AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 4ರಂದು ಶ್ರೀರಂಗಪಟ್ಟಣ ಚಲೋಗೆ ಹಿಂದೂ ಸಂಘಟನೆಗಳಿಂದ ಕರೆ; ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿ ನಾಡಿದ್ದು ಆಂಜನೇಯಸ್ವಾಮಿ ಮೂಲ ಮಂದಿರ ಚಲೋ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ತಹಶೀಲ್ದಾರ್ ಶ್ವೇತಾ ರವೀಂದ್ರ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜೂನ್ 4ರಂದು ಶ್ರೀರಂಗಪಟ್ಟಣ ಚಲೋಗೆ ಹಿಂದೂ ಸಂಘಟನೆಗಳಿಂದ ಕರೆ; ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ
ಜಾಮಿಯ ಮಸೀದಿ
TV9 Web
| Edited By: |

Updated on:Jun 02, 2022 | 2:54 PM

Share

ಹುಬ್ಬಳ್ಳಿ: ಜೂನ್ ನಾಲ್ಕರ ಶ್ರೀರಂಗಪಟ್ಟಣ ಚಲೋಗೆ ನಮ್ಮ ಬೆಂಬಲವಿದೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಈಗಾಗಲೇ ಹಿಂದೂ ಸಂಘಟನೆಗಳು ಕರೆ ನೀಡಿರೋ ಹೋರಾಟಕ್ಕೆ ಬೆಂಬಲ ನೀಡಿದ್ದೇನೆ. ನೂರು ಜನ ನಮ್ಮ ಹಿಂದೂ ಕಾರ್ಯಕರ್ತರು ಸಹಿ ಮಾಡಿ ಕೋಟ್೯ಗೆ ಹೋಗಿದ್ದಾರೆ. ಜ್ಞಾನವಾಪಿ ಮಸೀದಿ ತರ ಸರ್ವೆ ಆಗಬೇಕು ಎನ್ನೊ ಆಗ್ರಹ ನಮ್ಮದು ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

ಕೋಟ್೯ ಏನು ಹೇಳುತ್ತೆ ನೋಡೋಣ. ಮೂಲ ಆಂಜನೇಯ ದೇವಸ್ಥಾನ ಚಲೋ‌ ಕಾರ್ಯಕ್ರಮ ಮಾಡೇ ಮಾಡ್ತೀವಿ. ಇನ್ನು ಅಜಾನ್ ವಿಚಾರವಾಗಿ ಎರಡನೇ ಹಂತದ ಹೋರಾಟ ಮಾಡ್ತಿವಿ. ಸರ್ಕಾರಕ್ಕೆ ಧಮ್ ಇದ್ರೆ ಲೌಡ್ ಸ್ಪೀಕರ್ ಕೆಳಗಿಳಿಸಲಿ. ಇಲ್ಲದೇ ಹೋದ್ರೆ ಜೂನ್ 8 ರಂದು ಬಿಜೆಪಿ ಶಾಸಕರ ಕಚೇರಿ ಎದುರು ಧರಣಿ ಕೂರುತ್ತೇವೆ. ಹತ್ತಕ್ಕೂ ಹೆಚ್ಚು ಸಂಘಟನೆಗಳು ನಮಗೆ ಬೆಂಬಲ ನೀಡಿವೆ. ನಿಮ್ಮ ಕೈಯಲ್ಲಿ ಆಗದಿದ್ದರೇ ಅಧಿಕಾರದಿಂದ ಕೆಳಗಿಳಿಯಿರಿ‌. ನಾನು ಗುಂಡು ಹೊಡೆದು 24 ಗಂಟೆಯಲ್ಲಿ ಆದೇಶ ಪಾಲನೆ ಮಾಡ್ತೀನಿ ಎಂದು ಬೊಮ್ಮಾಯಿ ಸರ್ಕಾರ ವಿರುದ್ದ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ಮೊದಲ ಬಾರಿ ಕಾಬೂಲ್‌ಗೆ ಅಧಿಕೃತ ಭೇಟಿ ನೀಡಿದ ಭಾರತ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿ ನಾಡಿದ್ದು ಆಂಜನೇಯಸ್ವಾಮಿ ಮೂಲ ಮಂದಿರ ಚಲೋ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ತಹಶೀಲ್ದಾರ್ ಶ್ವೇತಾ ರವೀಂದ್ರ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಜೂ.3ರ ಸಂಜೆ 6ರಿಂದ ಜೂನ್ 5ರ ಬೆಳಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮೆರವಣಿಗೆ, ಪ್ರತಿಭಟನೆ, ರಥಯಾತ್ರೆ ನಡೆಸದಂತೆ ನಿರ್ಬಂಧ ಹೇರಲಾಗಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆಗೆ ಕರೆ ನೀಡಿದೆ. ಮಸೀದಿಯೊಳಗೆ ನಡೆಸುತ್ತಿರುವ ಮದರಸಾ ಖಾಲಿ ಮಾಡಿಸಬೇಕು. ಅಕ್ರಮವಾಗಿ ವಾಸ ಮಾಡುತ್ತಿರುವವರ ವಿರುದ್ಧ ಕೇಸ್ ಹಾಕಬೇಕು. ಮಸೀದಿಯಲ್ಲಿ ಹನುಮ ಭಕ್ತರಿಗೆ ಪೂಜೆ ಸಲ್ಲಿಕೆಗೆ ಅವಕಾಶ ನೀಡಬೇಕು. ಸರ್ವೆಗೂ ಒತ್ತಾಯಿಸಿ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಇದನ್ನೂ ಓದಿ:  ಹರ್ಷನ ಮದುವೆ ಆಗಲು ವರುಧಿನಿ ಹೊಸ ಪ್ಲ್ಯಾನ್​; ಕೊನೇ ಕ್ಷಣದಲ್ಲಿ ವಧು ಬದಲು?

Published On - 2:54 pm, Thu, 2 June 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್