AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣ ದಸರಾ: ಜಂಬೂಸವಾರಿ ವೇಳೆ ಬೆದರಿದ ಆನೆ; ತಪ್ಪಿದ ಅನಾಹುತ

ಶ್ರೀರಂಗಪಟ್ಟಣ ದಸರಾ 2021: ಆನೆಯ ನಡವಳಿಕೆ ನೋಡಿ ಬೆಚ್ಚಿದ ಜನ ಸ್ಥಳದಿಂದ ಓಡಿದ್ದಾರೆ. ಮೆರವಣಿಗೆ ವೇಳೆ ಭಾರೀ ಶಬ್ದ ಮಾಡಿದ ಹಿನ್ನಲೆ ಆನೆ ಬೆದರಿದ ಎಂದು ಹೇಳಲಾಗಿದೆ. ಆ ಬಳಿಕ, ಮೆರವಣಿಗೆಯ ಬದಲು ವೇದಿಕೆಯ ಹಿಂಭಾಗಕ್ಕೆ ಆನೆಯನ್ನು ಕರೆದುಕೊಂಡು ಹೋಗಲಾಗಿದೆ.

ಶ್ರೀರಂಗಪಟ್ಟಣ ದಸರಾ: ಜಂಬೂಸವಾರಿ ವೇಳೆ ಬೆದರಿದ ಆನೆ; ತಪ್ಪಿದ ಅನಾಹುತ
ಜಂಬೂಸವಾರಿ ವೇಳೆ ಬೆದರಿದ ಆನೆ
TV9 Web
| Updated By: ganapathi bhat|

Updated on:Oct 09, 2021 | 6:23 PM

Share

ಮಂಡ್ಯ: ಶ್ರೀರಂಗಪಟ್ಟಣ ದಸರಾಗೆ ಚಾಲನೆ ದೊರಕಿದೆ. ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥಶ್ರೀ ಚಾಲನೆ ನೀಡಿದ್ದಾರೆ. ಸ್ಚಾಮೀಜಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಶಾಸಕ ರವೀಂದ್ರ ಶ್ರೀಕಂಠಯ್ಯ ಸಾಥ್ ನೀಡಿದ್ದಾರೆ. ಆದರೆ, ಶ್ರೀರಂಗಪಟ್ಟಣ ದಸರಾಗೆ ಚಾಲನೆ ಹಾಗೂ ಪುಷ್ಪಾರ್ಚನೆ ವೇಳೆ ಗೋಪಾಲಸ್ವಾಮಿ ಹೆಸರಿನ ಆನೆ ಬೆದರಿದೆ. ಈ ಕಾರಣದಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಂಬೂಸವಾರಿಯನ್ನು ರದ್ದುಗೊಳಿಸಲಾಗಿದೆ.

ಆನೆ ಬೆದರಿದ ಹಿನ್ನೆಲೆ ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಲಾಗಿದೆ. ತಾಯಿ ಚಾಮುಂಡೇಶ್ವರಿ ವಿಗ್ರಹದ ಮೆರವಣಿಗೆಯನ್ನು ಬೆಳ್ಳಿ ರಥದಲ್ಲಿ ಮುಂದುವರಿಸಲಾಗಿದೆ. ಜಂಬೂ ಸವಾರಿ ವೇಳೆ ಬೆದರಿದ ಗೋಪಾಲಸ್ವಾಮಿ ಆನೆ, ಬೆದರಿ ಒಂದು ಸುತ್ತು ಸುತ್ತಿದೆ. ಆನೆಯ ನಡವಳಿಕೆ ನೋಡಿ ಬೆಚ್ಚಿದ ಜನ ಸ್ಥಳದಿಂದ ಓಡಿದ್ದಾರೆ. ಮೆರವಣಿಗೆ ವೇಳೆ ಭಾರೀ ಶಬ್ದ ಮಾಡಿದ ಹಿನ್ನಲೆ ಆನೆ ಬೆದರಿದ ಎಂದು ಹೇಳಲಾಗಿದೆ. ಆ ಬಳಿಕ, ಮೆರವಣಿಗೆಯ ಬದಲು ವೇದಿಕೆಯ ಹಿಂಭಾಗಕ್ಕೆ ಆನೆಯನ್ನು ಕರೆದುಕೊಂಡು ಹೋಗಲಾಗಿದೆ.

ಆನೆ ವೈದ್ಯ ರಮೇಶ್, ಪಶು ವೈದ್ಯ ಸಹಾಯಕ ಅಕ್ರಂ, ಮಾವುತರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಜನರನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಇದು ಜಿಲ್ಲಾಡಳಿತ, ಪೊಲೀಸ್ ಇಲಾಖೆ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಎಂದು ಹೇಳಲಾಗುತ್ತಿದೆ. ಪೊಲೀಸ್ ವೈಫಲ್ಯಕ್ಕೆ ಮೊಟಕುಗೊಂಡ ಜಂಬೂ ಸವಾರಿ ಎನ್ನಲಾಗುತ್ತಿದೆ. ಆದರೆ, ಜನರ ಗಾಬರಿ ನಡುವೆಯೂ ಸಿಬ್ಬಂದಿ, ಮಾವುತ ಆನೆಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ಜಂಬೂಸವಾರಿಯಲ್ಲಿ ಬೆದರಿದ್ದ ಆನೆ ನಿಯಂತ್ರಸಿದ ಹಿನ್ನೆಲೆ ಆನೆ ನಿಯಂತ್ರಿಸಿದ ಮಾವುತನಿಗೆ 3 ಸಾವಿರ ರೂಪಾಯಿ ಬಹುಮಾನ ನೀಡಲಾಗಿದೆ. ಸಚಿವರು, ಶಾಸಕರು ಬಹುಮಾನ ನೀಡಿ ಗೌರವಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಸರಾ ಮೆರವಣಿಗೆ ವೇಳೆ ಜನರ ಗಲಾಟೆಯಿಂದಾಗಿ ಗೋಪಾಲಸ್ವಾಮಿ ಆನೆ ಬೆದರಿತ್ತು. ಕೂಡಲೇ ಎಚ್ಚೆತ್ತ ಮಾವುತ ಆನೆಯನ್ನು ನಿಯಂತ್ರಿಸಿದ್ದರು.

ಇದನ್ನೂ ಓದಿ: ಮೈಸೂರು: ಅರಮನೆ ವೇದಿಕೆಯಲ್ಲಿ ಸಂಗೀತ ದರ್ಬಾರ್​; ಇಂದು ‘ನಾಲ್ವಡಿ ನಾಲ್ನುಡಿ’ ಕಾರ್ಯಕ್ರಮ ನಡೆಸಿಕೊಡಲಿರುವ ಹಂಸಲೇಖ

ಇದನ್ನೂ ಓದಿ: Dasara 2021: ದಸರಾ ಹಬ್ಬದ ನಂತರ ಶಾಲೆಗಳಲ್ಲಿ ಬಿಸಿಯೂಟ ಆರಂಭ: ಶಿಕ್ಷಣ ಸಚಿವ ಬಿ ಸಿ ನಾಗೇಶ್

Published On - 4:26 pm, Sat, 9 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ