AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟಿಕೆಟ್ ಕೈ ತಪ್ಪಿದಕ್ಕೆ ಸುಮಲತಾ ಮುನಿಸು, ಬಿ.ವೈ. ವಿಜಯೇಂದ್ರ ಮಾತುಕತೆ ಸಾಧ್ಯತೆ

ಸಂಸದೆ ಸುಮಲತಾ ಅಂಬರೀಶ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿಯಾಗುವ ಸಾಧ್ಯತೆ ಇದೆ. ಎರಡು ಮೂರು ದಿನಗಳಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ವಿಜಯೇಂದ್ರ ಭೇಟಿ ವೇಳೆ ಮಂಡ್ಯ ಲೋಕಸಭೆ ಕ್ಷೇತ್ರ ಟಿಕೆಟ್ ನೀಡುವಂತೆ ಸುಮಲತಾ ಅವರು ಡಿಮ್ಯಾಂಡ್ ಮಾಡುವ ಸಾಧ್ಯತೆ ಇದೆ.

ಬಿಜೆಪಿ ಟಿಕೆಟ್ ಕೈ ತಪ್ಪಿದಕ್ಕೆ ಸುಮಲತಾ ಮುನಿಸು, ಬಿ.ವೈ. ವಿಜಯೇಂದ್ರ ಮಾತುಕತೆ ಸಾಧ್ಯತೆ
ಸಂಸದೆ ಸುಮಲತಾ ಅಂಬರೀಶ್​
ಪ್ರಶಾಂತ್​ ಬಿ.
| Edited By: |

Updated on: Jan 13, 2024 | 9:26 AM

Share

ಮಂಡ್ಯ, ಜ.13: ಲೋಕಸಭಾ ಚುನಾವಣೆಗೆ (Lok Sabha Election) ಕೆಲವು ತಿಂಗಳು ಮಾತ್ರ ಬಾಕಿ ಇದೆ. ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಮಂಡ್ಯ ಟಿಕೆಟ್ ಜೆಡಿಎಸ್​ಗೆ ಹೋಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗುವುದು ಡೌಟ್ ಆಗಿದೆ. ಹೀಗಾಗಿ ಅವರು ಪತ್ತೆ ಪಕ್ಷೇತರವಾಗಿ ಸ್ವರ್ಧೆ ಮಾಡಲು ಮುಂದಾಗಿದ್ದಾರೆ. ಸಂಸದೆಯಾದ ನಂತರ ಸುಮಲತಾ ಅವರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಈಗ ಟಿಕೆಟ್ ಸಿಗದಿರೋ ಹಿನ್ನೆಲೆ ಬಿಜೆಪಿ ಮೇಲೆ ಅಸಮಾಧಾನಗೊಂಡಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿಯಾಗುವ ಸಾಧ್ಯತೆ ಇದೆ. ಎರಡು ಮೂರು ದಿನಗಳಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ವಿಜಯೇಂದ್ರ ಭೇಟಿ ವೇಳೆ ಮಂಡ್ಯ ಲೋಕಸಭೆ ಕ್ಷೇತ್ರ ಟಿಕೆಟ್ ನೀಡುವಂತೆ ಸುಮಲತಾ ಅವರು ಡಿಮ್ಯಾಂಡ್ ಮಾಡುವ ಸಾಧ್ಯತೆ ಇದೆ. ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು ಬಹುತೇಕ ಜೆಡಿಎಸ್ ಗೆ ಮಂಡ್ಯ ಕ್ಷೇತ್ರ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಸುಮಲತಾ ಜೊತೆ ಚರ್ಚೆ ನಡೆಸಿ ಬಿಜೆಪಿ ಜೊತೆಗೆ ಇರುವಂತೆ ಮಾತುಕತೆ ನಡೆಸಲಿದ್ದಾರೆ.

ಕುತೂಹಲ ಮೂಡಿಸಿದ ಸುಮಲತಾ ನಡೆ

ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಸ್ವರ್ಧೆ ಮಾಡಲು ಸುಮಲತಾ ಅವರು ಚಿಂತನೆ ನಡೆಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಗೆ ಸೆಳೆಯಲು ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಮಂಡ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಸೂಕ್ತ ಅಭ್ಯರ್ಥಿ ಸಿಗದ ಹಿನ್ನೆಲೆ ಸುಮಲತಾರನ್ನೆ ಕಾಂಗ್ರೆಸ್ ನಿಂದ ಕಣಕ್ಕೆ ಇಳಿಸಲು ಪ್ಲ್ಯಾನ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಸುಮಲತಾರ ಮೇಲೆ ಒಲವು ತೋರಿಸಿದ್ದಾರೆ. ಪಕ್ಷೇತರಗಿಂತ ಕಾಂಗ್ರೆಸ್ ನಿಂದ ಸ್ವರ್ಧೆ ಮಾಡಿದ್ರೆ ಗೆಲುವು ಸುಲಭ ಎನ್ನುವ ಲೆಕ್ಕಾಚಾರ ನಡೆಯುತ್ತಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಬಿಜೆಪಿಯ ಕ್ಲಸ್ಟರ್‌ ಮಟ್ಟದ ಸಭೆ ಪೂರ್ಣ, ಈಗ ವಿಜಯೇಂದ್ರ ಚಿತ್ತ ದೆಹಲಿಯತ್ತ

ಮಂಡ್ಯ ಕ್ಷೇತ್ರ ಗೆಲ್ಲಲೇಬೇಕೆಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ಮಂಡ್ಯ ವಶಪಡಿಸಿಕೊಳ್ಳಲು ಸುಮಲತಾರನ್ನು ಅಭ್ಯರ್ಥಿ ಮಾಡಲು ಸಿಎಂ ಸಿದ್ದರಾಮಯ್ಯ ಆ್ಯಂಡ್ ಟೀಂ ಒಲವು ತೋರಿಸಿದೆ. ಆ ಮೂಲಕ ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯಲು ಸಿಎಂ ಪ್ಲಾನ್ ಮಾಡಿದ್ದಾರೆ. ಸುಮಲತಾ ಕರೆತಂದರೆ ದಳಪತಿಗಳು‌ ಹಾಗೂ ಬಿಜೆಪಿಗೆ ಕೌಂಟರ್ ಹಾಗೂ ಕಾಂಗ್ರೆಸ್ ಶಕ್ತಿ ಪ್ರದರ್ಶಿಸುವ ಅವಕಾಶ ಸಿಗಲಿದೆ. ಆದರೆ ಸುಮಲತಾರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲು ಸ್ಥಳೀಯವಾಗಿ ವಿರೋಧ ವ್ಯಕ್ತವಾಗಿದೆ. ಮತ್ತೊಂದೆಡೆ ಕೈ ಪಡೆ ಸೇರಲು ಸೂಕ್ತ ಸಮಯಕ್ಕೆ ಮಂಡ್ಯ ಸಂಸದೆ ಸುಮಲತಾ ಕಾಯುತ್ತಿದ್ದಾರೆ.

ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ರೆ ಗೆಲುವು ಕಷ್ಟ. ಕಾಂಗ್ರೆಸ್ ನಿಂದಲೇ ಸ್ಪರ್ಧೆ ಮಾಡುವುದು ಸೂಕ್ತ ಎಂಬ ಸಲಹೆಯನ್ನು ಸುಮಲತಾ ಆಪ್ತ ಪಡೆ ನೀಡಿದೆ. ಸದ್ಯ ಕಾಂಗ್ರೆಸ್​ಗೆ ಸುಮಲತಾ ಅನಿವಾರ್ಯ, ಸುಮಲತಾಗೆ ಕಾಂಗ್ರೆಸ್ ಅನಿವಾರ್ಯ ಎಂಬ ಪರಿಸ್ಥಿತಿ ಎದುರಾಗಿದೆ. ಸ್ಥಳೀಯ ನಾಯಕರನ್ನ ವಿಶ್ವಾಸ ತೆಗೆದುಕೊಂಡು ಸೂಕ್ತ ನಿರ್ಧಾರಕ್ಕೆ ಚಿಂತನೆ ನಡೆದಿದ್ದು ಸುಮಲತಾ ಜೊತೆ ಮಾತುಕತೆ ನಡೆಸಲು ಸಿಎಂ ಮುಂದಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?