AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ; ಎಲ್ಲೆಡೆ ಸಾವರ್ಕರ್​ ಬ್ಯಾನರ್​ ಅಳವಡಿಕೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು(ಡಿ.1) ಹನುಮ ಮಾಲಾಧಾರಿಗಳು ಸಂಕೀರ್ತನಾ ಯಾತ್ರೆ ಕೈಗೊಂಡಿದ್ದಾರೆ. ಬೆಳಗ್ಗೆ 10.30ಕ್ಕೆ ನಿಮಿಷಾಂಬ ದೇಗುಲದಿಂದ ಕೋಟೆ ಆಂಜನೇಯ ದೇಗುಲದವರೆಗೆ ನಡೆಯುವ ಸಂಕೀರ್ತನಾ ಯಾತ್ರೆಯಲ್ಲಿನ 10,000ಕ್ಕೂ ಹೆಚ್ಚು ಹನುಮ ಮಾಲಾಧಾರಿಗಳು ಭಾಗಿಯಾಗುವ ನಿರೀಕ್ಷಿಸಲಾಗಿದೆ.

ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ; ಎಲ್ಲೆಡೆ ಸಾವರ್ಕರ್​ ಬ್ಯಾನರ್​ ಅಳವಡಿಕೆ
ಮಂಡ್ಯ
TV9 Web
| Edited By: |

Updated on:Dec 04, 2022 | 11:37 AM

Share

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು(ಡಿ.1) ಹನುಮ ಮಾಲಾಧಾರಿಗಳು ಸಂಕೀರ್ತನಾ ಯಾತ್ರೆಯನ್ನು ಬೆಳಿಗ್ಗೆ 10.30 ಗಂಟೆಯಿಂದ ನಿಮಿಷಾಂಬ ದೇವಾಲಯದಿಂದ ಜಾಮಿಯಾ ಮಸೀದಿ ವೃತ್ತದ ಮೂಲಕ ಕೋಟೆ ಆಂಜನೇಯ ಸ್ವಾಮಿ ದೇವಾಲಯ ತಲುಪಲಿರುವ ಯಾತ್ರೆಯಲ್ಲಿ ಸುಮಾರು 10000 ಹನುಮ ಮಾಲಾಧಾರಿಗಳು ಭಾಗಿಯಾಗುವ ಸಾಧ್ಯತೆಯಿದೆ. ಇನ್ನು ಯಾತ್ರೆ ಹಿನ್ನೆಲೆ ಜಾಮಿಯಾ ಮಸೀದಿ ಬಳಿ ಬಿಗಿ ಪೊಲೀಸ್​ ಭದ್ರತೆ ಮಾಡಲಾಗಿದ್ದು, ಜಿಲ್ಲಾಡಳಿತ ನಿನ್ನೆ ಸಂಜೆ 5 ಗಂಟೆಯಿಂದಲೇ ಶ್ರೀರಂಗಪಟ್ಟಣದಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ಇಂದು ಹನುಮ ಮಾಲಾದಾರಿಗಳಿಂದ ಸಂಕೀರ್ತನಾ ಯಾತ್ರೆ ಹಿನ್ನಲೆ, ಜಾಮಿಯಾ ಮಸೀದಿ ಬಳಿ ಪೊಲೀಸ್ ಸರ್ಪಗಾವಲು, 25ಕ್ಕೂ ಹೆಚ್ಚು ಸಿಸಿ ಕ್ಯಾಮರಾ, ಒಂದು ಸಾವಿರಕ್ಕು ಅಧಿಕ ಪೊಲೀಸರ ನೀಯೋಜನೆ, ಬ್ಯಾರಿಕೇಡ್ ಅಳವಡಿಸಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಂಕೀರ್ತನಾ ಯಾತ್ರೆಯಲ್ಲಿ ರಾರಾಜಿಸುತ್ತಿರುವ ಸಾವರ್ಕರ್​ ಫೋಟೋ, ಜಾಮಿಯಾ ಮಸೀದಿ ಪ್ರವೇಶ ದ್ವಾರದ ಕಟ್ಟೆಗೆ ಸಾವರ್ಕರ್ ಬ್ಯಾನರ್, ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಜಾಮಿಯಾ ಮಸೀದಿ ಬಳಿ ಸಾವರ್ಕರ್ ಬ್ಯಾನರ್ ಅಳವಡಿಕೆ ಮಾಡಲಾಗಿದ್ದು, ಶ್ರೀರಂಗಪಟ್ಟಣದಾದ್ಯಂತ ಕೇಸರಿ ಬಾವುಟ, ಹನುಮನ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ:ಕೊಪ್ಪಳದಲ್ಲಿ ಭಾವೈಕ್ಯತೆ ಸಂದೇಶ: ಪುರಾತನ ಆಂಜನೇಯ ವಿಗ್ರಹಕ್ಕೆ ಮುಸ್ಲಿಂ ವ್ಯಕ್ತಿ ಭಕ್ತಿಯಿಂದ ಪೂಜೆ

ಈ ಸಮಾಜ ಹಾಗೂ ರಾಷ್ಟ್ರವನ್ನು ಉನ್ನತಿಗೆ ಕೊಂಡೊಯ್ಯುವ ಪ್ರತಿಯೊಂದು ಕಾರ್ಯವು ಈ ದೇಶದ ಇತಿಹಾಸವಾಗಿ ದಾಖಲಿಸ್ಪಡುತ್ತದೆ. ಆ ಇತಿಹಾಸ ಮುಂದೆ ಧರ್ಮವಾಗುತ್ತದೆ ನಾಡಮುಂದೆ ಸಾವು ಕೂಡ ಸಣ್ಣದು ವಿನಾಯಕ ದಾಮೋದರ ಸಾವರ್ಕರ್​. ಈ ರೀತಿಯ ಬರಹವುಳ್ಳ ಬ್ಯಾನರ್ ಅಳವಡಿಕೆ ಮಾಡಿದ್ದಾರೆ. ವಿವಾದಿತ ಪ್ರದೇಶಕ್ಕೆ ಮಂಡ್ಯ ಎಸ್​.ಪಿ ಎನ್​.ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

Published On - 11:35 am, Sun, 4 December 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ