AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯಕ್ರಮದ ಬಗ್ಗೆ ಲೇಖನ ಬರೆದಿದ್ದ ಶಿಕ್ಷಣ ತಜ್ಞ ಡಾ.ಸುಧಾಕರ್ ಹೊಸಳ್ಳಿಗೆ ಜೀವ ಬೆದರಿಕೆ

ಶಿಕ್ಷಣ ತಜ್ಞ ಡಾ.ಸುಧಾಕರ್ ಹೊಸಳ್ಳಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾಜ್ಯ ಒಕ್ಕಲಿಗ ಸಂಘದ ಪರಾಜಿತ ಅಭ್ಯರ್ಥಿ ಸತೀಶ್​ ಗೌಡ ಬೀಡನಹಳ್ಳಿ ಎಂಬುವವರು ಕೊಲೆ ಬೆದರಿಕೆ ಹಾಕಿದ್ದಾರೆ.

ಪಠ್ಯಕ್ರಮದ ಬಗ್ಗೆ ಲೇಖನ ಬರೆದಿದ್ದ ಶಿಕ್ಷಣ ತಜ್ಞ ಡಾ.ಸುಧಾಕರ್ ಹೊಸಳ್ಳಿಗೆ ಜೀವ ಬೆದರಿಕೆ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Jun 01, 2022 | 4:09 PM

Share

ಮಂಡ್ಯ: ನೂತನ ಪಠ್ಯಕ್ರಮದ ಕುರಿತು ಲೇಖನ ಬರೆದಿದ್ದ ಶಿಕ್ಷಣ ತಜ್ಞ ಡಾ.ಸುಧಾಕರ್ ಹೊಸಳ್ಳಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾಜ್ಯ ಒಕ್ಕಲಿಗ ಸಂಘದ ಪರಾಜಿತ ಅಭ್ಯರ್ಥಿ ಸತೀಶ್​ ಗೌಡ ಬೀಡನಹಳ್ಳಿ ಎಂಬುವವರು ಕೊಲೆ ಬೆದರಿಕೆ ಹಾಕಿ, ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರನ್ನ (Rohith Chakrathirtha) ಸಮರ್ಥಿಸಿಕೊಳ್ತಿದ್ದೀರಾ ಎಂದು ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಮಂಡ್ಯ (Mandya) ನಗರದಲ್ಲಿ ಸುಧಾಕರ್ ಹೊಸಳ್ಳಿ ಪತ್ರಿಕಾಗೋಷ್ಠಿ ನಡೆಸಿದರು. ಬಳಿಕ ಎಸ್​ಪಿಗೆ ದೂರು ನೀಡಿದದ್ದಾರೆ. ನನ್ನ ಜೀವಕ್ಕೆ ಏನಾದರೂ ಕುತ್ತು ಬಂದರೆ ಸತೀಶ್ ಗೌಡ ಕಾರಣವೆಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು: ಬೆಂಗಳೂರಿನಲ್ಲಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಾಗಿದೆ. ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ಎಂಬುವವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದಂತಹ ವ್ಯಕ್ತಿ. ರಾಜ್ಯವನ್ನ ಕಾಂಗ್ರೆಸ್ಗೆ, ದೇಶವನ್ನ ಅರಬ್ಬಿಗೆ ಹೋಲಿಸಿದಂತಹ ವ್ಯಕ್ತಿ. ಅಂಥವರ ಕೈಗೆ ಪಠ್ಯ ಪುಸ್ತಕ ಪರಿಷ್ಕರಣಾ ಅಧಿಕಾರ ಇರುವುದು ಸರಿಯಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ದೂರು ನೀಡಿದ್ದಾರೆ.

ಇದನ್ನೂ ಓದಿ
Image
May GST Collection: ಮೇ  ತಿಂಗಳಲ್ಲಿ ₹1.40 ಲಕ್ಷ ಕೋಟಿ ಜಿಎಸ್‌ಟಿ ಆದಾಯ ಸಂಗ್ರಹ; ಅಂಕಿ ಅಂಶ ಪ್ರಕಟಿಸಿದ ಕೇಂದ್ರ ಸರಕಾರ
Image
Karnataka Ranji Team: ರಣಜಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ
Image
ಸಿಧು ಮೂಸೆ ವಾಲಾ ಮೇಲೆ ದುಷ್ಕರ್ಮಿಗಳು 30 ಬಾರಿ ಗುಂಡು ಹಾರಿಸಿದ್ದರು; ಹತ್ಯೆಯ ಭೀಕರ ದೃಶ್ಯವನ್ನು ವಿವರಿಸಿದ ಸ್ನೇಹಿತ
Image
‘ವೀಲ್​ ಚೇರ್​ ರೋಮಿಯೋ’ ಚಿತ್ರ ನೋಡಿದ ಜಮೀರ್​ ಅಹ್ಮದ್​; ಹೊಸ ಹೀರೋಗೆ ಸನ್ಮಾನ

ಇದನ್ನೂ ಓದಿ: ಕಣ್ಣೀರು ತರಿಸಿತ್ತು ಸುಂದರ್​ ರಾಜ್ ಬದುಕಿನ ನೈಜ ಲವ್​ ಸ್ಟೋರಿ​; ಹಲವು ವರ್ಷಗಳ ಬಳಿಕ ಆ ಹುಡುಗಿ ಸಿಕ್ಕಾಗ..

ಚಪ್ಪಲಿಯಿಂದ ಹೊಡೆದು ಪ್ರತಿಭಟನೆ: ದಾವಣಗೆರೆ ನಗರದ ಪ್ರಮುಖ ಬೀದಿಗಳಲ್ಲಿ‌ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಚಕ್ರತೀರ್ಥ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾಷಾ ಪಠ್ಯ ಹಾಗೂ ಸಮಾಜ ವಿಜ್ಞಾನ ಪಠ್ಯದಲ್ಲಿ ಗಮನಾರ್ಹ ಬದಲಾವಣೆ ಮಾಡಿದ್ದು, ಮಕ್ಕಳಲ್ಲಿ ದ್ವೇಷ ಹುಟ್ಟಿಸುವ ಹಾಗೂ ಮಹಾತ್ಮರ ಬಗ್ಗೆ ತಪ್ಪು ಸಂದೇಶ ನೀಡಲಾಗುತ್ತಿದೆ. ತಕ್ಷಣ ರೋಹಿತ್ ಚಕ್ರತೀರ್ಥ ಅವರನ್ನ ವಜಾ ಮಾಡಬೇಕೆಂದು ಕರವೇ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Wed, 1 June 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!