AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣ: ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ

ಹನುಮ ಸಂಕೀರ್ತನಾ ಯಾತ್ರೆಗೆ ವಿರೋಧ ವ್ಯಕ್ತಪಡಿಸಿರುವ ಎಸ್‌ಡಿಪಿಐ, ಇದು ಶಾಂತಿ ಸೌಹಾರ್ದತೆ ಕದಡುವ ಯತ್ನವೆಂದು ಆರೋಪಿಸಿದೆ. ಹೀಗಾಗಿ ಸಂಕೀರ್ತನಾ ಯಾತ್ರೆಗೆ ಅನುಮತಿ ನೀಡದಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ.

ಶ್ರೀರಂಗಪಟ್ಟಣ: ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ
ಹನುಮಂತ (ಸಾಂದರ್ಭಿಕ ಚಿತ್ರ)
ಪ್ರಶಾಂತ್​ ಬಿ.
| Edited By: |

Updated on: Dec 22, 2023 | 7:12 AM

Share

ಮಂಡ್ಯ, ಡಿಸೆಂಬರ್ 22: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಮೂಡಲಬಾಗಿಲು ಬಳಿ ಜಾಮಿಯಾ ಮಸೀದಿ (Jamia Masjid) ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ (Hindu Jagarana Vedike) ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ಈ ಮಧ್ಯೆ, ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್ 24ರಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ಎಸ್​​​ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಜಾಮಿಯಾ ಮಸೀದಿ ಜಾಗದಲ್ಲಿ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ ತೊಡಲಾಗಿದೆ. ಮೂಡಲಬಾಗಿಲು ಆಂಜನೇಯಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ ಸಂಕಲ್ಪದೊಂದಿಗೆ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಯಾತ್ರೆಯಲ್ಲಿ ಸಾವಿರಾರು ಹನುಮ ಮಾಲಾಧಾರಿಗಳು ಭಾಗಿಯಾಗಲಿದ್ದಾರೆ.

ಹನುಮ ಸಂಕೀರ್ತನಾ ಯಾತ್ರೆಗೆ ವಿರೋಧ ವ್ಯಕ್ತಪಡಿಸಿರುವ ಎಸ್‌ಡಿಪಿಐ, ಇದು ಶಾಂತಿ ಸೌಹಾರ್ದತೆ ಕದಡುವ ಯತ್ನವೆಂದು ಆರೋಪಿಸಿದೆ. ಹೀಗಾಗಿ ಸಂಕೀರ್ತನಾ ಯಾತ್ರೆಗೆ ಅನುಮತಿ ನೀಡದಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ. ಯಾತ್ರೆಗೆ ಅನುಮತಿ ನೀಡಿದರೆ ಕೋಮು ಗಲಭೆ ನಡೆಯುವ ಸಾಧ್ಯತೆ ಇದೆ ಎಂದು ಎಸ್‌ಡಿಪಿಐ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಕೋಮುಸೂಕ್ಷ್ಮ ಗಂಗಾವತಿ ಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ: ಸಿಸಿಟಿವಿ ಕಣ್ಗಾವಲು, ಬಿಗಿ ಪೊಲೀಸ್ ಬಂದೋಬಸ್ತ್

ಕಳೆದ ವರ್ಷ ಯಾತ್ರೆ ವೇಳೆ ಮುಸ್ಲಿಮರ ಮನೆಗಳ ಮೇಲೆ ದಾಳಿ ನಡೆದಿತ್ತು. ಮುಸ್ಲಿಮರ ಮನೆ, ಅಂಗಡಿಗಳ ಮೇಲೆ ದಾಳಿಗೆ ಪ್ರಚೋದನೆ ನೀಡಲಾಗುತ್ತಿದೆ. ಜಾಮಿಯಾ ಮಸೀದಿ ಧ್ವಂಸಕ್ಕೆ ಹುನ್ನಾರ ನಡೆಯುತ್ತಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನೆ ನಡೆಸಲಾಗುತ್ತಿದೆ. ಮುನ್ನೆಚ್ಚರಿಕೆಯಿಂದ ಯಾತ್ರೆಗೆ ಅವಕಾಶ ನೀಡಬಾರದು ಎಂದು ಎಸ್​ಡಿಪಿಐ ಒತ್ತಾಯಿಸಿದೆ.

ಒಂದು ವೇಳೆ ಯಾತ್ರೆಗೆ ಅನುಮತಿ ನೀಡಿ, ಅದರಿಂದಾಗು ಅನಾಹುತವಾದರೆ ಸರ್ಕಾರವೇ ಹೊಣೆ ಎಂದು ಎಸ್​ಡಿಪಿಐ ಎಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ