AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಆಗ್ರಹ: ಸಿಎಂ ಬೊಮ್ಮಾಯಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಮಂಡ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ಮಾಡಿದರು.

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಆಗ್ರಹ: ಸಿಎಂ ಬೊಮ್ಮಾಯಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ
ಮಂಡ್ಯದಲ್ಲಿ ಸಿಎಂ ಬೊಮ್ಮಾಯಿಯವರ ಅಣುಕು ಶವಯಾತ್ರೆ ಮಾಡಿದ ರೈತರು
TV9 Web
| Updated By: ವಿವೇಕ ಬಿರಾದಾರ|

Updated on:Nov 16, 2022 | 4:29 PM

Share

ಮಂಡ್ಯ: ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಮಂಡ್ಯದಲ್ಲಿ (Mandya) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಅಣಕು ಶವಯಾತ್ರೆ ಮಾಡಿದರು. ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಸಂಜಯ ವೃತ್ತದವರೆಗೆ ಶವಯಾತ್ರೆ ನಡೆಸಿದರು. ಸಂಜಯ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಧರಣಿ ಕೂತರು. ಹೆದ್ದಾರಿಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್​ ನಿಲ್ಲಿಸಿ ರೈತರು ಸಿಎಂ, ಸಚಿವರು, ಸರ್ಕಾರದ ವಿರುದ್ಧ “ಸತ್ತರಪ್ಪ ಸತ್ತರು ಸರ್ಕಾರದವರು ಸತ್ತರು” ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡರು.

ಈ ವೇಳೆ ಸಿಎಂ ಬೊಮ್ಮಾಯಿ ಅವರ ಅಣಕು ಶವಯಾತ್ರೆಗೆ ಪೊಲೀಸರು ಅಡ್ಡಿಪಡಿಸಿದರು. ತಡೆಯಲು ಬಂದ ಪೊಲೀಸರನ್ನು ಪಕ್ಕಕ್ಕೆ ದೂಡಿ ರೈತರು ಸಿಎಂ ಬೊಮ್ಮಾಯಿ ಪ್ರತಿಕೃತಿಗೆ ಬೆಂಕಿ ಹಚ್ಚಿದರು. ಕಬ್ಬು ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಬಂದೋಬಸ್ತ್​ ಮಾಡಿದ್ದಾರೆ.

ಕಬ್ಬಿಗೆ ಸೂಕ್ತ ಬೆಲೆ ಘೋಷಣೆಗಾಗಿ ಮುಧೋಳ ಬಂದ್….!

ಬಾಗಲಕೋಟೆ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಕಳೆದ ಒಂದು ತಿಂಗಳಿನಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಸಂಬಂಧ ನಿನ್ನೆ (ನ.15) ಸಚಿವತ್ರಯರ ನೇತೃತ್ವದಲ್ಲಿ ನಡೆದ ಖಾರ್ಕಾನೆ ಮಾಲಿಕರ ಮತ್ತು ಕಬ್ಬು ಬೆಳೆಗಾರರ ಸಭೆ ವಿಫಲವಾಗಿದೆ. ಹೀಗಾಗಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮುಧೋಳ ಬಂದ್​​ಗೆ ಕರೆ ಕೊಟ್ಟಿದೆ. ಸದ್ಯ ಮುಧೋಳ ನಗರ ಸಂಪೂರ್ಣ ಸ್ಥಬ್ದವಾಗಿದ್ದು, ರೈತರು ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದದಿಂದ ಸಿಎಂ ಬೊಮ್ಮಾಯಿಗೆ ಎಚ್ಚರಿಕೆ

ಇಂದು ಸಂಜೆಯೊಳಗೆ 2900 ಬೆಲೆ ಘೋಷಣೆ ಮಾಡಬೇಕು, ಇಲ್ಲದಿದ್ದರೆ ಪ್ರತಿಭಟನೆ ಉಗ್ರಸ್ವರೂಪಕ್ಕೆ ತಿರುಗುತ್ತದೆ. ನಾವು ಯಾವುದೇ 144 ಸೆಕ್ಷನ್​ಗೂ ಅಂಜೋದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಕಬ್ಬಿನ ಬಾಕಿ ಉಳಿಸಿಕೊಂಡ ಸಚಿವ ಮುರಗೇಶ್​ ನಿರಾಣಿಯನ್ನು ಕೂರಿಸಿಕೊಂಡಿರಿ. ಮುರುಗೇಶ್​​ ನಿರಾಣಿ, ಸಿಎಂ ಬೊಮ್ಮಾಯಿ ಚೇಲಾ ಇದ್ದಂತೆ. ಅವರಿಂದ ಏನು ನಿರೀಕ್ಷಿಸಬೇಕು. ಜನಪ್ರತಿನಿಧಿಗಳ ಒಡೆತನದಲ್ಲಿ ಕಾರ್ಖಾನೆಗಳಿವೆ. ಅಂತವರ ಲಾಭಿಗೆ ಸರಕಾರ ಒಳಗಾಗಿದೆ. ಕೂಡಲೇ 2900 ರೂ ಬೆಲೆ ಘೋಷಣೆಯಾಗುವವರೆಗೂ ಹೋರಾಟ ಕೈ ಬಿಡೋದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Wed, 16 November 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!