AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್ನಿ ಲಿಯೋನ್ ಹುಟ್ಟುಹಬ್ಬ ಆಚರಿಸಿದ ಯುವಕರ ತಂಡ; ಮಂಡ್ಯದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಮಾಜಿ ನೀಲಿ ತಾರೆ

ಸನ್ನಿ ಲಿಯೋನ್​ಗೆ ಶುಭಕೋರಿ ಹಾಕಿದ ಈ ಫ್ಲೆಕ್ಸ್ ಸಕ್ಕರೆನಾಡು ಮಂಡ್ಯದ್ದು ಎಂದು ಗೊತ್ತಾಗಿದೆ. ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿ ಯುವಕರ ತಂಡವೊಂದು ಮೇ 13 ರಂದು ತಮ್ಮೂರಿನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್​ಗೆ ಶುಭಕೋರಿ ಬೃಹತ್ ಫ್ಲೆಕ್ಸ್ ಹಾಕಿ ಕೇಕ್ ಕಟ್ ಮಾಡಿರುವುದರ ಜೊತೆಗೆ ನೆರೆದಿದ್ದವರಿಗೆ ಬಿರಿಯಾನಿ ಕೂಡ ಹಂಚಿದ್ದರು ಎಂದು ಮೂಲಗಳು ತಿಳಿಸಿವೆ.

ಸನ್ನಿ ಲಿಯೋನ್ ಹುಟ್ಟುಹಬ್ಬ ಆಚರಿಸಿದ ಯುವಕರ ತಂಡ; ಮಂಡ್ಯದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಮಾಜಿ ನೀಲಿ ತಾರೆ
ಹಳ್ಳಿಯೊಂದರಲ್ಲಿ ಹಾಕಲಾಗಿರುವ ಸನ್ನಿ ಲಿಯೋನ್ ಫ್ಲೆಕ್ಸ್
preethi shettigar
|

Updated on: May 17, 2021 | 11:07 AM

Share

ಮಂಡ್ಯ: ಮೇ 13 ರಂದು ಖ್ಯಾತ ಬಾಲಿವುಡ್ ನಟಿ, ಮಾಜಿ ನೀಲಿ ತಾರೆ ಸನ್ನಿ ಲಿಯೋನ್ 40ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ದೇಶದಾದ್ಯಂತ ಶುಭಾಶಯ ಕೋರಿದ್ದರು. ಅದರಲ್ಲೂ ಕರ್ನಾಟಕದಲ್ಲಿ ಈ ಬಾರಿ ಸನ್ನಿಗೆ ಅಭಿಮಾನಿಗಳು ಶುಭಾಶಯ ಕೋರಿದ ರೀತಿ ಸ್ವಲ್ಪ ಭಿನ್ನವಾಗಿದ್ದು, ಈ ಬಗ್ಗೆ ಸ್ವತಃ ಸನ್ನಿ ಲಿಯೋನ್ ಕೂಡ ಸಂತಸ ವ್ಯಕ್ತಪಡಿಸಿದ್ದರು.

ವಿಶಾಲವಾದ ಅಭಿಮಾನಿ ಬಳಗವನ್ನು ಹೊಂದಿರುವ ಸನ್ನಿ ಲಿಯೋನ್​ಗೆ ಹಳ್ಳಿಯೊಂದರಲ್ಲಿ ಫ್ಲೆಕ್ಸ್ ಹಾಕಿಸಿ ಅದರ ಮೇಲೆ ಅನಾಥ ಮಕ್ಕಳ ತಾಯಿ, ಅಭಿಮಾನಿಗಳ‌ ದೇವತೆ ಎಂದು ಬರೆದು ಶುಭಕೋರಿ ಹಾಕಿದ್ದರು. ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಕೂಡ ಆಗಿತ್ತು ಮತ್ತು ಇದೇ ಫೋಟೋವನ್ನು ಸನ್ನಿ ಲಿಯೋನ್ ತಮ್ಮ ಇನ್ಸ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿ ಕರ್ನಾಟಕದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದರು.

ಆದರೆ ಇದು ಯಾವ ಹಳ್ಳಿಯಲ್ಲಿನ ಫೋಟೊ ಎಂದು ಯಾರಿಗೂ ತಿಳಿದಿರಲಿಲ್ಲ ಸದ್ಯ ಸನ್ನಿ ಲಿಯೋನ್​ಗೆ ಶುಭಕೋರಿ ಹಾಕಿದ ಈ ಫ್ಲೆಕ್ಸ್ ಸಕ್ಕರೆನಾಡು ಮಂಡ್ಯದ್ದು ಎಂದು ಗೊತ್ತಾಗಿದೆ. ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿ ಯುವಕರ ತಂಡವೊಂದು ಮೇ 13 ರಂದು ತಮ್ಮೂರಿನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್​ಗೆ ಶುಭಕೋರಿ ಬೃಹತ್ ಫ್ಲೆಕ್ಸ್ ಹಾಕಿ ಕೇಕ್ ಕಟ್ ಮಾಡಿರುವುದರ ಜೊತೆಗೆ ನೆರೆದಿದ್ದವರಿಗೆ ಬಿರಿಯಾನಿ ಕೂಡ ಹಂಚಿದ್ದರು ಎಂದು ಮೂಲಗಳು ತಿಳಿಸಿವೆ.

ಇದೇ 13 ರಂದು ಸನ್ನಿ ಲಿಯೋನ್​ಗೆ ಪ್ಲೆಕ್ಸ್ ಹಾಕಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದ ಬಗೆಗೆ ಮಾಹಿತಿ ಸಿಕ್ಕ ಕೂಡಲೇ ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪೊಲೀಸರು ಬರುವ ವೇಳೆಗೆ ಸನ್ನಿ ಹುಟ್ಟುಹಬ್ಬ ಆಚರಿಸಿದ ಯುವಕರು ಪ್ಲೆಕ್ಸ್ ತೆರವುಗೊಳಿಸಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಕರ್ನಾಟಕದ ಹಳ್ಳಿಗರ ಅಭಿಮಾನಕ್ಕೆ ಸನ್ನಿ ಲಿಯೋನ್​ ಫಿದಾ; ಅನಾಥ ಮಕ್ಕಳ ತಾಯಿ ಎಂದ ಫ್ಯಾನ್ಸ್​

ಬಾಲಿವುಡ್​ ಕಲಾವಿದ ಕಬೀರ್​ ಬೇಡಿ ಇಟಲಿಯಲ್ಲಿ ‘ಮಾದಕ ನಟ’ ಎನಿಸಿಕೊಳ್ಳಲು ಕಾರಣ ಆಗಿದ್ದು ಆ ಒಂದು ಧಾರಾವಾಹಿ

Follow Us
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ