AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಡಿಸಿ, ಎಸ್​ಪಿ ಮುಂದೆಯೇ ರೌಡಿಶೀಟರ್​ಗೆ ಸನ್ಮಾನ ಮಾಡಿದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ

ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮಂಡ್ಯ ಜಿಲ್ಲಾಧಿಕಾರಿ, ಎಸ್​ಪಿ ಎದುರೇ ರೌಡಿಶೀಟರ್​ಗೆ ಸನ್ಮಾನ ಮಾಡಿದ್ದಾರೆ. ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಮಾಡುವ ಪೊಲೀಸರ ಎದುರೇ ಒಬ್ಬ ರೌಡಿಶೀಟರ್​ಗೆ ಸನ್ಮಾನ ಮಾಡುತ್ತಾರೆ ಎಂದರೆ ಏನರ್ಥ? ಸಮಾಜಕ್ಕೆ ಈ ಶಾಸಕರು ನೀಡುತ್ತಿರುವ ಸಂದೇಶವಾದರೂ ಏನು? ಎಂಬ ಪ್ರಶ್ನೆ ಎದ್ದಿದೆ.

ಮಂಡ್ಯದಲ್ಲಿ ಡಿಸಿ, ಎಸ್​ಪಿ ಮುಂದೆಯೇ ರೌಡಿಶೀಟರ್​ಗೆ ಸನ್ಮಾನ ಮಾಡಿದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ
ಡಿಸಿ, ಎಸ್​ಪಿ ಮುಂದೆಯೇ ರೌಡಿಶೀಟರ್​ಗೆ ಅಧಿಕಾರಿಗಳ ಕೈಯಿಂದ ಸನ್ಮಾನ ಮಾಡಿಸಿದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ
ಪ್ರಶಾಂತ್​ ಬಿ.
| Edited By: Rakesh Nayak Manchi|

Updated on:Oct 19, 2023 | 10:33 AM

Share

ಮಂಡ್ಯ, ಅ.19: ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ರಮೇಶ ಬಂಡಿಸಿದ್ದೇಗೌಡ (Ramesha Bandisiddegowda) ಅವರು ಮಂಡ್ಯ ಜಿಲ್ಲಾಧಿಕಾರಿ, ಎಸ್​ಪಿ ಎದುರೇ ಅಧಿಕಾರಿಗಳ ಕೈಯಿಂದ ರೌಡಿಶೀಟರ್​ಗೆ ಸನ್ಮಾನ ಮಾಡಿಸಿದ್ದಾರೆ. ಸನ್ಮಾನ ಸ್ವೀಕರಿಸಿದ ನಂತರ ರೌಡಿಶೀಟರ್, ಶಾಸಕರ ಕಾಲಿಗೆ ಬಿದ್ದು ನಮಸ್ಕರಿಸಿದ ನಂತರ ಶಾಸಕ ರಮೇಶ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್​.ಚಲುವರಾಯಸ್ವಾಮಿ (N.Chaluvarayaswamy) ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾನೆ.

ಕೆಆರ್​ಎಸ್​​ನಲ್ಲಿ ನೃತ್ಯಕಾರಂಜಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯನೂ ಆಗಿರುವ ರೌಡಿ ಶೀಟರ್ ದೇವರಾಜು ಅಲಿಯಾಸ್ ಬುಲ್ಲಿ ಎಂಬಾತನಿಗೆ ಶಾಸಕ ರಮೇಶ್ ಅವರು ಅಧಿಕಾರಿಗಳ ಕೈಯಿಂದ ಸನ್ಮಾನಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮುಜುಗರ ಉಂಟಾಗುವಂತೆ ಮಾಡಿದ್ದಾರೆ.

ಹಲವಾರು ಅಪರಾಧಿ ಕೃತ್ಯದಲ್ಲಿ ಭಾಗಿಯಾಗಿರುವ ದೇವರಾಜು, ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲದಿದ್ದರೂ ವೇದಿಕೆಗೆ ಕರೆದು ಗೌರವ ಸಮರ್ಪಣೆ ಮಾಡಲಾಗಿದೆ. ಶಾಸಕರ ಸೂಚನೆ ಮೇರೆಗೆ ಕಾವೇರಿ ನೀರಾವರಿ ನಿಗಮದಿಂದ ಗೌರವ ಸಮರ್ಪಣೆ ಮಾಡಲಾಗಿದೆ.

ಇದನ್ನೂ ಓದಿ: ಒಕ್ಕಲಿಗರ ಬಗ್ಗೆ ಸಾಹಿತಿ ಪ್ರೊ. ಭಗವಾನ್ ಅವಹೇಳನಕಾರಿ ಹೇಳಿಕೆ: ಮಂಡ್ಯ ಬಿಜೆಪಿ ಕಾರ್ಯಕರ್ತರಿಂದ ಎಸ್​ಪಿಗೆ ದೂರು

ರೌಡಿ ಶೀಟರ್​​ಗೆ ಸನ್ಮಾನಿಸಿದ ವೇದಿಕೆಯಲ್ಲಿ ಮಾತನಾಡುತ್ತಾ ತಮ್ಮನ್ನೇ ಉದಾಹರಣೆಯನ್ನಾಗಿಕೊಂಡು ಸಮರ್ಥನೆ ಮಾಡಿಕೊಂಡ ಶಾಸಕ ರಮೇಶ್ ಬಂಡಿಸಿದ್ದೇಗೌಡ, ತನ್ನ ಮೇಲೂ ಸಿಬಿಐ ಕೇಸ್ ಇದೆ. ಹಾಗಾದರೆ ನಾನೂ ಕಾರ್ಯಕ್ರಮಕ್ಕೆ ಹೋಗಬಾರದು. ಆಪಾದನೆ ಇದ್ದ ಮಾತ್ರಕ್ಕೆ ಅಪರಾಧಿ ಅಲ್ಲ ಎಂದು ಹೇಳಿ ಶಿಷ್ಯನ ಪರ ಬ್ಯಾಟಿಂಗ್ ಮಾಡಿದ್ದಾರೆ.

ಐದು ತಿಂಗಳ ಹಿಂದೆ ನಡೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಸಮಾಜ ಸೇವೆ ಹೆಸರಿನಲ್ಲಿ ರೌಡಿಶೀಟರ್​ಗಳು ರಾಜಕೀಯಕ್ಕೆ ಎಂಟ್ರಿಕೊಡಲು ಆರಂಭಿಸಿದ್ದರು. ರೌಡಿಶೀಟರ್​ಗಳಾದ ಸೈಲೆಂಟ್ ಸುನಿಲ, ಬೆತ್ತನಗೆರೆ ಶಂಕರ, ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಅನೇಕರು ಬಿಜೆಪಿ ಸೇರ್ಪಡೆಯಾಗುವ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಮಂಡ್ಯಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ ಅವರನ್ನು ರೌಡಿಶೀಟರ್ ಫೈಟರ್ ರವಿ ಸ್ವಾಗತಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.

ಅಷ್ಟೇ ಅಲ್ಲದೆ, ಮಂಡ್ಯದಲ್ಲಿ ಜೆಡಿಎಸ್ ಶಾಸಕ ಡಿಸಿ ತಮ್ಮಣ್ಣ ಅವರು ಚುನಾವಣೆ ಸಂದರ್ಭದಲ್ಲಿ ವರುಣ್ ಗೌಡ ಅಲಿಯಾಸ್ 202 ಹಾಗೂ ಪ್ರಶಾಂತ್ ಅಲಿಯಾಸ್ ಕುಳ್ಳಿ ಸೇರಿದಂತೆ ರೌಡಿಶೀಟರ್​ಗಳ ಗ್ಯಾಂಗ್​ ಅನ್ನೇ ರೆಡ್ ಕಾರ್ಪೆಟ್ ಹಾಕಿ ತಮ್ಮ ಪಕ್ಷಕ್ಕೆ ಸ್ವಾಗತಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 am, Thu, 19 October 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ