AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರಗೋಡು ಹನುಮ ಧ್ವಜ ವಿವಾದ: ಪಂಚಾಯ್ತಿ ಪಿಡಿಓ ತಲೆದಂಡ, ಇಲ್ಲಿವೆ 5 ಕಾರಣಗಳು

Mandya saffron flag Row: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಧ್ವಜ ವಿವಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಗ್ರಾಮದಲ್ಲಿ ಬೂದಿಮುಚ್ಚಿದ ಕೆಂಡದಂತಿದೆ. ಇನ್ನು ಘಟನೆ ಸಂಬಂಧ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ತಲೆದಂಡವಾಗಿದೆ. ಪಿಡಿಓ ಅಮಾನತಿಗೆ ಐದು ಕಾರಣಗಳನ್ನು ಸಹ ನೀಡಲಾಗಿದೆ.

ಕೆರಗೋಡು ಹನುಮ ಧ್ವಜ ವಿವಾದ: ಪಂಚಾಯ್ತಿ ಪಿಡಿಓ ತಲೆದಂಡ, ಇಲ್ಲಿವೆ 5 ಕಾರಣಗಳು
TV9 Web
| Edited By: |

Updated on: Jan 29, 2024 | 9:24 PM

Share

ಮಂಡ್ಯ, (ಜನವರಿ 29): ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇದರ ಮಧ್ಯೆ ಇದೀಗ ಸರ್ಕಾರದ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ಜೀವನ್‌.ಬಿ.ಎಂ ಅವರನ್ನು ಅಮಾನತು ಮಾಡಲಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಓ‌ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ತನ್ವೀರ್ ಆಶೀಫ್ ಸೇಠ್ ಆದೇಶ ಹೊರಡಿಸಿದ್ದಾರೆ.

ಗ್ರಾಮ ಪಂಚಾಯಿತಿ ಸ್ವತ್ತನ್ನು ಖಾಸಗಿಯವರಿಗೆ ನೀಡುವುದಕ್ಕೆ ಸರ್ಕಾರದ ಅನುಮತಿ ಕಡ್ಡಾಯ. ಆದ್ರೆ, ಸದರಿ ನಿಯಮ ಉಲ್ಲಂಘಿಸಿ ಖಾಸಗಿಯವರಿಗೆ ನೀಡಿ ಕೆರಗೋಡು ಗ್ರಾಮದಲ್ಲಿ ನಡೆದ ಸಂಘರ್ಷಕ್ಕೆ ಪಿಡಿಓ ನೇರ ಕಾರಣ ಎಂದು ಅಮಾನತು ಮಾಡಲಾಗಿದೆ.

ಇದನ್ನೂ ಒದಿ: ಕೆರಗೋಡು ಹನುಮ ಧ್ವಜ ಗಲಭೆ ಪ್ರಕರಣ: ನಮ್ಮ ಇಂಟಲಿಜೆನ್ಸಿ ಫೇಲಾಗಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್

ಅಮಾನತ್ತಿಗೆ ಐದು ಕಾರಣಗಳು

  • ಗ್ರಾಮ ಪಂಚಾಯಿತಿ ಸ್ವತ್ತನ್ನು ಖಾಸಗಿಯವರಿಗೆ ನೀಡುವುದಕ್ಕೆ ಸರ್ಕಾರದ ಅನುಮತಿ ಕಡ್ಡಾಯ. ಆದ್ರೆ, ಸದರಿ ನಿಯಮ ಉಲ್ಲಂಘಿಸಿ ಖಾಸಗಿಯವರಿಗೆ ನೀಡಿರುವುದು.
  • ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಿ ಕರ್ತವ್ಯ ಲೋಪ.
  • ಧ್ವಜ ಸ್ತಂಭದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲು ಅನುಮತಿ ನೀಡಿ, ಷರತ್ತು ಉಲ್ಲಂಘಿಸಿದ್ರು ಕ್ರಮಕೈಗೊಳ್ಳದೆ ನಿರ್ಲಕ್ಷ.
  • ರಾಷ್ಟ್ರ ಧ್ವಜದ ಬದಲು ಹನುಮ ಧ್ವಜ‌ ಹಾರಿಸಲು ಅವಕಾಶ ನೀಡಿರುವುದು.
  • ಹನುಮ‌ ಧ್ವಜ‌ಹಾರಿಸಿದ್ದರು ಯಾವುದೇ ಕ್ರಮ ಕೈಗೊಳ್ಳದಿರುವುದು.

ಈ ಮೇಲೆ ಐದು ಕಾರಣಗಳನ್ನು ನೀಡಿ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ಜೀವನ್‌.ಬಿ.ಎಂ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ತನ್ವೀರ್ ಆಶೀಫ್ ಸೇಠ್ ಆದೇಶ ಹೊರಡಿಸಿದ್ದಾರೆ.

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?