ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಹೆಚ್ಚಾಯ್ತು ಕಳ್ಳರ ಉಪಟಳ! ತಡೆ ಗೋಡೆಗೆ ಹಾಕಿದ ತಂತಿ ಬೇಲಿಗಳು ಮಾಯ

ಬೆಂಗಳೂರು ಮೈಸೂರು ದಶಪಥ ಹೈವೆ ಉದ್ಘಾಟನೆಯಾದ ಬಳಿಕ ಒಂದಲ್ಲ, ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಕಳಪೆ ಕಾಮಗಾರಿ, ಮಳೆ ಬಂದಾಗ ನೀರು ನಿಂತು ಸುದ್ದಿಯಾಗಿದ್ದ ಹೈವೆ, ಈಗ ಕಳ್ಳರ ಉಪಟಳದಿಂದ ಮತ್ತೆ ಸುದ್ದಿಯಾಗಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಹೆಚ್ಚಾಯ್ತು ಕಳ್ಳರ ಉಪಟಳ! ತಡೆ ಗೋಡೆಗೆ ಹಾಕಿದ ತಂತಿ ಬೇಲಿಗಳು ಮಾಯ
ಬೆಂಗಳೂರು ಮೈಸೂರು ಹೈವೆ
Follow us
|

Updated on:Jun 18, 2023 | 12:47 PM

ಮಂಡ್ಯ: ತಡೆಗೋಡೆಗೆ ಹಾಕಿರುವ ತಂತಿ ಬೇಲಿಗಳ ಕಣ್ಮರೆ. ಸಾಲು ಸಾಲಾಗಿ ಬಿದ್ದಿರುವ ಕಬ್ಬಿಣದ ರಾಡ್​ಗಳು, ವೇಗವಾಗಿ ಸಂಚರಿಸುತ್ತಿರುವ ವಾಹನಗಳು. ಈ ಎಲ್ಲಾ ದೃಶ್ಯ ಕಂಡು ಬಂದಿದ್ದು ಮಂಡ್ಯ(Mandya) ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ದಶಪಥ ರಸ್ತೆಯಲ್ಲಿ. ಹೌದು ಬೆಂಗಳೂರು ಮೈಸೂರು ದಶಪಥ ರಸ್ತೆ(Bengaluru Mysuru Expressway) ಈಗ ಮತ್ತೊಮ್ಮೆ ಸುದ್ದಿಯಾಗಿದೆ. ತಡೆಗೋಡೆಗೆ ಹಾಕಿರುವ ತಂತಿಯ ಮೇಲೆ ಈಗ ಕಳ್ಳರ ಕಣ್ಣು ಬಿದ್ದಿದೆ. ಮದ್ದೂರು ಮಂಡ್ಯಕ್ಕೆ ಬರುವ ಮಾರ್ಗದ ಮದ್ಯೆ ಸುಮಾರು 20 ಕಡೆ ಕಳ್ಳರು ತಂತಿ ಬೇಲಿಯನ್ನ ಕದ್ದು ಎಸ್ಕೇಪಾಗಿದ್ದು, ಈಗ ಪೊಲಿಸರಿಗೆ ಹೊಸತೊಂದು ತಲೆ ನೋವು ಸೃಷ್ಠಿ ಮಾಡಿದೆ.

ಈ ಹಿಂದೆ ರಾಷ್ಟ್ರೀಯ ಹೆದ್ದಾರಿ 275 ರ ಅಕ್ಕ ಪಕ್ಕದಲ್ಲಿರುವ ಬೃಹತ್ ವಿದ್ಯುತ್ ಕಂಬಕ್ಕೆ ಅಳವಡಿಸಿದ್ದ ಅಲ್ಯೂಮಿನಿಯಮ್ ಪ್ಲೇಟ್​ಗಳನ್ನ ಕಳ್ಳರು ಕದಿಯುತ್ತಿದ್ರು, ಈ ವಿಚಾರವಾಗಿ ಸಾಕಷ್ಟು ಸುದ್ದಿಯಾಗಿತ್ತು. ಈಗ ತಂತಿ ಬೇಲಿಗಳನ್ನ ಕದ್ದು ಮತ್ತೆ ಸುದ್ದಿಯಾಗುತ್ತಿದೆ. ತಂತಿ ಬೇಲಿ ಕಳವು ಮಾಡಿದ ಪರಿಣಾಮ ಪಾದಾಚಾರಿಗಳು, ದನಕರಗಳು ಶ್ವಾನಗಳು ಎಕ್ಸ್ ಪ್ರೆಸ್ ಹೈವೆಗೆ ಎಂಟ್ರಿಯಾಗುತ್ತಿದೆ. ಇದರ ಪರಿಣಾಮ ವೇಗವಾಗಿ ಸಂಚರಿಸುವ ವಾಹನಗಳಿಗೆ ಸಿಕ್ಕು ಅಪಘಾತವಾಗುವ ಸಾದ್ಯತೆಗಳು ಸಹ ಹೆಚ್ಚಾಗಿದ್ದು, ಹೈವೆ ಅಥಾರಿಟಿ ಅಧಿಕಾರಿಗಳು ಕಳ್ಳರ ಕೈ ಚಳಕಕ್ಕೆ ಬೇಸತ್ತು ಹೋಗಿದ್ದಾರೆ.

ಇದನ್ನೂ ಓದಿ:ರೈಲ್ವೆ ಪ್ರಯಾಣದ ವೇಳೆ ವಸ್ತುಗಳು ಕಳ್ಳತನವಾದರೇ ರೈಲ್ವೆ ಇಲಾಖೆ ಹೊಣೆಯಲ್ಲ: ಸುಪ್ರಿಂ ಕೋರ್ಟ್​

ಅದೇನೆ ಹೇಳಿ ಕಳ್ಳರ ಕಾಟಕ್ಕೆ ಪೊಲೀಸ್ ಇಲಾಖೆ ಹಾಗೂ ಹೈವೆ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳಿಗೆ ಹೊಸತೊಂದು ಪಜೀತಿ ಸೃಷ್ಠಿಯಾಗಿದ್ದು. ಆದಷ್ಟು ಬೇಗ ಕಳ್ಳರ ಕೈಗೆ ಪೊಲೀಸರು ಕೋಳ ತೊಡಿಸಬೇಕಿದೆ. ಅದೇ ರೀತಿ ಮತ್ತೆ ತಂತಿ ಬೇಲಿ ಅಳವಡಿಸಿ ಮುಂದಾಗುವ ಅವಘಡಕ್ಕೆ ಬ್ರೇಕ್ ಹಾಕಬೇಕಿದೆ.

ವರದಿ: ಸೂರಜ್ ಪ್ರಸಾದ್ ಟಿವಿ9 ಮಂಡ್ಯ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Sun, 18 June 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ