AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್ನಿ ಲಿಯೋನ್ ಹುಟ್ಟುಹಬ್ಬ ಆಚರಿಸಿದ ಯುವಕರ ತಂಡ; ಮಂಡ್ಯದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಮಾಜಿ ನೀಲಿ ತಾರೆ

ಸನ್ನಿ ಲಿಯೋನ್​ಗೆ ಶುಭಕೋರಿ ಹಾಕಿದ ಈ ಫ್ಲೆಕ್ಸ್ ಸಕ್ಕರೆನಾಡು ಮಂಡ್ಯದ್ದು ಎಂದು ಗೊತ್ತಾಗಿದೆ. ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿ ಯುವಕರ ತಂಡವೊಂದು ಮೇ 13 ರಂದು ತಮ್ಮೂರಿನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್​ಗೆ ಶುಭಕೋರಿ ಬೃಹತ್ ಫ್ಲೆಕ್ಸ್ ಹಾಕಿ ಕೇಕ್ ಕಟ್ ಮಾಡಿರುವುದರ ಜೊತೆಗೆ ನೆರೆದಿದ್ದವರಿಗೆ ಬಿರಿಯಾನಿ ಕೂಡ ಹಂಚಿದ್ದರು ಎಂದು ಮೂಲಗಳು ತಿಳಿಸಿವೆ.

ಸನ್ನಿ ಲಿಯೋನ್ ಹುಟ್ಟುಹಬ್ಬ ಆಚರಿಸಿದ ಯುವಕರ ತಂಡ; ಮಂಡ್ಯದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಮಾಜಿ ನೀಲಿ ತಾರೆ
ಹಳ್ಳಿಯೊಂದರಲ್ಲಿ ಹಾಕಲಾಗಿರುವ ಸನ್ನಿ ಲಿಯೋನ್ ಫ್ಲೆಕ್ಸ್
preethi shettigar
|

Updated on: May 17, 2021 | 11:07 AM

Share

ಮಂಡ್ಯ: ಮೇ 13 ರಂದು ಖ್ಯಾತ ಬಾಲಿವುಡ್ ನಟಿ, ಮಾಜಿ ನೀಲಿ ತಾರೆ ಸನ್ನಿ ಲಿಯೋನ್ 40ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ದೇಶದಾದ್ಯಂತ ಶುಭಾಶಯ ಕೋರಿದ್ದರು. ಅದರಲ್ಲೂ ಕರ್ನಾಟಕದಲ್ಲಿ ಈ ಬಾರಿ ಸನ್ನಿಗೆ ಅಭಿಮಾನಿಗಳು ಶುಭಾಶಯ ಕೋರಿದ ರೀತಿ ಸ್ವಲ್ಪ ಭಿನ್ನವಾಗಿದ್ದು, ಈ ಬಗ್ಗೆ ಸ್ವತಃ ಸನ್ನಿ ಲಿಯೋನ್ ಕೂಡ ಸಂತಸ ವ್ಯಕ್ತಪಡಿಸಿದ್ದರು.

ವಿಶಾಲವಾದ ಅಭಿಮಾನಿ ಬಳಗವನ್ನು ಹೊಂದಿರುವ ಸನ್ನಿ ಲಿಯೋನ್​ಗೆ ಹಳ್ಳಿಯೊಂದರಲ್ಲಿ ಫ್ಲೆಕ್ಸ್ ಹಾಕಿಸಿ ಅದರ ಮೇಲೆ ಅನಾಥ ಮಕ್ಕಳ ತಾಯಿ, ಅಭಿಮಾನಿಗಳ‌ ದೇವತೆ ಎಂದು ಬರೆದು ಶುಭಕೋರಿ ಹಾಕಿದ್ದರು. ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಕೂಡ ಆಗಿತ್ತು ಮತ್ತು ಇದೇ ಫೋಟೋವನ್ನು ಸನ್ನಿ ಲಿಯೋನ್ ತಮ್ಮ ಇನ್ಸ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿ ಕರ್ನಾಟಕದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದರು.

ಆದರೆ ಇದು ಯಾವ ಹಳ್ಳಿಯಲ್ಲಿನ ಫೋಟೊ ಎಂದು ಯಾರಿಗೂ ತಿಳಿದಿರಲಿಲ್ಲ ಸದ್ಯ ಸನ್ನಿ ಲಿಯೋನ್​ಗೆ ಶುಭಕೋರಿ ಹಾಕಿದ ಈ ಫ್ಲೆಕ್ಸ್ ಸಕ್ಕರೆನಾಡು ಮಂಡ್ಯದ್ದು ಎಂದು ಗೊತ್ತಾಗಿದೆ. ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿ ಯುವಕರ ತಂಡವೊಂದು ಮೇ 13 ರಂದು ತಮ್ಮೂರಿನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್​ಗೆ ಶುಭಕೋರಿ ಬೃಹತ್ ಫ್ಲೆಕ್ಸ್ ಹಾಕಿ ಕೇಕ್ ಕಟ್ ಮಾಡಿರುವುದರ ಜೊತೆಗೆ ನೆರೆದಿದ್ದವರಿಗೆ ಬಿರಿಯಾನಿ ಕೂಡ ಹಂಚಿದ್ದರು ಎಂದು ಮೂಲಗಳು ತಿಳಿಸಿವೆ.

ಇದೇ 13 ರಂದು ಸನ್ನಿ ಲಿಯೋನ್​ಗೆ ಪ್ಲೆಕ್ಸ್ ಹಾಕಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದ ಬಗೆಗೆ ಮಾಹಿತಿ ಸಿಕ್ಕ ಕೂಡಲೇ ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪೊಲೀಸರು ಬರುವ ವೇಳೆಗೆ ಸನ್ನಿ ಹುಟ್ಟುಹಬ್ಬ ಆಚರಿಸಿದ ಯುವಕರು ಪ್ಲೆಕ್ಸ್ ತೆರವುಗೊಳಿಸಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಕರ್ನಾಟಕದ ಹಳ್ಳಿಗರ ಅಭಿಮಾನಕ್ಕೆ ಸನ್ನಿ ಲಿಯೋನ್​ ಫಿದಾ; ಅನಾಥ ಮಕ್ಕಳ ತಾಯಿ ಎಂದ ಫ್ಯಾನ್ಸ್​

ಬಾಲಿವುಡ್​ ಕಲಾವಿದ ಕಬೀರ್​ ಬೇಡಿ ಇಟಲಿಯಲ್ಲಿ ‘ಮಾದಕ ನಟ’ ಎನಿಸಿಕೊಳ್ಳಲು ಕಾರಣ ಆಗಿದ್ದು ಆ ಒಂದು ಧಾರಾವಾಹಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!