AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 4ರಂದು ಶ್ರೀರಂಗಪಟ್ಟಣ ಚಲೋಗೆ ಹಿಂದೂ ಸಂಘಟನೆಗಳಿಂದ ಕರೆ; ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿ ನಾಡಿದ್ದು ಆಂಜನೇಯಸ್ವಾಮಿ ಮೂಲ ಮಂದಿರ ಚಲೋ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ತಹಶೀಲ್ದಾರ್ ಶ್ವೇತಾ ರವೀಂದ್ರ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜೂನ್ 4ರಂದು ಶ್ರೀರಂಗಪಟ್ಟಣ ಚಲೋಗೆ ಹಿಂದೂ ಸಂಘಟನೆಗಳಿಂದ ಕರೆ; ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ
ಜಾಮಿಯ ಮಸೀದಿ
TV9 Web
| Edited By: ಆಯೇಷಾ ಬಾನು|

Updated on:Jun 02, 2022 | 2:54 PM

Share

ಹುಬ್ಬಳ್ಳಿ: ಜೂನ್ ನಾಲ್ಕರ ಶ್ರೀರಂಗಪಟ್ಟಣ ಚಲೋಗೆ ನಮ್ಮ ಬೆಂಬಲವಿದೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಈಗಾಗಲೇ ಹಿಂದೂ ಸಂಘಟನೆಗಳು ಕರೆ ನೀಡಿರೋ ಹೋರಾಟಕ್ಕೆ ಬೆಂಬಲ ನೀಡಿದ್ದೇನೆ. ನೂರು ಜನ ನಮ್ಮ ಹಿಂದೂ ಕಾರ್ಯಕರ್ತರು ಸಹಿ ಮಾಡಿ ಕೋಟ್೯ಗೆ ಹೋಗಿದ್ದಾರೆ. ಜ್ಞಾನವಾಪಿ ಮಸೀದಿ ತರ ಸರ್ವೆ ಆಗಬೇಕು ಎನ್ನೊ ಆಗ್ರಹ ನಮ್ಮದು ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

ಕೋಟ್೯ ಏನು ಹೇಳುತ್ತೆ ನೋಡೋಣ. ಮೂಲ ಆಂಜನೇಯ ದೇವಸ್ಥಾನ ಚಲೋ‌ ಕಾರ್ಯಕ್ರಮ ಮಾಡೇ ಮಾಡ್ತೀವಿ. ಇನ್ನು ಅಜಾನ್ ವಿಚಾರವಾಗಿ ಎರಡನೇ ಹಂತದ ಹೋರಾಟ ಮಾಡ್ತಿವಿ. ಸರ್ಕಾರಕ್ಕೆ ಧಮ್ ಇದ್ರೆ ಲೌಡ್ ಸ್ಪೀಕರ್ ಕೆಳಗಿಳಿಸಲಿ. ಇಲ್ಲದೇ ಹೋದ್ರೆ ಜೂನ್ 8 ರಂದು ಬಿಜೆಪಿ ಶಾಸಕರ ಕಚೇರಿ ಎದುರು ಧರಣಿ ಕೂರುತ್ತೇವೆ. ಹತ್ತಕ್ಕೂ ಹೆಚ್ಚು ಸಂಘಟನೆಗಳು ನಮಗೆ ಬೆಂಬಲ ನೀಡಿವೆ. ನಿಮ್ಮ ಕೈಯಲ್ಲಿ ಆಗದಿದ್ದರೇ ಅಧಿಕಾರದಿಂದ ಕೆಳಗಿಳಿಯಿರಿ‌. ನಾನು ಗುಂಡು ಹೊಡೆದು 24 ಗಂಟೆಯಲ್ಲಿ ಆದೇಶ ಪಾಲನೆ ಮಾಡ್ತೀನಿ ಎಂದು ಬೊಮ್ಮಾಯಿ ಸರ್ಕಾರ ವಿರುದ್ದ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ಮೊದಲ ಬಾರಿ ಕಾಬೂಲ್‌ಗೆ ಅಧಿಕೃತ ಭೇಟಿ ನೀಡಿದ ಭಾರತ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿ ನಾಡಿದ್ದು ಆಂಜನೇಯಸ್ವಾಮಿ ಮೂಲ ಮಂದಿರ ಚಲೋ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ತಹಶೀಲ್ದಾರ್ ಶ್ವೇತಾ ರವೀಂದ್ರ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಜೂ.3ರ ಸಂಜೆ 6ರಿಂದ ಜೂನ್ 5ರ ಬೆಳಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮೆರವಣಿಗೆ, ಪ್ರತಿಭಟನೆ, ರಥಯಾತ್ರೆ ನಡೆಸದಂತೆ ನಿರ್ಬಂಧ ಹೇರಲಾಗಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆಗೆ ಕರೆ ನೀಡಿದೆ. ಮಸೀದಿಯೊಳಗೆ ನಡೆಸುತ್ತಿರುವ ಮದರಸಾ ಖಾಲಿ ಮಾಡಿಸಬೇಕು. ಅಕ್ರಮವಾಗಿ ವಾಸ ಮಾಡುತ್ತಿರುವವರ ವಿರುದ್ಧ ಕೇಸ್ ಹಾಕಬೇಕು. ಮಸೀದಿಯಲ್ಲಿ ಹನುಮ ಭಕ್ತರಿಗೆ ಪೂಜೆ ಸಲ್ಲಿಕೆಗೆ ಅವಕಾಶ ನೀಡಬೇಕು. ಸರ್ವೆಗೂ ಒತ್ತಾಯಿಸಿ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಇದನ್ನೂ ಓದಿ:  ಹರ್ಷನ ಮದುವೆ ಆಗಲು ವರುಧಿನಿ ಹೊಸ ಪ್ಲ್ಯಾನ್​; ಕೊನೇ ಕ್ಷಣದಲ್ಲಿ ವಧು ಬದಲು?

Published On - 2:54 pm, Thu, 2 June 22

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!