AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್ನಿ ಲಿಯೋನ್ ಹುಟ್ಟುಹಬ್ಬ ಆಚರಿಸಿದ ಯುವಕರ ತಂಡ; ಮಂಡ್ಯದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಮಾಜಿ ನೀಲಿ ತಾರೆ

ಸನ್ನಿ ಲಿಯೋನ್​ಗೆ ಶುಭಕೋರಿ ಹಾಕಿದ ಈ ಫ್ಲೆಕ್ಸ್ ಸಕ್ಕರೆನಾಡು ಮಂಡ್ಯದ್ದು ಎಂದು ಗೊತ್ತಾಗಿದೆ. ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿ ಯುವಕರ ತಂಡವೊಂದು ಮೇ 13 ರಂದು ತಮ್ಮೂರಿನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್​ಗೆ ಶುಭಕೋರಿ ಬೃಹತ್ ಫ್ಲೆಕ್ಸ್ ಹಾಕಿ ಕೇಕ್ ಕಟ್ ಮಾಡಿರುವುದರ ಜೊತೆಗೆ ನೆರೆದಿದ್ದವರಿಗೆ ಬಿರಿಯಾನಿ ಕೂಡ ಹಂಚಿದ್ದರು ಎಂದು ಮೂಲಗಳು ತಿಳಿಸಿವೆ.

ಸನ್ನಿ ಲಿಯೋನ್ ಹುಟ್ಟುಹಬ್ಬ ಆಚರಿಸಿದ ಯುವಕರ ತಂಡ; ಮಂಡ್ಯದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಮಾಜಿ ನೀಲಿ ತಾರೆ
ಹಳ್ಳಿಯೊಂದರಲ್ಲಿ ಹಾಕಲಾಗಿರುವ ಸನ್ನಿ ಲಿಯೋನ್ ಫ್ಲೆಕ್ಸ್
preethi shettigar
|

Updated on: May 17, 2021 | 11:07 AM

Share

ಮಂಡ್ಯ: ಮೇ 13 ರಂದು ಖ್ಯಾತ ಬಾಲಿವುಡ್ ನಟಿ, ಮಾಜಿ ನೀಲಿ ತಾರೆ ಸನ್ನಿ ಲಿಯೋನ್ 40ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ದೇಶದಾದ್ಯಂತ ಶುಭಾಶಯ ಕೋರಿದ್ದರು. ಅದರಲ್ಲೂ ಕರ್ನಾಟಕದಲ್ಲಿ ಈ ಬಾರಿ ಸನ್ನಿಗೆ ಅಭಿಮಾನಿಗಳು ಶುಭಾಶಯ ಕೋರಿದ ರೀತಿ ಸ್ವಲ್ಪ ಭಿನ್ನವಾಗಿದ್ದು, ಈ ಬಗ್ಗೆ ಸ್ವತಃ ಸನ್ನಿ ಲಿಯೋನ್ ಕೂಡ ಸಂತಸ ವ್ಯಕ್ತಪಡಿಸಿದ್ದರು.

ವಿಶಾಲವಾದ ಅಭಿಮಾನಿ ಬಳಗವನ್ನು ಹೊಂದಿರುವ ಸನ್ನಿ ಲಿಯೋನ್​ಗೆ ಹಳ್ಳಿಯೊಂದರಲ್ಲಿ ಫ್ಲೆಕ್ಸ್ ಹಾಕಿಸಿ ಅದರ ಮೇಲೆ ಅನಾಥ ಮಕ್ಕಳ ತಾಯಿ, ಅಭಿಮಾನಿಗಳ‌ ದೇವತೆ ಎಂದು ಬರೆದು ಶುಭಕೋರಿ ಹಾಕಿದ್ದರು. ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಕೂಡ ಆಗಿತ್ತು ಮತ್ತು ಇದೇ ಫೋಟೋವನ್ನು ಸನ್ನಿ ಲಿಯೋನ್ ತಮ್ಮ ಇನ್ಸ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿ ಕರ್ನಾಟಕದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದರು.

ಆದರೆ ಇದು ಯಾವ ಹಳ್ಳಿಯಲ್ಲಿನ ಫೋಟೊ ಎಂದು ಯಾರಿಗೂ ತಿಳಿದಿರಲಿಲ್ಲ ಸದ್ಯ ಸನ್ನಿ ಲಿಯೋನ್​ಗೆ ಶುಭಕೋರಿ ಹಾಕಿದ ಈ ಫ್ಲೆಕ್ಸ್ ಸಕ್ಕರೆನಾಡು ಮಂಡ್ಯದ್ದು ಎಂದು ಗೊತ್ತಾಗಿದೆ. ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿ ಯುವಕರ ತಂಡವೊಂದು ಮೇ 13 ರಂದು ತಮ್ಮೂರಿನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್​ಗೆ ಶುಭಕೋರಿ ಬೃಹತ್ ಫ್ಲೆಕ್ಸ್ ಹಾಕಿ ಕೇಕ್ ಕಟ್ ಮಾಡಿರುವುದರ ಜೊತೆಗೆ ನೆರೆದಿದ್ದವರಿಗೆ ಬಿರಿಯಾನಿ ಕೂಡ ಹಂಚಿದ್ದರು ಎಂದು ಮೂಲಗಳು ತಿಳಿಸಿವೆ.

ಇದೇ 13 ರಂದು ಸನ್ನಿ ಲಿಯೋನ್​ಗೆ ಪ್ಲೆಕ್ಸ್ ಹಾಕಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದ ಬಗೆಗೆ ಮಾಹಿತಿ ಸಿಕ್ಕ ಕೂಡಲೇ ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪೊಲೀಸರು ಬರುವ ವೇಳೆಗೆ ಸನ್ನಿ ಹುಟ್ಟುಹಬ್ಬ ಆಚರಿಸಿದ ಯುವಕರು ಪ್ಲೆಕ್ಸ್ ತೆರವುಗೊಳಿಸಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಕರ್ನಾಟಕದ ಹಳ್ಳಿಗರ ಅಭಿಮಾನಕ್ಕೆ ಸನ್ನಿ ಲಿಯೋನ್​ ಫಿದಾ; ಅನಾಥ ಮಕ್ಕಳ ತಾಯಿ ಎಂದ ಫ್ಯಾನ್ಸ್​

ಬಾಲಿವುಡ್​ ಕಲಾವಿದ ಕಬೀರ್​ ಬೇಡಿ ಇಟಲಿಯಲ್ಲಿ ‘ಮಾದಕ ನಟ’ ಎನಿಸಿಕೊಳ್ಳಲು ಕಾರಣ ಆಗಿದ್ದು ಆ ಒಂದು ಧಾರಾವಾಹಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ