AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣ: ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ

ಹನುಮ ಸಂಕೀರ್ತನಾ ಯಾತ್ರೆಗೆ ವಿರೋಧ ವ್ಯಕ್ತಪಡಿಸಿರುವ ಎಸ್‌ಡಿಪಿಐ, ಇದು ಶಾಂತಿ ಸೌಹಾರ್ದತೆ ಕದಡುವ ಯತ್ನವೆಂದು ಆರೋಪಿಸಿದೆ. ಹೀಗಾಗಿ ಸಂಕೀರ್ತನಾ ಯಾತ್ರೆಗೆ ಅನುಮತಿ ನೀಡದಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ.

ಶ್ರೀರಂಗಪಟ್ಟಣ: ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ
ಹನುಮಂತ (ಸಾಂದರ್ಭಿಕ ಚಿತ್ರ)
ಪ್ರಶಾಂತ್​ ಬಿ.
| Edited By: |

Updated on: Dec 22, 2023 | 7:12 AM

Share

ಮಂಡ್ಯ, ಡಿಸೆಂಬರ್ 22: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಮೂಡಲಬಾಗಿಲು ಬಳಿ ಜಾಮಿಯಾ ಮಸೀದಿ (Jamia Masjid) ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ (Hindu Jagarana Vedike) ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ಈ ಮಧ್ಯೆ, ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್ 24ರಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ಎಸ್​​​ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಜಾಮಿಯಾ ಮಸೀದಿ ಜಾಗದಲ್ಲಿ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ ತೊಡಲಾಗಿದೆ. ಮೂಡಲಬಾಗಿಲು ಆಂಜನೇಯಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ ಸಂಕಲ್ಪದೊಂದಿಗೆ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಯಾತ್ರೆಯಲ್ಲಿ ಸಾವಿರಾರು ಹನುಮ ಮಾಲಾಧಾರಿಗಳು ಭಾಗಿಯಾಗಲಿದ್ದಾರೆ.

ಹನುಮ ಸಂಕೀರ್ತನಾ ಯಾತ್ರೆಗೆ ವಿರೋಧ ವ್ಯಕ್ತಪಡಿಸಿರುವ ಎಸ್‌ಡಿಪಿಐ, ಇದು ಶಾಂತಿ ಸೌಹಾರ್ದತೆ ಕದಡುವ ಯತ್ನವೆಂದು ಆರೋಪಿಸಿದೆ. ಹೀಗಾಗಿ ಸಂಕೀರ್ತನಾ ಯಾತ್ರೆಗೆ ಅನುಮತಿ ನೀಡದಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ. ಯಾತ್ರೆಗೆ ಅನುಮತಿ ನೀಡಿದರೆ ಕೋಮು ಗಲಭೆ ನಡೆಯುವ ಸಾಧ್ಯತೆ ಇದೆ ಎಂದು ಎಸ್‌ಡಿಪಿಐ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಕೋಮುಸೂಕ್ಷ್ಮ ಗಂಗಾವತಿ ಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ: ಸಿಸಿಟಿವಿ ಕಣ್ಗಾವಲು, ಬಿಗಿ ಪೊಲೀಸ್ ಬಂದೋಬಸ್ತ್

ಕಳೆದ ವರ್ಷ ಯಾತ್ರೆ ವೇಳೆ ಮುಸ್ಲಿಮರ ಮನೆಗಳ ಮೇಲೆ ದಾಳಿ ನಡೆದಿತ್ತು. ಮುಸ್ಲಿಮರ ಮನೆ, ಅಂಗಡಿಗಳ ಮೇಲೆ ದಾಳಿಗೆ ಪ್ರಚೋದನೆ ನೀಡಲಾಗುತ್ತಿದೆ. ಜಾಮಿಯಾ ಮಸೀದಿ ಧ್ವಂಸಕ್ಕೆ ಹುನ್ನಾರ ನಡೆಯುತ್ತಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನೆ ನಡೆಸಲಾಗುತ್ತಿದೆ. ಮುನ್ನೆಚ್ಚರಿಕೆಯಿಂದ ಯಾತ್ರೆಗೆ ಅವಕಾಶ ನೀಡಬಾರದು ಎಂದು ಎಸ್​ಡಿಪಿಐ ಒತ್ತಾಯಿಸಿದೆ.

ಒಂದು ವೇಳೆ ಯಾತ್ರೆಗೆ ಅನುಮತಿ ನೀಡಿ, ಅದರಿಂದಾಗು ಅನಾಹುತವಾದರೆ ಸರ್ಕಾರವೇ ಹೊಣೆ ಎಂದು ಎಸ್​ಡಿಪಿಐ ಎಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?