಕುಮಾರಸ್ವಾಮಿಗೆ ಪತ್ರ ಬರೆದು ಆರ್​ಎಸ್​ಎಸ್(RSS)​ ಕಾರ್ಯಕರ್ತ ಆಹ್ವಾನಿಸಿದ್ದಾರೆ. ಮಂಡ್ಯದ ಮದ್ದೂರು ತಾಲೂಕಿನ ಸೋಮನಹಳ್ಳಿ ವಿದ್ಯಾಸಂಸ್ಥೆಯಲ್ಲಿ ಅಕ್ಟೋಬರ್ 17 ರಿಂದ ಅಕ್ಟೋಬರ್ 25 ರ ವರೆಗೆ ನಡೆಯಲಿರುವ ಆರ್​ಎಸ್​ಎಸ್ ಪ್ರಾಥಮಿಕ ಶಿಕ್ಷಾ ವರ್ಗ ಶಿಬಿರಕ್ಕೆ ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಆಹ್ವಾನಿಸಿದ್ದಾರೆ.

ಆರ್​ಎಸ್​ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಟೀಕಿಸಿದ ಹಿನ್ನಲೆ ಶಿಬಿರಕ್ಕೆ ಬರುವಂತೆ ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಪತ್ರ ಬರೆದು ಆಹ್ವಾನಿಸಿದ್ದಾರೆ. ಆರ್​ಎಸ್​ಎಸ್ ಶಿಬಿರದಲ್ಲಿ ಸಂಸ್ಕಾರದ ಬಗ್ಗೆ ಹೇಳಿಕೊಡಲಾಗುತ್ತದೆ. 7 ದಿನಗಳಲ್ಲಿ ನಿಮ್ಮನ್ನು ಪರಿಪೂರ್ಣವಾಗಿ ಗಟ್ಟಿಗೊಳಿಸಿ. ಈ ದೇಶಕ್ಕೆ ಹಾಗೂ ಸಮಾಜಕ್ಕೆ ಆರ್​ಎಸ್​ಎಸ್ ಅರ್ಪಣೆ ಮಾಡುತ್ತದೆ. ಶಿಬಿರಕ್ಕೆ ಬರುವಾಗ ಬುಡುಬುಡುಕೆ ಬುಂಡೇದಾಸನ ರೀತಿ ಕೈಬೀಸಿಕೊಂಡು ಬರಬೇಡಿ. ತಟ್ಟೆ, ಲೋಟ, ಬೆಡ್ ಶೀಟ್, ಜಮಕಾನ್, ಎರಡೂ ಜೊತೆ ಬಟ್ಟೆ ತೆಗೆದುಕೊಂಡು ಬನ್ನಿ ಎಂದು ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಹೇಳಿದ್ದಾರೆ.

ಆರ್​ಎಸ್​ಎಸ್ ಗಣವೇಷದಲ್ಲಿ ಶಿಬಿರಕ್ಕೆ ಬರಬೇಕು. ಶಿಬಿರದಲ್ಲಿ ಪಾಲ್ಗೊಂಡ ಬಳಿಕ ಆರ್​ಎಸ್​ಎಸ್ ಬಗ್ಗೆ ಮಾತನಾಡಿ ಎಂದು ಮಂಡ್ಯದಲ್ಲಿ ನಡೆಯಲಿರುವ ಆರ್​ಎಸ್​ಎಸ್ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಮಾಜಿ ಸಿಎಂಗಳಿಗೆ ಆರ್​ಎಸ್​ಎಸ್ ಕಾರ್ಯಕರ್ತ ಅಂಚೆ‌ ಪತ್ರ ಪೋಸ್ಟ್ ಮಾಡಿದ್ದಾರೆ.

letter

ಅಂಚೆ‌ ಪತ್ರ

ಇದನ್ನೂ ಓದಿ: ಬಿಎಸ್‌ವೈ ಅಧಿಕಾರ ಕಳೆದುಕೊಳ್ಳಲು ಆರ್​ಎಸ್​ಎಸ್​​ ಕಾರಣ; ಆರ್​ಎಸ್​ಎಸ್ ಬಗ್ಗೆ ನಿಜ ಏನೆಂದು ಜನರೇ ಚರ್ಚೆ ಮಾಡಲಿ: ಹೆಚ್‌ಡಿಕೆ

ನಾನು ಆರ್​ಎಸ್​ಎಸ್ ಹೊಗಳಿದ್ದೇನೆ ಎನ್ನುವುದು ಶುದ್ಧ ಸುಳ್ಳು, ನನಗೂ ಆರ್​ಎಸ್​ಎಸ್​ಗೂ ಸಂಬಂಧವಿಲ್ಲ: ಹೆಚ್​ಡಿ ದೇವೇಗೌಡ

Published On - 12:50 pm, Wed, 13 October 21

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ