AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣ: ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ

ಹನುಮ ಸಂಕೀರ್ತನಾ ಯಾತ್ರೆಗೆ ವಿರೋಧ ವ್ಯಕ್ತಪಡಿಸಿರುವ ಎಸ್‌ಡಿಪಿಐ, ಇದು ಶಾಂತಿ ಸೌಹಾರ್ದತೆ ಕದಡುವ ಯತ್ನವೆಂದು ಆರೋಪಿಸಿದೆ. ಹೀಗಾಗಿ ಸಂಕೀರ್ತನಾ ಯಾತ್ರೆಗೆ ಅನುಮತಿ ನೀಡದಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ.

ಶ್ರೀರಂಗಪಟ್ಟಣ: ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ
ಹನುಮಂತ (ಸಾಂದರ್ಭಿಕ ಚಿತ್ರ)
ಪ್ರಶಾಂತ್​ ಬಿ.
| Edited By: |

Updated on: Dec 22, 2023 | 7:12 AM

Share

ಮಂಡ್ಯ, ಡಿಸೆಂಬರ್ 22: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಮೂಡಲಬಾಗಿಲು ಬಳಿ ಜಾಮಿಯಾ ಮಸೀದಿ (Jamia Masjid) ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ (Hindu Jagarana Vedike) ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ಈ ಮಧ್ಯೆ, ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್ 24ರಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ಎಸ್​​​ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಜಾಮಿಯಾ ಮಸೀದಿ ಜಾಗದಲ್ಲಿ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ ತೊಡಲಾಗಿದೆ. ಮೂಡಲಬಾಗಿಲು ಆಂಜನೇಯಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ ಸಂಕಲ್ಪದೊಂದಿಗೆ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಯಾತ್ರೆಯಲ್ಲಿ ಸಾವಿರಾರು ಹನುಮ ಮಾಲಾಧಾರಿಗಳು ಭಾಗಿಯಾಗಲಿದ್ದಾರೆ.

ಹನುಮ ಸಂಕೀರ್ತನಾ ಯಾತ್ರೆಗೆ ವಿರೋಧ ವ್ಯಕ್ತಪಡಿಸಿರುವ ಎಸ್‌ಡಿಪಿಐ, ಇದು ಶಾಂತಿ ಸೌಹಾರ್ದತೆ ಕದಡುವ ಯತ್ನವೆಂದು ಆರೋಪಿಸಿದೆ. ಹೀಗಾಗಿ ಸಂಕೀರ್ತನಾ ಯಾತ್ರೆಗೆ ಅನುಮತಿ ನೀಡದಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ. ಯಾತ್ರೆಗೆ ಅನುಮತಿ ನೀಡಿದರೆ ಕೋಮು ಗಲಭೆ ನಡೆಯುವ ಸಾಧ್ಯತೆ ಇದೆ ಎಂದು ಎಸ್‌ಡಿಪಿಐ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಕೋಮುಸೂಕ್ಷ್ಮ ಗಂಗಾವತಿ ಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ: ಸಿಸಿಟಿವಿ ಕಣ್ಗಾವಲು, ಬಿಗಿ ಪೊಲೀಸ್ ಬಂದೋಬಸ್ತ್

ಕಳೆದ ವರ್ಷ ಯಾತ್ರೆ ವೇಳೆ ಮುಸ್ಲಿಮರ ಮನೆಗಳ ಮೇಲೆ ದಾಳಿ ನಡೆದಿತ್ತು. ಮುಸ್ಲಿಮರ ಮನೆ, ಅಂಗಡಿಗಳ ಮೇಲೆ ದಾಳಿಗೆ ಪ್ರಚೋದನೆ ನೀಡಲಾಗುತ್ತಿದೆ. ಜಾಮಿಯಾ ಮಸೀದಿ ಧ್ವಂಸಕ್ಕೆ ಹುನ್ನಾರ ನಡೆಯುತ್ತಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನೆ ನಡೆಸಲಾಗುತ್ತಿದೆ. ಮುನ್ನೆಚ್ಚರಿಕೆಯಿಂದ ಯಾತ್ರೆಗೆ ಅವಕಾಶ ನೀಡಬಾರದು ಎಂದು ಎಸ್​ಡಿಪಿಐ ಒತ್ತಾಯಿಸಿದೆ.

ಒಂದು ವೇಳೆ ಯಾತ್ರೆಗೆ ಅನುಮತಿ ನೀಡಿ, ಅದರಿಂದಾಗು ಅನಾಹುತವಾದರೆ ಸರ್ಕಾರವೇ ಹೊಣೆ ಎಂದು ಎಸ್​ಡಿಪಿಐ ಎಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!