AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ: ಹಿಂದುತ್ವವಾದಿಗಳಿಂದ ಕರಪತ್ರ ಹಂಚಿಕೆ, ನಿಷೇಧಾಜ್ಞೆ ಹೇರಿದ ಜಿಲ್ಲಾಡಳಿತ

ಶ್ರೀರಂಗಪಟ್ಟಣದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿದ್ದರೂ, ಪಟ್ಟಣ ವ್ಯಾಪ್ತಿಯಲ್ಲಿ ಚುರುಕಿನ ಚಟುವಟಿಕೆಗಳು ಕಂಡು ಬರುತ್ತಿವೆ.

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ: ಹಿಂದುತ್ವವಾದಿಗಳಿಂದ ಕರಪತ್ರ ಹಂಚಿಕೆ, ನಿಷೇಧಾಜ್ಞೆ ಹೇರಿದ ಜಿಲ್ಲಾಡಳಿತ
ಶ್ರೀರಂಗಪಟ್ಟಣ ಜಾಮಿಯಾ ಮಸೀದಿ
TV9 Web
| Edited By: |

Updated on: Jun 03, 2022 | 12:35 PM

Share

ಮಂಡ್ಯ: ತಾಲ್ಲೂಕಿನ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯನ್ನು (Jamia Masjid of Srirangapatna) ಪ್ರವೇಶಿಸಿ ತೀರುವುದಾಗಿ ಹಿಂದುತ್ವವಾದಿಗಳು ಶುಕ್ರವಾರ ಕರಪತ್ರಗಳನ್ನು ಹಂಚಿದ್ದಾರೆ. ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿದ್ದರೂ, ಪಟ್ಟಣ ವ್ಯಾಪ್ತಿಯಲ್ಲಿ ಚುರುಕಿನ ಚಟುವಟಿಕೆಗಳು ಕಂಡು ಬರುತ್ತಿವೆ. ಮಂಡ್ಯಜಿಲ್ಲೆ ಮಂಡ್ಯ ತಾಲ್ಲೂಕಿನ ಉಪ್ಪರಕನಹಳ್ಳಿಯಲ್ಲಿ ಹಿಂದುತ್ವವಾದಿ ಮುಖಂಡ ಶಿವಕುಮಾರ್ ಆರಾಧ್ಯ ಈ ಸಂಬಂಧ ಕರಪತ್ರ ಹಂಚಿದ್ದು, ಪೊಲೀಸರಿಗೆ ಸೆಡ್ಡು ಹೊಡೆದಿದ್ದಾರೆ. ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಈಗಾಗಲೇ 144ನೇ ವಿಧಿ ಅನ್ವಯ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ, ಕರಪತ್ರ ಹಂಚಿದರೆ ಬಂಧಿಸುವುದಾಗಿ ಪೊಲೀಸರು ಎಚ್ಚರಿಸಿದ್ದರೂ, ಕರಪತ್ರ ಹಂಚುವ ಪ್ರಕ್ರಿಯೆ ಸಾಗಿದೆ. ಮಂಡ್ಯದಲ್ಲಿ ನಾಳೆ (ಜೂನ್ 4) ಹಲವು ನಾಟಕೀಯ ಬೆಳವಣಿಗೆಗಳು ನಡೆಯಬಹುದು ಎಂದು ಅಂದಾಜಿಸಲಾಗಿದೆ.

ಹಿಂದುತ್ವ ಪರ ಸಂಘಟನೆಗಳು ಜಾಮಿಯಾ ಮಸೀದಿ ಚಲೋ ಚಳವಳಿಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ. ಐವರಿಗಿಂತ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ ಎಂದು ತಿಳಿಸಲಾಗಿದೆ. ಮಸೀದಿ ಪ್ರವೇಶಕ್ಕೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಜಾಥಾಗೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕರೆ ನೀಡಿದ್ದಾರೆ. ಕುವೆಂಪು ವೃತ್ತದಿಂದ ಜಾಮಿಯಾ ಮಸೀದಿವರೆಗೆ ಜಾಥಾ ನಡೆಸಲು ಉದ್ದೇಶಿಸಲಾಗಿದೆ. ಈ ಜಾಥಾಕ್ಕೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಇಂದು (ಜೂನ್ 3) ಸಂಜೆ 6ರಿಂದ ಜೂನ್ 5ರವರೆಗೆ ಶ್ರೀರಂಗಪಟ್ಟಣ ಪುರಸಭೆ ವ್ಯಾಪ್ತಿಯ 5 ಕಿಮೀ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧಿಸಲಾಗಿದೆ. ಶನಿವಾರ ನಡೆಯಬೇಕಿದ್ದ ವಾರದ ಸಂತೆಯನ್ನೂ ಮುಂದೂಡಿ ಪುರಸಭೆ ಮುಖ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಸೀದಿಯಲ್ಲಿ ವಿದ್ಯಾರ್ಥಿಗಳ ವಾಸ್ತವ್ಯ

ಜಾಮಿಯಾ ಮಸೀದಿಯಲ್ಲಿ ಮದರಸಾ ವಿದ್ಯಾರ್ಥಿಗಳು ವಾಸ್ತವ್ಯ ಹೂಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಡಳಿತಕ್ಕೆ ದೂರು ನೀಡಿದೆ. ಮಸೀದಿಯಲ್ಲಿ ಮದರಸಾ ವಿದ್ಯಾರ್ಥಿಗಳಿರುವ ವಿಡಿಯೊ ಒಂದು ಈಗ ವೈರಲ್ ಆಗಿದೆ. ಮದರಸಾವನ್ನು ಖಾಲಿ ಮಾಡಬೇಕು ಎಂದು ವಿಎಚ್​ಪಿ ಒತ್ತಾಯಿಸಿದೆ.

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್