AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಹೆಚ್ಚಾಯ್ತು ಕಳ್ಳರ ಉಪಟಳ! ತಡೆ ಗೋಡೆಗೆ ಹಾಕಿದ ತಂತಿ ಬೇಲಿಗಳು ಮಾಯ

ಬೆಂಗಳೂರು ಮೈಸೂರು ದಶಪಥ ಹೈವೆ ಉದ್ಘಾಟನೆಯಾದ ಬಳಿಕ ಒಂದಲ್ಲ, ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಕಳಪೆ ಕಾಮಗಾರಿ, ಮಳೆ ಬಂದಾಗ ನೀರು ನಿಂತು ಸುದ್ದಿಯಾಗಿದ್ದ ಹೈವೆ, ಈಗ ಕಳ್ಳರ ಉಪಟಳದಿಂದ ಮತ್ತೆ ಸುದ್ದಿಯಾಗಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಹೆಚ್ಚಾಯ್ತು ಕಳ್ಳರ ಉಪಟಳ! ತಡೆ ಗೋಡೆಗೆ ಹಾಕಿದ ತಂತಿ ಬೇಲಿಗಳು ಮಾಯ
ಬೆಂಗಳೂರು ಮೈಸೂರು ಹೈವೆ
ಕಿರಣ್ ಹನುಮಂತ್​ ಮಾದಾರ್
|

Updated on:Jun 18, 2023 | 12:47 PM

Share

ಮಂಡ್ಯ: ತಡೆಗೋಡೆಗೆ ಹಾಕಿರುವ ತಂತಿ ಬೇಲಿಗಳ ಕಣ್ಮರೆ. ಸಾಲು ಸಾಲಾಗಿ ಬಿದ್ದಿರುವ ಕಬ್ಬಿಣದ ರಾಡ್​ಗಳು, ವೇಗವಾಗಿ ಸಂಚರಿಸುತ್ತಿರುವ ವಾಹನಗಳು. ಈ ಎಲ್ಲಾ ದೃಶ್ಯ ಕಂಡು ಬಂದಿದ್ದು ಮಂಡ್ಯ(Mandya) ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ದಶಪಥ ರಸ್ತೆಯಲ್ಲಿ. ಹೌದು ಬೆಂಗಳೂರು ಮೈಸೂರು ದಶಪಥ ರಸ್ತೆ(Bengaluru Mysuru Expressway) ಈಗ ಮತ್ತೊಮ್ಮೆ ಸುದ್ದಿಯಾಗಿದೆ. ತಡೆಗೋಡೆಗೆ ಹಾಕಿರುವ ತಂತಿಯ ಮೇಲೆ ಈಗ ಕಳ್ಳರ ಕಣ್ಣು ಬಿದ್ದಿದೆ. ಮದ್ದೂರು ಮಂಡ್ಯಕ್ಕೆ ಬರುವ ಮಾರ್ಗದ ಮದ್ಯೆ ಸುಮಾರು 20 ಕಡೆ ಕಳ್ಳರು ತಂತಿ ಬೇಲಿಯನ್ನ ಕದ್ದು ಎಸ್ಕೇಪಾಗಿದ್ದು, ಈಗ ಪೊಲಿಸರಿಗೆ ಹೊಸತೊಂದು ತಲೆ ನೋವು ಸೃಷ್ಠಿ ಮಾಡಿದೆ.

ಈ ಹಿಂದೆ ರಾಷ್ಟ್ರೀಯ ಹೆದ್ದಾರಿ 275 ರ ಅಕ್ಕ ಪಕ್ಕದಲ್ಲಿರುವ ಬೃಹತ್ ವಿದ್ಯುತ್ ಕಂಬಕ್ಕೆ ಅಳವಡಿಸಿದ್ದ ಅಲ್ಯೂಮಿನಿಯಮ್ ಪ್ಲೇಟ್​ಗಳನ್ನ ಕಳ್ಳರು ಕದಿಯುತ್ತಿದ್ರು, ಈ ವಿಚಾರವಾಗಿ ಸಾಕಷ್ಟು ಸುದ್ದಿಯಾಗಿತ್ತು. ಈಗ ತಂತಿ ಬೇಲಿಗಳನ್ನ ಕದ್ದು ಮತ್ತೆ ಸುದ್ದಿಯಾಗುತ್ತಿದೆ. ತಂತಿ ಬೇಲಿ ಕಳವು ಮಾಡಿದ ಪರಿಣಾಮ ಪಾದಾಚಾರಿಗಳು, ದನಕರಗಳು ಶ್ವಾನಗಳು ಎಕ್ಸ್ ಪ್ರೆಸ್ ಹೈವೆಗೆ ಎಂಟ್ರಿಯಾಗುತ್ತಿದೆ. ಇದರ ಪರಿಣಾಮ ವೇಗವಾಗಿ ಸಂಚರಿಸುವ ವಾಹನಗಳಿಗೆ ಸಿಕ್ಕು ಅಪಘಾತವಾಗುವ ಸಾದ್ಯತೆಗಳು ಸಹ ಹೆಚ್ಚಾಗಿದ್ದು, ಹೈವೆ ಅಥಾರಿಟಿ ಅಧಿಕಾರಿಗಳು ಕಳ್ಳರ ಕೈ ಚಳಕಕ್ಕೆ ಬೇಸತ್ತು ಹೋಗಿದ್ದಾರೆ.

ಇದನ್ನೂ ಓದಿ:ರೈಲ್ವೆ ಪ್ರಯಾಣದ ವೇಳೆ ವಸ್ತುಗಳು ಕಳ್ಳತನವಾದರೇ ರೈಲ್ವೆ ಇಲಾಖೆ ಹೊಣೆಯಲ್ಲ: ಸುಪ್ರಿಂ ಕೋರ್ಟ್​

ಅದೇನೆ ಹೇಳಿ ಕಳ್ಳರ ಕಾಟಕ್ಕೆ ಪೊಲೀಸ್ ಇಲಾಖೆ ಹಾಗೂ ಹೈವೆ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳಿಗೆ ಹೊಸತೊಂದು ಪಜೀತಿ ಸೃಷ್ಠಿಯಾಗಿದ್ದು. ಆದಷ್ಟು ಬೇಗ ಕಳ್ಳರ ಕೈಗೆ ಪೊಲೀಸರು ಕೋಳ ತೊಡಿಸಬೇಕಿದೆ. ಅದೇ ರೀತಿ ಮತ್ತೆ ತಂತಿ ಬೇಲಿ ಅಳವಡಿಸಿ ಮುಂದಾಗುವ ಅವಘಡಕ್ಕೆ ಬ್ರೇಕ್ ಹಾಕಬೇಕಿದೆ.

ವರದಿ: ಸೂರಜ್ ಪ್ರಸಾದ್ ಟಿವಿ9 ಮಂಡ್ಯ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Sun, 18 June 23

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು