AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಹೆಚ್ಚಾಯ್ತು ಕಳ್ಳರ ಉಪಟಳ! ತಡೆ ಗೋಡೆಗೆ ಹಾಕಿದ ತಂತಿ ಬೇಲಿಗಳು ಮಾಯ

ಬೆಂಗಳೂರು ಮೈಸೂರು ದಶಪಥ ಹೈವೆ ಉದ್ಘಾಟನೆಯಾದ ಬಳಿಕ ಒಂದಲ್ಲ, ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಕಳಪೆ ಕಾಮಗಾರಿ, ಮಳೆ ಬಂದಾಗ ನೀರು ನಿಂತು ಸುದ್ದಿಯಾಗಿದ್ದ ಹೈವೆ, ಈಗ ಕಳ್ಳರ ಉಪಟಳದಿಂದ ಮತ್ತೆ ಸುದ್ದಿಯಾಗಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಹೆಚ್ಚಾಯ್ತು ಕಳ್ಳರ ಉಪಟಳ! ತಡೆ ಗೋಡೆಗೆ ಹಾಕಿದ ತಂತಿ ಬೇಲಿಗಳು ಮಾಯ
ಬೆಂಗಳೂರು ಮೈಸೂರು ಹೈವೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 18, 2023 | 12:47 PM

ಮಂಡ್ಯ: ತಡೆಗೋಡೆಗೆ ಹಾಕಿರುವ ತಂತಿ ಬೇಲಿಗಳ ಕಣ್ಮರೆ. ಸಾಲು ಸಾಲಾಗಿ ಬಿದ್ದಿರುವ ಕಬ್ಬಿಣದ ರಾಡ್​ಗಳು, ವೇಗವಾಗಿ ಸಂಚರಿಸುತ್ತಿರುವ ವಾಹನಗಳು. ಈ ಎಲ್ಲಾ ದೃಶ್ಯ ಕಂಡು ಬಂದಿದ್ದು ಮಂಡ್ಯ(Mandya) ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ದಶಪಥ ರಸ್ತೆಯಲ್ಲಿ. ಹೌದು ಬೆಂಗಳೂರು ಮೈಸೂರು ದಶಪಥ ರಸ್ತೆ(Bengaluru Mysuru Expressway) ಈಗ ಮತ್ತೊಮ್ಮೆ ಸುದ್ದಿಯಾಗಿದೆ. ತಡೆಗೋಡೆಗೆ ಹಾಕಿರುವ ತಂತಿಯ ಮೇಲೆ ಈಗ ಕಳ್ಳರ ಕಣ್ಣು ಬಿದ್ದಿದೆ. ಮದ್ದೂರು ಮಂಡ್ಯಕ್ಕೆ ಬರುವ ಮಾರ್ಗದ ಮದ್ಯೆ ಸುಮಾರು 20 ಕಡೆ ಕಳ್ಳರು ತಂತಿ ಬೇಲಿಯನ್ನ ಕದ್ದು ಎಸ್ಕೇಪಾಗಿದ್ದು, ಈಗ ಪೊಲಿಸರಿಗೆ ಹೊಸತೊಂದು ತಲೆ ನೋವು ಸೃಷ್ಠಿ ಮಾಡಿದೆ.

ಈ ಹಿಂದೆ ರಾಷ್ಟ್ರೀಯ ಹೆದ್ದಾರಿ 275 ರ ಅಕ್ಕ ಪಕ್ಕದಲ್ಲಿರುವ ಬೃಹತ್ ವಿದ್ಯುತ್ ಕಂಬಕ್ಕೆ ಅಳವಡಿಸಿದ್ದ ಅಲ್ಯೂಮಿನಿಯಮ್ ಪ್ಲೇಟ್​ಗಳನ್ನ ಕಳ್ಳರು ಕದಿಯುತ್ತಿದ್ರು, ಈ ವಿಚಾರವಾಗಿ ಸಾಕಷ್ಟು ಸುದ್ದಿಯಾಗಿತ್ತು. ಈಗ ತಂತಿ ಬೇಲಿಗಳನ್ನ ಕದ್ದು ಮತ್ತೆ ಸುದ್ದಿಯಾಗುತ್ತಿದೆ. ತಂತಿ ಬೇಲಿ ಕಳವು ಮಾಡಿದ ಪರಿಣಾಮ ಪಾದಾಚಾರಿಗಳು, ದನಕರಗಳು ಶ್ವಾನಗಳು ಎಕ್ಸ್ ಪ್ರೆಸ್ ಹೈವೆಗೆ ಎಂಟ್ರಿಯಾಗುತ್ತಿದೆ. ಇದರ ಪರಿಣಾಮ ವೇಗವಾಗಿ ಸಂಚರಿಸುವ ವಾಹನಗಳಿಗೆ ಸಿಕ್ಕು ಅಪಘಾತವಾಗುವ ಸಾದ್ಯತೆಗಳು ಸಹ ಹೆಚ್ಚಾಗಿದ್ದು, ಹೈವೆ ಅಥಾರಿಟಿ ಅಧಿಕಾರಿಗಳು ಕಳ್ಳರ ಕೈ ಚಳಕಕ್ಕೆ ಬೇಸತ್ತು ಹೋಗಿದ್ದಾರೆ.

ಇದನ್ನೂ ಓದಿ:ರೈಲ್ವೆ ಪ್ರಯಾಣದ ವೇಳೆ ವಸ್ತುಗಳು ಕಳ್ಳತನವಾದರೇ ರೈಲ್ವೆ ಇಲಾಖೆ ಹೊಣೆಯಲ್ಲ: ಸುಪ್ರಿಂ ಕೋರ್ಟ್​

ಅದೇನೆ ಹೇಳಿ ಕಳ್ಳರ ಕಾಟಕ್ಕೆ ಪೊಲೀಸ್ ಇಲಾಖೆ ಹಾಗೂ ಹೈವೆ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳಿಗೆ ಹೊಸತೊಂದು ಪಜೀತಿ ಸೃಷ್ಠಿಯಾಗಿದ್ದು. ಆದಷ್ಟು ಬೇಗ ಕಳ್ಳರ ಕೈಗೆ ಪೊಲೀಸರು ಕೋಳ ತೊಡಿಸಬೇಕಿದೆ. ಅದೇ ರೀತಿ ಮತ್ತೆ ತಂತಿ ಬೇಲಿ ಅಳವಡಿಸಿ ಮುಂದಾಗುವ ಅವಘಡಕ್ಕೆ ಬ್ರೇಕ್ ಹಾಕಬೇಕಿದೆ.

ವರದಿ: ಸೂರಜ್ ಪ್ರಸಾದ್ ಟಿವಿ9 ಮಂಡ್ಯ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Sun, 18 June 23

ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್