AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTO ಅಧಿಕಾರಿಗಳಲ್ಲ, ಜೀಪ್ ಚಾಲಕನಿಂದಲೇ ತಪಾಸಣೆ: ಲಂಚಕ್ಕೆ ಬೇಡಿಕೆ ಇಟ್ಟ ಚಾಲಕ ಸೇರಿ ಮೂವರ ವಿರುದ್ಧ ದೂರು

ಆರ್ಟಿಒ ಅಧಿಕಾರಿಗಳ ಜೀಪ್ ಚಾಲಕ ತಾನೇ ಅಧಿಕಾರಿ ಎಂಬಂತೆ ವಾಹನಗಳ ತಪಾಸಣೆ ಮಾಡುತ್ತಿದ್ದನಂತೆ. ಅದೇ ರೀತಿ ಕೆಲ ದಿನಗಳ ಹಿಂದೆ ಕೂಡ ಟಿಪ್ಪರ್ ಲಾರಿ ತಡೆದು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.

RTO ಅಧಿಕಾರಿಗಳಲ್ಲ, ಜೀಪ್ ಚಾಲಕನಿಂದಲೇ ತಪಾಸಣೆ: ಲಂಚಕ್ಕೆ ಬೇಡಿಕೆ ಇಟ್ಟ ಚಾಲಕ ಸೇರಿ ಮೂವರ ವಿರುದ್ಧ ದೂರು
ಟಿಪ್ಪರ್ ಲಾರಿ ಚಾಲಕ ಕೃಷ್ಣ ಮತ್ತು ಸಹಾಯಕ್ಕೆ ಬಂದ ವ್ಯಕ್ತಿ
TV9 Web
| Edited By: |

Updated on:Sep 22, 2021 | 9:31 AM

Share

ಮಂಡ್ಯ: ಆರ್ಟಿಒ ಅಧಿಕಾರಿಗಳಿಲ್ಲದಿದ್ರೂ ಅವರ ಜೀಪ್ ಚಾಲಕ(RTO Jeep Driver) ವಾಹನಗಳ ತಪಾಸಣೆ ಮಾಡಿ ಲಂಚಕ್ಕೆ(Bribe) ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆರ್ಟಿಒ ಅಧಿಕಾರಿಗಳ ಜೀಪ್ ಚಾಲಕ ಇಂತಹದೊಂದು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ.

ಆರ್ಟಿಒ ಅಧಿಕಾರಿಗಳ ಜೀಪ್ ಚಾಲಕ ತಾನೇ ಅಧಿಕಾರಿ ಎಂಬಂತೆ ವಾಹನಗಳ ತಪಾಸಣೆ ಮಾಡುತ್ತಿದ್ದನಂತೆ. ಅದೇ ರೀತಿ ಕೆಲ ದಿನಗಳ ಹಿಂದೆ ಕೂಡ ಟಿಪ್ಪರ್ ಲಾರಿ ತಡೆದು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಜೀಪ್ ಚಾಲಕ ನಾಗರಾಜು ಟಿಪ್ಪರ್ ಚಾಲಕ ಕೃಷ್ಣನ ಬಳಿ 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆದ್ರೆ ಈ ವೇಳೆ ಲಂಚ ನೀಡುವುದಕ್ಕೆ ಟಿಪ್ಪರ್ ಚಾಲಕ ಕೃಷ್ಣ ನಿರಾಕರಿಸಿದ್ದ. ಹೀಗಾಗಿ ಜೀಪ್ ಚಾಲಕ ನಾಗರಾಜ್ ಟಿಪ್ಪರ್ ವಶಕ್ಕೆ ಪಡೆದಿದ್ದಾರೆ.

ವಾಹನ ಬಿಡಬೇಕಾದ್ರೆ 6 ಸಾವಿರ ಲಂಚ ನೀಡಬೇಕೆಂದು ಟಿಪ್ಪರ್ ಚಾಲಕನಿಗೆ ಜೀಪ್ ಚಾಲಕ ತಿಳಿಸಿದ್ದಾನೆ. ಈ ವೇಳೆ ಟಿಪ್ಪರ್ ಚಾಲಕ ಕೃಷ್ಣ ಮೂರು ಸಾವಿರ ಕೊಡ್ತೀನಿ ಎಂದು ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ಕೋಟ್​ನಲ್ಲಿ ಆರ್​ಟಿಒ ಅಧಿಕಾರಿ ಕುಳಿತಿದ್ದನ್ನು ನೋಡಿಕೊಂಡು ಬರುತ್ತಿದ್ದ ವ್ಯಕ್ತಿ ಮಧ್ಯ ಪ್ರವೇಶಿಸಿ ಅಧಿಕಾರಿ ಇಲ್ಲದೆ ಚಾಲಕನಾಗಿ ನೀವ್ಯಾಕೆ ತಪಾಸಣೆ ಮಾಡ್ತಿದ್ದೀರಿ ಎಂದು ಟಿಪ್ಪರ್ ಚಾಲಕನ ಸಹಾಯಕ್ಕೆ ಬಂದ ವ್ಯಕ್ತಿ ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ತಬ್ಬಿಬ್ಬಾದ ಆರ್ಟಿಒ ಚಾಲಕ ಮೊಬೈಲ್ನಲ್ಲಿ ವಿಡಿಯೋ ಮಾಡ್ತಿರೋದನ್ನ ನೋಡಿ ಕೃಷ್ಣನ ಲಾರಿ ಬಿಟ್ಟು ಅಲ್ಲಿಂದ ಹೊರಟು ಹೋಗಿದ್ದಾರೆ.

ನಂತರ ಸ್ವಲ್ಪ ಸಮಯ ಬಿಟ್ಟು ಟಿಪ್ಪರ್ ಲಾರಿಯನ್ನ ವಶಕ್ಕೆ ಪಡೆದು ಪೊಲೀಸ್ ಠಾಣೆ ಮುಂದೆ ತಂದು ನಿಲ್ಲಿಸಿದ್ದಾರೆ. ನಂತರ ಸ್ಥಳಕ್ಕೆ ಬಂದು ತಪಾಸಣೆ ನಡೆಸಿದ್ದಾಗಿ ಇನ್ಸ್‌ಪೆಕ್ಟರ್‌ ವರದಿ ಬರೆದಿದ್ದಾರೆ. ಹೀಗಾಗಿ ಟಿಪ್ಪರ್ ಚಾಲಕ, ಆರ್ಟಿಓ ಜೀಪ್ ಚಾಲಕ ನಾಗರಾಜ್ ಸೇರಿ ಮೂವರ ವಿರುದ್ಧ ಮಳವಳ್ಳಿ ಟೌನ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಕೋಲಾರ: ರೂಬಿಕ್ಸ್ ಕ್ಯೂಬ್​ನಲ್ಲಿ ಸಾಧನೆಯ ದಾಖಲೆ ಬರೆದ ಬಾಲಕಿ; 14ನೇ ವಯಸ್ಸಿಗೆ 600 ಮಕ್ಕಳಿಗೆ ಶಿಕ್ಷಕಿ

Published On - 9:09 am, Wed, 22 September 21

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!