AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಸ್ವಯಂ ಸೇವಕ ಶಿಬಿರಕ್ಕೆ ಸಿದ್ದರಾಮಯ್ಯ – ಹೆಚ್.​ಡಿ. ಕುಮಾರಸ್ವಾಮಿಗೆ ಪತ್ರ ಬರೆದ ಆರ್​​ಎಸ್ಎಸ್ ಕಾರ್ಯಕರ್ತ

ಆರ್​ಎಸ್​ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಟೀಕಿಸಿದ ಹಿನ್ನಲೆ ಶಿಬಿರಕ್ಕೆ ಬರುವಂತೆ ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಪತ್ರ ಬರೆದು ಆಹ್ವಾನಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಶಿಬಿರಕ್ಕೆ ಸಿದ್ದರಾಮಯ್ಯ - ಹೆಚ್.​ಡಿ. ಕುಮಾರಸ್ವಾಮಿಗೆ ಪತ್ರ ಬರೆದ ಆರ್​​ಎಸ್ಎಸ್ ಕಾರ್ಯಕರ್ತ
ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್
TV9 Web
| Edited By: |

Updated on:Oct 13, 2021 | 1:51 PM

Share

ಮಂಡ್ಯ: ರಾಷ್ಟ್ರೀಯ ಸ್ವಯಂ ಸೇವಕ ಶಿಬಿರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೆಚ್.ಡಿ ಕುಮಾರಸ್ವಾಮಿಗೆ ಪತ್ರ ಬರೆದು ಆರ್​ಎಸ್​ಎಸ್(RSS)​ ಕಾರ್ಯಕರ್ತ ಆಹ್ವಾನಿಸಿದ್ದಾರೆ. ಮಂಡ್ಯದ ಮದ್ದೂರು ತಾಲೂಕಿನ ಸೋಮನಹಳ್ಳಿ ವಿದ್ಯಾಸಂಸ್ಥೆಯಲ್ಲಿ ಅಕ್ಟೋಬರ್ 17 ರಿಂದ ಅಕ್ಟೋಬರ್ 25 ರ ವರೆಗೆ ನಡೆಯಲಿರುವ ಆರ್​ಎಸ್​ಎಸ್ ಪ್ರಾಥಮಿಕ ಶಿಕ್ಷಾ ವರ್ಗ ಶಿಬಿರಕ್ಕೆ ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಆಹ್ವಾನಿಸಿದ್ದಾರೆ.

ಆರ್​ಎಸ್​ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಟೀಕಿಸಿದ ಹಿನ್ನಲೆ ಶಿಬಿರಕ್ಕೆ ಬರುವಂತೆ ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಪತ್ರ ಬರೆದು ಆಹ್ವಾನಿಸಿದ್ದಾರೆ. ಆರ್​ಎಸ್​ಎಸ್ ಶಿಬಿರದಲ್ಲಿ ಸಂಸ್ಕಾರದ ಬಗ್ಗೆ ಹೇಳಿಕೊಡಲಾಗುತ್ತದೆ. 7 ದಿನಗಳಲ್ಲಿ ನಿಮ್ಮನ್ನು ಪರಿಪೂರ್ಣವಾಗಿ ಗಟ್ಟಿಗೊಳಿಸಿ. ಈ ದೇಶಕ್ಕೆ ಹಾಗೂ ಸಮಾಜಕ್ಕೆ ಆರ್​ಎಸ್​ಎಸ್ ಅರ್ಪಣೆ ಮಾಡುತ್ತದೆ. ಶಿಬಿರಕ್ಕೆ ಬರುವಾಗ ಬುಡುಬುಡುಕೆ ಬುಂಡೇದಾಸನ ರೀತಿ ಕೈಬೀಸಿಕೊಂಡು ಬರಬೇಡಿ. ತಟ್ಟೆ, ಲೋಟ, ಬೆಡ್ ಶೀಟ್, ಜಮಕಾನ್, ಎರಡೂ ಜೊತೆ ಬಟ್ಟೆ ತೆಗೆದುಕೊಂಡು ಬನ್ನಿ ಎಂದು ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಹೇಳಿದ್ದಾರೆ.

ಆರ್​ಎಸ್​ಎಸ್ ಗಣವೇಷದಲ್ಲಿ ಶಿಬಿರಕ್ಕೆ ಬರಬೇಕು. ಶಿಬಿರದಲ್ಲಿ ಪಾಲ್ಗೊಂಡ ಬಳಿಕ ಆರ್​ಎಸ್​ಎಸ್ ಬಗ್ಗೆ ಮಾತನಾಡಿ ಎಂದು ಮಂಡ್ಯದಲ್ಲಿ ನಡೆಯಲಿರುವ ಆರ್​ಎಸ್​ಎಸ್ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಮಾಜಿ ಸಿಎಂಗಳಿಗೆ ಆರ್​ಎಸ್​ಎಸ್ ಕಾರ್ಯಕರ್ತ ಅಂಚೆ‌ ಪತ್ರ ಪೋಸ್ಟ್ ಮಾಡಿದ್ದಾರೆ.

letter

ಅಂಚೆ‌ ಪತ್ರ

ಇದನ್ನೂ ಓದಿ: ಬಿಎಸ್‌ವೈ ಅಧಿಕಾರ ಕಳೆದುಕೊಳ್ಳಲು ಆರ್​ಎಸ್​ಎಸ್​​ ಕಾರಣ; ಆರ್​ಎಸ್​ಎಸ್ ಬಗ್ಗೆ ನಿಜ ಏನೆಂದು ಜನರೇ ಚರ್ಚೆ ಮಾಡಲಿ: ಹೆಚ್‌ಡಿಕೆ

ನಾನು ಆರ್​ಎಸ್​ಎಸ್ ಹೊಗಳಿದ್ದೇನೆ ಎನ್ನುವುದು ಶುದ್ಧ ಸುಳ್ಳು, ನನಗೂ ಆರ್​ಎಸ್​ಎಸ್​ಗೂ ಸಂಬಂಧವಿಲ್ಲ: ಹೆಚ್​ಡಿ ದೇವೇಗೌಡ

Published On - 12:50 pm, Wed, 13 October 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ