ಶ್ರೀರಂಗಪಟ್ಟಣ ದಸರಾ: ಜಂಬೂಸವಾರಿ ವೇಳೆ ಬೆದರಿದ ಆನೆ; ತಪ್ಪಿದ ಅನಾಹುತ

ಶ್ರೀರಂಗಪಟ್ಟಣ ದಸರಾ 2021: ಆನೆಯ ನಡವಳಿಕೆ ನೋಡಿ ಬೆಚ್ಚಿದ ಜನ ಸ್ಥಳದಿಂದ ಓಡಿದ್ದಾರೆ. ಮೆರವಣಿಗೆ ವೇಳೆ ಭಾರೀ ಶಬ್ದ ಮಾಡಿದ ಹಿನ್ನಲೆ ಆನೆ ಬೆದರಿದ ಎಂದು ಹೇಳಲಾಗಿದೆ. ಆ ಬಳಿಕ, ಮೆರವಣಿಗೆಯ ಬದಲು ವೇದಿಕೆಯ ಹಿಂಭಾಗಕ್ಕೆ ಆನೆಯನ್ನು ಕರೆದುಕೊಂಡು ಹೋಗಲಾಗಿದೆ.

ಶ್ರೀರಂಗಪಟ್ಟಣ ದಸರಾ: ಜಂಬೂಸವಾರಿ ವೇಳೆ ಬೆದರಿದ ಆನೆ; ತಪ್ಪಿದ ಅನಾಹುತ
ಜಂಬೂಸವಾರಿ ವೇಳೆ ಬೆದರಿದ ಆನೆ
Follow us
| Updated By: ganapathi bhat

Updated on:Oct 09, 2021 | 6:23 PM

ಮಂಡ್ಯ: ಶ್ರೀರಂಗಪಟ್ಟಣ ದಸರಾಗೆ ಚಾಲನೆ ದೊರಕಿದೆ. ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥಶ್ರೀ ಚಾಲನೆ ನೀಡಿದ್ದಾರೆ. ಸ್ಚಾಮೀಜಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಶಾಸಕ ರವೀಂದ್ರ ಶ್ರೀಕಂಠಯ್ಯ ಸಾಥ್ ನೀಡಿದ್ದಾರೆ. ಆದರೆ, ಶ್ರೀರಂಗಪಟ್ಟಣ ದಸರಾಗೆ ಚಾಲನೆ ಹಾಗೂ ಪುಷ್ಪಾರ್ಚನೆ ವೇಳೆ ಗೋಪಾಲಸ್ವಾಮಿ ಹೆಸರಿನ ಆನೆ ಬೆದರಿದೆ. ಈ ಕಾರಣದಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಂಬೂಸವಾರಿಯನ್ನು ರದ್ದುಗೊಳಿಸಲಾಗಿದೆ.

ಆನೆ ಬೆದರಿದ ಹಿನ್ನೆಲೆ ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಲಾಗಿದೆ. ತಾಯಿ ಚಾಮುಂಡೇಶ್ವರಿ ವಿಗ್ರಹದ ಮೆರವಣಿಗೆಯನ್ನು ಬೆಳ್ಳಿ ರಥದಲ್ಲಿ ಮುಂದುವರಿಸಲಾಗಿದೆ. ಜಂಬೂ ಸವಾರಿ ವೇಳೆ ಬೆದರಿದ ಗೋಪಾಲಸ್ವಾಮಿ ಆನೆ, ಬೆದರಿ ಒಂದು ಸುತ್ತು ಸುತ್ತಿದೆ. ಆನೆಯ ನಡವಳಿಕೆ ನೋಡಿ ಬೆಚ್ಚಿದ ಜನ ಸ್ಥಳದಿಂದ ಓಡಿದ್ದಾರೆ. ಮೆರವಣಿಗೆ ವೇಳೆ ಭಾರೀ ಶಬ್ದ ಮಾಡಿದ ಹಿನ್ನಲೆ ಆನೆ ಬೆದರಿದ ಎಂದು ಹೇಳಲಾಗಿದೆ. ಆ ಬಳಿಕ, ಮೆರವಣಿಗೆಯ ಬದಲು ವೇದಿಕೆಯ ಹಿಂಭಾಗಕ್ಕೆ ಆನೆಯನ್ನು ಕರೆದುಕೊಂಡು ಹೋಗಲಾಗಿದೆ.

ಆನೆ ವೈದ್ಯ ರಮೇಶ್, ಪಶು ವೈದ್ಯ ಸಹಾಯಕ ಅಕ್ರಂ, ಮಾವುತರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಜನರನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಇದು ಜಿಲ್ಲಾಡಳಿತ, ಪೊಲೀಸ್ ಇಲಾಖೆ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಎಂದು ಹೇಳಲಾಗುತ್ತಿದೆ. ಪೊಲೀಸ್ ವೈಫಲ್ಯಕ್ಕೆ ಮೊಟಕುಗೊಂಡ ಜಂಬೂ ಸವಾರಿ ಎನ್ನಲಾಗುತ್ತಿದೆ. ಆದರೆ, ಜನರ ಗಾಬರಿ ನಡುವೆಯೂ ಸಿಬ್ಬಂದಿ, ಮಾವುತ ಆನೆಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ಜಂಬೂಸವಾರಿಯಲ್ಲಿ ಬೆದರಿದ್ದ ಆನೆ ನಿಯಂತ್ರಸಿದ ಹಿನ್ನೆಲೆ ಆನೆ ನಿಯಂತ್ರಿಸಿದ ಮಾವುತನಿಗೆ 3 ಸಾವಿರ ರೂಪಾಯಿ ಬಹುಮಾನ ನೀಡಲಾಗಿದೆ. ಸಚಿವರು, ಶಾಸಕರು ಬಹುಮಾನ ನೀಡಿ ಗೌರವಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಸರಾ ಮೆರವಣಿಗೆ ವೇಳೆ ಜನರ ಗಲಾಟೆಯಿಂದಾಗಿ ಗೋಪಾಲಸ್ವಾಮಿ ಆನೆ ಬೆದರಿತ್ತು. ಕೂಡಲೇ ಎಚ್ಚೆತ್ತ ಮಾವುತ ಆನೆಯನ್ನು ನಿಯಂತ್ರಿಸಿದ್ದರು.

ಇದನ್ನೂ ಓದಿ: ಮೈಸೂರು: ಅರಮನೆ ವೇದಿಕೆಯಲ್ಲಿ ಸಂಗೀತ ದರ್ಬಾರ್​; ಇಂದು ‘ನಾಲ್ವಡಿ ನಾಲ್ನುಡಿ’ ಕಾರ್ಯಕ್ರಮ ನಡೆಸಿಕೊಡಲಿರುವ ಹಂಸಲೇಖ

ಇದನ್ನೂ ಓದಿ: Dasara 2021: ದಸರಾ ಹಬ್ಬದ ನಂತರ ಶಾಲೆಗಳಲ್ಲಿ ಬಿಸಿಯೂಟ ಆರಂಭ: ಶಿಕ್ಷಣ ಸಚಿವ ಬಿ ಸಿ ನಾಗೇಶ್

Published On - 4:26 pm, Sat, 9 October 21

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ