AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಮತ್ತೆ ಕಳ್ಳತನ, ಗುಂಡಿಯನ್ನೇ ಹೊತ್ತೊಯ್ದ ಖದೀಮರು

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನ ನಡೆದಿದ್ದು ಹುಂಡಿಯಲ್ಲಿದ್ದ ಹಣ ದೋಚಿ ಹುಂಡಿ ಬಿಸಾಕಿ ಕಳ್ಳರು ಪರಾರಿಯಾಗಿದ್ದಾರೆ. ಈ ದೇವಸ್ಥಾನ ಮಳವಳ್ಳಿಯ- ಬೆಂಗಳೂರು ರಸ್ತೆಯಲ್ಲಿ ಬರುತ್ತದೆ. ತಡರಾತ್ರಿ ದೇವಸ್ಥಾನದ ಬೀಗ ಹೊಡೆದು ಒಳನುಗ್ಗಿ ಹುಂಡಿ ತೆಗೆದುಕೊಂಡು ಪರಾರಿಯಾಗಿದ್ದಾರೆ.

ಮಂಡ್ಯದ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಮತ್ತೆ ಕಳ್ಳತನ, ಗುಂಡಿಯನ್ನೇ ಹೊತ್ತೊಯ್ದ ಖದೀಮರು
ದೇವಸ್ಥಾನದಲ್ಲಿ ಹುಂಡಿ ಕಳ್ಳತನ
TV9 Web
| Edited By: |

Updated on: Nov 27, 2023 | 11:49 AM

Share

ಮಂಡ್ಯ, ನ.27: ಜಿಲ್ಲೆಯ ದೇವಸ್ಥಾನದಲ್ಲಿ (Temple Theft) ಮತ್ತೆ ಕಳ್ಳತನ ನಡೆದಿದೆ. ದೇವಸ್ಥಾನದ ಬೀಗ ಹೊಡೆದು ಕಳ್ಳರು ಹುಂಡಿ ಹೊತ್ತೊಯ್ದಿದ್ದಾರೆ. ಒಂದೇ ತಿಂಗಳಲ್ಲಿ ಒಂದೇ ದೇವಸ್ಥಾನದಲ್ಲಿ ಎರಡು ಬಾರಿ ಕಳ್ಳತನ ನಡೆದಿದೆ. ಮಂಡ್ಯ (Mandya) ಜಿಲ್ಲೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನ ನಡೆದಿದ್ದು ಹುಂಡಿಯಲ್ಲಿದ್ದ ಹಣ ದೋಚಿ ಹುಂಡಿ ಬಿಸಾಕಿ ಕಳ್ಳರು ಪರಾರಿಯಾಗಿದ್ದಾರೆ. ಈ ದೇವಸ್ಥಾನ ಮಳವಳ್ಳಿಯ- ಬೆಂಗಳೂರು ರಸ್ತೆಯಲ್ಲಿ ಬರುತ್ತದೆ.

ತಡರಾತ್ರಿ ದೇವಸ್ಥಾನದ ಬೀಗ ಹೊಡೆದು ಒಳನುಗ್ಗಿ ಹುಂಡಿ ತೆಗೆದುಕೊಂಡು ಪರಾರಿಯಾಗಿದ್ದಾರೆ. ಮೊದಲಿಗೆ ಬೀಗ ಹೊಡೆದು ದೇವಸ್ಥಾನಕ್ಕೆ ನುಗ್ಗಿದ ಖದೀಮರು ದೇವಸ್ಥಾನದ ಫ್ಯೂಸ್ ಕಿತ್ತು, ದೊಣ್ಣೆಯಲ್ಲಿ ಬಲ್ಪ್ ಗಳನ್ನ ಹೊಡೆದು ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆರ್​ಟಿ ನಗರ ಪೊಲೀಸರಿಂದ ನಾಲ್ವರು ಅರೆಸ್ಟ್

ಆರ್ ಟಿ ನಗರ ಡಿಜೆ ಹಳ್ಳಿಯಲ್ಲಿ ರೌಡಿಗಳ ಪುಂಡಾಟ ಪ್ರಕರಣ ಸಂಬಂಧ ಆರ್ ಟಿ ನಗರ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಟೀ ಸ್ಟಾಲ್, ಅಂಗಡಿಗಳು, ಪಾನ್ ಶಾಪ್​ನಲ್ಲಿ ತಿಂಗಳಿಗೆ ಇಂತಿಷ್ಟು ಎಂದು ಹಫ್ತಾ ವಸೂಲಿಗೆ ಮುಂದಾಗಿದ್ದ ರೌಡಿಗಳನ್ನು ಅರೆಸ್ಟ್ ಮಾಡಲಾಗಿದೆ.ಬೋಡ್ಕಾ ಇಮ್ರಾನ್ ಅಂಡ್ ಗ್ಯಾಂಗ್ ಹಫ್ತಾ ವಸೂಲಿ ಮಾಡುತ್ತಿತ್ತು.

ಬೋಡ್ಕಾ ಇಮ್ರಾನ್ ಅಂಡ್ ಗ್ಯಾಂಗ್ ರಸ್ತೆಯಲ್ಲಿ ನಿಂತಿದ್ದ ಕಾರುಗಳ ಮೇಲೆ ಲಾಂಗ್ ಬೀಸಿತ್ತು. ಬಳಿಕ ಅಂಗಡಿ ಮಾಲಿಕರಿಗೆ ಹಣ ನೀಡುವಂತೆ ಬೆದರಿಕೆ ಹಾಕಿದ್ರು. ಅಂಗಡಿ ಮುಂಗಟ್ಟುಗಳ ಮುಂದೆ ಲಾಂಗು ಹಿಡಿದು ಗಲಾಟೆ ಮಾಡಿದ್ದರು. ಘಟನೆ ಬಳಿಕ ಆರ್ ಟಿ ನಗರ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಇಮ್ರಾನ್, ಮಾಜ್, ಮೋಹನ್ ಸೇರಿ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಈ ಹಿಂದೆ ಹಲವಾರು ಕೇಸ್ ನಲ್ಲಿ ಈ ಆರೋಪಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಭ್ರೂಣ ಹತ್ಯೆ ಪತ್ತೆ: ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಲರ್ಟ್, ಟಾಸ್ಕ್ ಪೋರ್ಸ್ ರಚನೆ

ಬಾಮೈದನಿಗೆ ಚಾಕು ಇರಿದ ಭಾವ

ಬಾಮೈದನಿಗೆ ವ್ಯಕ್ತಿಯೊಬ್ಬ ಚಾಕು ಇರಿದಿದ್ದಾನೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ಸಿಡಿಹೊಸಕೋಟೆ ಯಲ್ಲಿ ಘಟನೆ ನಡೆದಿದೆ. ಪುನೀತ್ ರಾಜ್​​​​​​ನಿಗೆ ಮಣಿಕಂಠ ಎಂಬುವವನು ಚಾಕು ಇರಿದಿದ್ದಾನೆ. ಆಂಧ್ರಪ್ರದೇಶದ ಪನ್ನೂರು ಮೂಲದ ಮಣಿಕಂಠ, ಕಳೆದ ಫೆಬ್ರವರಿಯಲ್ಲಿ ಶೇತಾಳನ್ನ ಮದ್ವೆ ಆಗಿದ್ದ. ಮದ್ವೆಯಾದ 20 ದಿನಗಳಲ್ಲಿ ಶ್ವೇತಾ ತವರು ಮನೆ ಸೇರಿದ್ಲು. ಗಂಡನ ವರ್ತನೆ ಸರಿ ಇಲ್ಲ ಡೈವೊರ್ಸ್ ನೋಟಿಸ್ ಕಳುಹಿಸಿದ್ಲು. ಇದ್ರಿಂದ ರೊಚ್ಚಿಗೆದ್ದ ಮಣಿಕಂಠನೂ ಪತ್ನಿಯ ತಮ್ಮ ಪುನೀತ್ ರಾಜ್ ಮೇಲೆ ದಾಳಿ ಮಾಡಿ, ಚಾಕು ಇರಿದಿದ್ದಾನೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್