AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಹೆಚ್ಚಾಯ್ತು ಕಳ್ಳರ ಉಪಟಳ! ತಡೆ ಗೋಡೆಗೆ ಹಾಕಿದ ತಂತಿ ಬೇಲಿಗಳು ಮಾಯ

ಬೆಂಗಳೂರು ಮೈಸೂರು ದಶಪಥ ಹೈವೆ ಉದ್ಘಾಟನೆಯಾದ ಬಳಿಕ ಒಂದಲ್ಲ, ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಕಳಪೆ ಕಾಮಗಾರಿ, ಮಳೆ ಬಂದಾಗ ನೀರು ನಿಂತು ಸುದ್ದಿಯಾಗಿದ್ದ ಹೈವೆ, ಈಗ ಕಳ್ಳರ ಉಪಟಳದಿಂದ ಮತ್ತೆ ಸುದ್ದಿಯಾಗಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಹೆಚ್ಚಾಯ್ತು ಕಳ್ಳರ ಉಪಟಳ! ತಡೆ ಗೋಡೆಗೆ ಹಾಕಿದ ತಂತಿ ಬೇಲಿಗಳು ಮಾಯ
ಬೆಂಗಳೂರು ಮೈಸೂರು ಹೈವೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Jun 18, 2023 | 12:47 PM

Share

ಮಂಡ್ಯ: ತಡೆಗೋಡೆಗೆ ಹಾಕಿರುವ ತಂತಿ ಬೇಲಿಗಳ ಕಣ್ಮರೆ. ಸಾಲು ಸಾಲಾಗಿ ಬಿದ್ದಿರುವ ಕಬ್ಬಿಣದ ರಾಡ್​ಗಳು, ವೇಗವಾಗಿ ಸಂಚರಿಸುತ್ತಿರುವ ವಾಹನಗಳು. ಈ ಎಲ್ಲಾ ದೃಶ್ಯ ಕಂಡು ಬಂದಿದ್ದು ಮಂಡ್ಯ(Mandya) ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ದಶಪಥ ರಸ್ತೆಯಲ್ಲಿ. ಹೌದು ಬೆಂಗಳೂರು ಮೈಸೂರು ದಶಪಥ ರಸ್ತೆ(Bengaluru Mysuru Expressway) ಈಗ ಮತ್ತೊಮ್ಮೆ ಸುದ್ದಿಯಾಗಿದೆ. ತಡೆಗೋಡೆಗೆ ಹಾಕಿರುವ ತಂತಿಯ ಮೇಲೆ ಈಗ ಕಳ್ಳರ ಕಣ್ಣು ಬಿದ್ದಿದೆ. ಮದ್ದೂರು ಮಂಡ್ಯಕ್ಕೆ ಬರುವ ಮಾರ್ಗದ ಮದ್ಯೆ ಸುಮಾರು 20 ಕಡೆ ಕಳ್ಳರು ತಂತಿ ಬೇಲಿಯನ್ನ ಕದ್ದು ಎಸ್ಕೇಪಾಗಿದ್ದು, ಈಗ ಪೊಲಿಸರಿಗೆ ಹೊಸತೊಂದು ತಲೆ ನೋವು ಸೃಷ್ಠಿ ಮಾಡಿದೆ.

ಈ ಹಿಂದೆ ರಾಷ್ಟ್ರೀಯ ಹೆದ್ದಾರಿ 275 ರ ಅಕ್ಕ ಪಕ್ಕದಲ್ಲಿರುವ ಬೃಹತ್ ವಿದ್ಯುತ್ ಕಂಬಕ್ಕೆ ಅಳವಡಿಸಿದ್ದ ಅಲ್ಯೂಮಿನಿಯಮ್ ಪ್ಲೇಟ್​ಗಳನ್ನ ಕಳ್ಳರು ಕದಿಯುತ್ತಿದ್ರು, ಈ ವಿಚಾರವಾಗಿ ಸಾಕಷ್ಟು ಸುದ್ದಿಯಾಗಿತ್ತು. ಈಗ ತಂತಿ ಬೇಲಿಗಳನ್ನ ಕದ್ದು ಮತ್ತೆ ಸುದ್ದಿಯಾಗುತ್ತಿದೆ. ತಂತಿ ಬೇಲಿ ಕಳವು ಮಾಡಿದ ಪರಿಣಾಮ ಪಾದಾಚಾರಿಗಳು, ದನಕರಗಳು ಶ್ವಾನಗಳು ಎಕ್ಸ್ ಪ್ರೆಸ್ ಹೈವೆಗೆ ಎಂಟ್ರಿಯಾಗುತ್ತಿದೆ. ಇದರ ಪರಿಣಾಮ ವೇಗವಾಗಿ ಸಂಚರಿಸುವ ವಾಹನಗಳಿಗೆ ಸಿಕ್ಕು ಅಪಘಾತವಾಗುವ ಸಾದ್ಯತೆಗಳು ಸಹ ಹೆಚ್ಚಾಗಿದ್ದು, ಹೈವೆ ಅಥಾರಿಟಿ ಅಧಿಕಾರಿಗಳು ಕಳ್ಳರ ಕೈ ಚಳಕಕ್ಕೆ ಬೇಸತ್ತು ಹೋಗಿದ್ದಾರೆ.

ಇದನ್ನೂ ಓದಿ:ರೈಲ್ವೆ ಪ್ರಯಾಣದ ವೇಳೆ ವಸ್ತುಗಳು ಕಳ್ಳತನವಾದರೇ ರೈಲ್ವೆ ಇಲಾಖೆ ಹೊಣೆಯಲ್ಲ: ಸುಪ್ರಿಂ ಕೋರ್ಟ್​

ಅದೇನೆ ಹೇಳಿ ಕಳ್ಳರ ಕಾಟಕ್ಕೆ ಪೊಲೀಸ್ ಇಲಾಖೆ ಹಾಗೂ ಹೈವೆ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳಿಗೆ ಹೊಸತೊಂದು ಪಜೀತಿ ಸೃಷ್ಠಿಯಾಗಿದ್ದು. ಆದಷ್ಟು ಬೇಗ ಕಳ್ಳರ ಕೈಗೆ ಪೊಲೀಸರು ಕೋಳ ತೊಡಿಸಬೇಕಿದೆ. ಅದೇ ರೀತಿ ಮತ್ತೆ ತಂತಿ ಬೇಲಿ ಅಳವಡಿಸಿ ಮುಂದಾಗುವ ಅವಘಡಕ್ಕೆ ಬ್ರೇಕ್ ಹಾಕಬೇಕಿದೆ.

ವರದಿ: ಸೂರಜ್ ಪ್ರಸಾದ್ ಟಿವಿ9 ಮಂಡ್ಯ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Sun, 18 June 23

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ