AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಹೆಚ್ಚಾಯ್ತು ಕಳ್ಳರ ಉಪಟಳ! ತಡೆ ಗೋಡೆಗೆ ಹಾಕಿದ ತಂತಿ ಬೇಲಿಗಳು ಮಾಯ

ಬೆಂಗಳೂರು ಮೈಸೂರು ದಶಪಥ ಹೈವೆ ಉದ್ಘಾಟನೆಯಾದ ಬಳಿಕ ಒಂದಲ್ಲ, ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಕಳಪೆ ಕಾಮಗಾರಿ, ಮಳೆ ಬಂದಾಗ ನೀರು ನಿಂತು ಸುದ್ದಿಯಾಗಿದ್ದ ಹೈವೆ, ಈಗ ಕಳ್ಳರ ಉಪಟಳದಿಂದ ಮತ್ತೆ ಸುದ್ದಿಯಾಗಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಹೆಚ್ಚಾಯ್ತು ಕಳ್ಳರ ಉಪಟಳ! ತಡೆ ಗೋಡೆಗೆ ಹಾಕಿದ ತಂತಿ ಬೇಲಿಗಳು ಮಾಯ
ಬೆಂಗಳೂರು ಮೈಸೂರು ಹೈವೆ
ಕಿರಣ್ ಹನುಮಂತ್​ ಮಾದಾರ್
|

Updated on:Jun 18, 2023 | 12:47 PM

Share

ಮಂಡ್ಯ: ತಡೆಗೋಡೆಗೆ ಹಾಕಿರುವ ತಂತಿ ಬೇಲಿಗಳ ಕಣ್ಮರೆ. ಸಾಲು ಸಾಲಾಗಿ ಬಿದ್ದಿರುವ ಕಬ್ಬಿಣದ ರಾಡ್​ಗಳು, ವೇಗವಾಗಿ ಸಂಚರಿಸುತ್ತಿರುವ ವಾಹನಗಳು. ಈ ಎಲ್ಲಾ ದೃಶ್ಯ ಕಂಡು ಬಂದಿದ್ದು ಮಂಡ್ಯ(Mandya) ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ದಶಪಥ ರಸ್ತೆಯಲ್ಲಿ. ಹೌದು ಬೆಂಗಳೂರು ಮೈಸೂರು ದಶಪಥ ರಸ್ತೆ(Bengaluru Mysuru Expressway) ಈಗ ಮತ್ತೊಮ್ಮೆ ಸುದ್ದಿಯಾಗಿದೆ. ತಡೆಗೋಡೆಗೆ ಹಾಕಿರುವ ತಂತಿಯ ಮೇಲೆ ಈಗ ಕಳ್ಳರ ಕಣ್ಣು ಬಿದ್ದಿದೆ. ಮದ್ದೂರು ಮಂಡ್ಯಕ್ಕೆ ಬರುವ ಮಾರ್ಗದ ಮದ್ಯೆ ಸುಮಾರು 20 ಕಡೆ ಕಳ್ಳರು ತಂತಿ ಬೇಲಿಯನ್ನ ಕದ್ದು ಎಸ್ಕೇಪಾಗಿದ್ದು, ಈಗ ಪೊಲಿಸರಿಗೆ ಹೊಸತೊಂದು ತಲೆ ನೋವು ಸೃಷ್ಠಿ ಮಾಡಿದೆ.

ಈ ಹಿಂದೆ ರಾಷ್ಟ್ರೀಯ ಹೆದ್ದಾರಿ 275 ರ ಅಕ್ಕ ಪಕ್ಕದಲ್ಲಿರುವ ಬೃಹತ್ ವಿದ್ಯುತ್ ಕಂಬಕ್ಕೆ ಅಳವಡಿಸಿದ್ದ ಅಲ್ಯೂಮಿನಿಯಮ್ ಪ್ಲೇಟ್​ಗಳನ್ನ ಕಳ್ಳರು ಕದಿಯುತ್ತಿದ್ರು, ಈ ವಿಚಾರವಾಗಿ ಸಾಕಷ್ಟು ಸುದ್ದಿಯಾಗಿತ್ತು. ಈಗ ತಂತಿ ಬೇಲಿಗಳನ್ನ ಕದ್ದು ಮತ್ತೆ ಸುದ್ದಿಯಾಗುತ್ತಿದೆ. ತಂತಿ ಬೇಲಿ ಕಳವು ಮಾಡಿದ ಪರಿಣಾಮ ಪಾದಾಚಾರಿಗಳು, ದನಕರಗಳು ಶ್ವಾನಗಳು ಎಕ್ಸ್ ಪ್ರೆಸ್ ಹೈವೆಗೆ ಎಂಟ್ರಿಯಾಗುತ್ತಿದೆ. ಇದರ ಪರಿಣಾಮ ವೇಗವಾಗಿ ಸಂಚರಿಸುವ ವಾಹನಗಳಿಗೆ ಸಿಕ್ಕು ಅಪಘಾತವಾಗುವ ಸಾದ್ಯತೆಗಳು ಸಹ ಹೆಚ್ಚಾಗಿದ್ದು, ಹೈವೆ ಅಥಾರಿಟಿ ಅಧಿಕಾರಿಗಳು ಕಳ್ಳರ ಕೈ ಚಳಕಕ್ಕೆ ಬೇಸತ್ತು ಹೋಗಿದ್ದಾರೆ.

ಇದನ್ನೂ ಓದಿ:ರೈಲ್ವೆ ಪ್ರಯಾಣದ ವೇಳೆ ವಸ್ತುಗಳು ಕಳ್ಳತನವಾದರೇ ರೈಲ್ವೆ ಇಲಾಖೆ ಹೊಣೆಯಲ್ಲ: ಸುಪ್ರಿಂ ಕೋರ್ಟ್​

ಅದೇನೆ ಹೇಳಿ ಕಳ್ಳರ ಕಾಟಕ್ಕೆ ಪೊಲೀಸ್ ಇಲಾಖೆ ಹಾಗೂ ಹೈವೆ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳಿಗೆ ಹೊಸತೊಂದು ಪಜೀತಿ ಸೃಷ್ಠಿಯಾಗಿದ್ದು. ಆದಷ್ಟು ಬೇಗ ಕಳ್ಳರ ಕೈಗೆ ಪೊಲೀಸರು ಕೋಳ ತೊಡಿಸಬೇಕಿದೆ. ಅದೇ ರೀತಿ ಮತ್ತೆ ತಂತಿ ಬೇಲಿ ಅಳವಡಿಸಿ ಮುಂದಾಗುವ ಅವಘಡಕ್ಕೆ ಬ್ರೇಕ್ ಹಾಕಬೇಕಿದೆ.

ವರದಿ: ಸೂರಜ್ ಪ್ರಸಾದ್ ಟಿವಿ9 ಮಂಡ್ಯ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Sun, 18 June 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ