AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಶುಗರ್ ಕಾರ್ಖಾನೆ ಉಳಿಸಿಕೊಳ್ಳುವುದೇ ಅಥವಾ ಹೊಸ ಕಾರ್ಖಾನೆ ಆರಂಭಿಸುವುದೇ? ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಕೆಆರ್​ಎಸ್​ಗೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಅವರು ಮೈಶುಗರ್ ಕಾರ್ಖಾನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ಮೈಶುಗರ್ ಕಾರ್ಖಾನೆ ಉಳಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಇರೋದನ್ನೇ ಉಳಿಸಿಕೊಳ್ಳಬೇಕಾ? ಅಥವಾ ಹೊಸ ಕಾರ್ಖಾನೆ ಮಾಡಬೇಕಾ? ಎಂಬ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದಾರೆ.

ಮೈಶುಗರ್ ಕಾರ್ಖಾನೆ ಉಳಿಸಿಕೊಳ್ಳುವುದೇ ಅಥವಾ ಹೊಸ ಕಾರ್ಖಾನೆ ಆರಂಭಿಸುವುದೇ? ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಡಿಸಿಎಂ ಡಿಕೆ ಶಿವಕುಮಾರ್
Sunil MH
| Edited By: |

Updated on: Aug 09, 2024 | 12:41 PM

Share

ಮಂಡ್ಯ, ಆಗಸ್ಟ್​.09: ಕೆಲ ದಿನಗಳ ಹಿಂದೆ ಮಂಡ್ಯದ (Mandya) ಮೈಶುಗರ್ ಕಾರ್ಖಾನೆ ಮೈದಾನದಲ್ಲಿ ನಡೆದ ʼಜನಾಂದೋಲನ ಸಭೆʼಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ವಿಪಕ್ಷಗಳ ವಿರುದ್ಧ ಗುಡುಗಿದ್ದರು. ಇದೀಗ ಮತ್ತೆ ಕೆಆರ್​ಎಸ್​ ವೀಕ್ಷಣೆಗೆ ಬಂದು ಡಿಕೆ ಶಿವಕುಮಾರ್ ಅವರು ಮೈಶುಗರ್ ಕಾರ್ಖಾನೆ ಸಂಬಂಧ ಮಾತನಾಡಿದ್ದಾರೆ. ಮೈಶುಗರ್ ಕಾರ್ಖಾನೆ ಉಳಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಇರೋದನ್ನೇ ಉಳಿಸಿಕೊಳ್ಳಬೇಕಾ? ಅಥವಾ ಹೊಸ ಕಾರ್ಖಾನೆ ಮಾಡಬೇಕಾ? ಎಂಬ ಬಗ್ಗೆ ಚರ್ಚೆ ನಡೆದಿದೆ. ಇರುವ ಕಾರ್ಖಾನೆಗೆ ಅಗತ್ಯ ಸೌಲಭ್ಯ ಒದಗಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಸ್ಥಳೀಯ ಶಾಸಕರು ಕೆಲವು ಸಲಹೆ ಕೊಟ್ಟಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು ಕೆಆರ್​ಎಸ್​ ವೀಕ್ಷಣೆಗೆ ಬಂದಿದ್ದ ಡಿಸಿಎಂ ಡಿಕೆ ಶಿವಕುಮಾರ್, ನಿನ್ನೆ ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಸಭೆ ಮಾಡಿದ್ದೇವೆ. ಮಂಡ್ಯ, KRS ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದೇವೆ. ಮೊದಲಿಗೆ ಮೈಶುಗರ್ ಕಾರ್ಖಾನೆ ಉಳಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಸ್ಥಳೀಯ ಶಾಸಕರು ಕೆಲವು ಸಲಹೆ ಕೊಟ್ಟಿದ್ದಾರೆ. ನಂಬಿಕೆ ಉಳಿಸಿಕೊಳ್ಳುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಮೈಶುಗರ್ ಆಸ್ತಿ ಉಳಿಸಿಕೊಳ್ಳುವುದು. 5 ಸಾವಿರ TCD ಹೆಚ್ಚಿಸುವುದು. ಆ ನಂತರ ಡಿಸ್ಟಿಲರಿ ಇತರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದು, ಹೊಸ ಕಬ್ಬಿನ ತಳಿ ಪರಿಚಯಕ್ಕೂ ತೀರ್ಮಾನ ಮಾಡಲಾಗಿದೆ. 5 ಸಾವಿರ TCDಗೆ ಅಗತ್ಯ ಇರುವ ಎಲ್ಲವನ್ನೂ ಕೊಡಿಸಲು ಟೆಕ್ನಿಕಲ್ ಟೀಂ ಸಲಹೆ ನೀಡಿದೆ. ರೈತರಿಗೆ ಉತ್ತಮ ಬೆಲೆ ಕೊಡಿಸಬೇಕು. 50 TMC ಬಿಡಬೇಕಿತ್ತು. 96 TMC ಹೆಚ್ಚುವರಿಯಾಗಿ ಬಿಟ್ಟಿದ್ದೇವೆ. 150 TMC ಈಗಾಗಲೇ ಬಿಟ್ಟಿದ್ದೇವೆ. ಕೆರೆ-ಕಟ್ಟೆಗಳನ್ನ ತುಂಬಿಸಲು ಸೂಚಿಸಿದ್ದೇನೆ. ಆ ಕೆಲಸ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ಕೆಆರ್​ಎಸ್ ರೌಂಡ್ಸ್: ಕಾವೇರಿ ಅಮ್ಯೂಸ್​ಮೆಂಟ್ ಪಾರ್ಕ್ ನಿರ್ಮಾಣ ಬಗ್ಗೆ ಪರಿಶೀಲನೆ

ಹೆಚ್​ಡಿಕೆಗೆ ಟಾಂಗ್ ಕೊಟ್ಟ ಡಿಕೆಶಿ

ಇನ್ನು ಇದೇ ವೇಳೆ ತಮಿಳುನಾಡು ಸರ್ಕಾರ ಒಪ್ಪಿಸಲಿ ಎಂಬ ಹೆಚ್​ಡಿಕೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ, ದೊಡ್ಡವರ ಸುದ್ದಿ ಈಗ ಬೇಡ. ಅವರೇನು ಅನುಮತಿ ಕೊಡಿಸಬೇಕಾದ ಅವಶ್ಯಕತೆಯಿಲ್ಲ. ಕಾನೂನುಪ್ರಕಾರ ಹೋರಾಟ ಮಾಡ್ತೀವಿ. ಕಾನೂನು ಮೂಲಕ ಅನುಮತಿ ಪಡೆದುಕೊಳ್ಳುತ್ತೇವೆ. ಕಾನೂನು ನಮಗೆ ರಕ್ಷಣೆ ನೀಡಲಿದೆ. ಕೇಂದ್ರದಲ್ಲಿ ಸಚಿವರನ್ನ ಭೇಟಿ ಮಾಡಿದ್ದೇನೆ. ಅವರು ಎಂದೂ ರೈತರ ಪರ ಇದ್ದ ಉದಾಹರಣೆಯೇ ಇಲ್ಲ. ಅವರ ಬುಡುಬುಡುಕೆ ಮಾತುಗಳು ಬೇಕಿಲ್ಲ. ಹೊಸದಾಗಿ ಪಂಚೆ ಹಾಕಿದ್ದನ್ನ ಬಿಟ್ರೆ ಎಂದೂ ರೈತರ ಪರ ನಿಂತಿಲ್ಲ. ಕೇಂದ್ರ ಇರಿಗೇಸನ್ ಮಿನಿಸ್ಟರ್ ಭೇಟಿ ಮಾಡಿ ಸಭೆ ಕರೆಯುವಂತೆ ಮನವಿ ಮಾಡಿದ್ದೇವೆ. 71 TMC ಈಗಾಗಲೇ ಸಮುದ್ರಕ್ಕೆ ಹೋಗಿದೆ ಎಂದರು.

ಕಾವೇರಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಚಾಲನೆ

ಇನ್ನು ಅಧಿಕಾರಿಗಳು, ಜನಪ್ರತಿನಿಧಿಗಳನ್ನ ಒಳಗೊಂಡ ತಂಡ ಕಾವೇರಿ ಆರತಿ ಅಧ್ಯಯನಕ್ಕೆ ಪ್ರವಾಸ ಕೈಗೊಳ್ಳುತ್ತಿದೆ. ಕಾವೇರಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಈಗ ಇರುವ ಸುಮಾರು 200 ಎಕರೆ ಜಾಗದಲ್ಲೇ ಅಭಿವೃದ್ಧಿ ಪಡಿಸಲಾಗುವುದು. ನಮ್ಮ ಪರಂಪರೆ ಉಳಿಸಿಕೊಂಡು ಪಾರ್ಕ್ ಅಭಿವೃದ್ಧಿ ಮಾಡುತ್ತೇವೆ. ಟೆಂಡರ್ ಕರೆಯುತ್ತಿದ್ದೇವೆ. ಸುಮಾರು 2 ಸಾವಿರ ಕೋಟಿ ಲೆಕ್ಕಾಚಾರ ಇದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ