ಪಾಂಡವಪುರ: ಅರಳಕುಪ್ಪೆ ಗ್ರಾಮದಲ್ಲಿ ಭತ್ತ ನಾಟಿ ಮಾಡಿದ ಹೆಚ್​​ಡಿ ಕುಮಾರಸ್ವಾಮಿ, ವಿಡಿಯೋ ನೋಡಿ

ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಜಮೀನಿನಲ್ಲಿ ಭತ್ತದ ನಾಟಿ ಮಾಡಿದರು. ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಜೆಡಿಎಸ್​ ನಾಯಕರು ಸಾಥ್​ ನೀಡಿದರು.

Follow us
| Updated By: ವಿವೇಕ ಬಿರಾದಾರ

Updated on: Aug 11, 2024 | 2:34 PM

ಮಂಡ್ಯ, ಆಗಸ್ಟ್​ 11: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ರವಿವಾರ ಮಂಡ್ಯ (Mandya) ಜಿಲ್ಲೆ ಪಾಂಡವಪುರ (Pandavapur) ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಜಮೀನಿನಲ್ಲಿ ಭತ್ತ ನಾಟಿ ಮಾಡಿದರು. ಭತ್ತದ ನಾಟಿಗೂ ಮೊದಲು ಹೆಚ್​ಡಿ ಕುಮಾರಸ್ವಾಮಿ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಹೆಚ್​​ಡಿ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ನಾಯಕರ ಸಾಥ್ ನೀಡಿದ್ದರು. ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಈ ಹಿಂದೆ 2018ರಲ್ಲೂ ಕಾವೇರಿ ಮಾತೆಗೆ ಪೂಜೆ ಮಾಡಿ ಭತ್ತ ನಾಟಿ ಮಾಡಿದ್ದರು.

ಭತ್ತ ನಾಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಕೆಆರ್​ಎಸ್​ ಡ್ಯಾಂ ಭರ್ತಿಯಾಗಿದ್ದು, ಹೀಗಾಗಿ ಅರಳಕುಪ್ಪೆ ಗ್ರಾಮಕ್ಕೆ ಬಂದು ಭತ್ತ ನಾಟಿ ಮಾಡುವಂತೆ ರೈತರು ಮನವಿ ಮಾಡಿದರು. ರೈತ ಮಹಿಳೆಯರ ಜೊತೆಗೂಡಿ ಭತ್ತದ ನಾಟಿ ಮಾಡಿದ್ದೇನೆ. ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ನಾಟಿ ಮಾಡಿದ್ದೆ. ಈಗ ಕೇಂದ್ರದ ಮಂತ್ರಿ ಆಗಿದ್ದೇನೆ. ರೈತರಿಗೆ ಆತ್ಮಸೈರ್ಯ ತುಂಬಲು ಈ ರೀತಿ ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಗೇಟ್ ಕಟ್​ಗೆ ಸ್ಫೋಟಕ ಕಾರಣ ಕೊಟ್ಟ ಎಚ್​​ಡಿಕೆ, ಜತೆಗೊಂದು ಸಲಹೆ

2018ರಲ್ಲಿ ನಾಟಿ ಮಾಡಿದಾಗ ಉತ್ತಮ ಉಳುವರಿ ಬಂದಿತ್ತು. ನಾಟಿಯ ಜೊತೆಗೆ ಬೆಳೆ ಕೈಗೆ ಬಂದಾಗ ಪೂಜೆಯನ್ನು ಸಹ ಮಾಡಿದ್ದೆ. ರೈತರ ಬದುಕಿನ ಕಷ್ಟಗಳನ್ನು ನೋಡಿ ಅನುಭವಿಸಿದ್ದೇವೆ. ಎಷ್ಟೇ ಕಷ್ಟ ಬಂದರೂ ರೈತರು ಬೆಳೆ ಬೆಳೆಯುತ್ತಾರೆ. ಈ ದೇಶ ಉಳಿಯಲು ರೈತರು ಉಳಿಯಬೇಕು ಎಂದು ಹೇಳಿದರು.

ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಕುರ್ಚಿ ಭದ್ರವಾಗಿರುತ್ತೆ. ಆದರೆ ಸಿಎಂ ಕುರ್ಚಿ ಮೇಲೆ ಕುಳಿತವರ ಸ್ಥಾನ ಭದ್ರವಿರುವುದಿಲ್ಲ. ಮುಡಾ ಹಗರಣದ ವಿರುದ್ಧ ಮೈಸೂರಿನವರೆಗೆ ಪಾದಯಾತ್ರೆ ಮಾಡಿದ್ವಿ. ಜನರ ಪರವಾಗಿ ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಡೆಸಿದ್ದೇವೆ. ಸರ್ಕಾರದ ಅಕ್ರಮಗಳ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಮುಂದೆ ಕಾನೂನು ಹೋರಾಟವು ಸಹ ನಡೆಯುತ್ತೆ ಎಂದು ತಿಳಿಸಿದರು.

ನಮ್ಮ ಕರ್ನಾಟಕದ ಖಜಾನೆ ಸದಾ ಸಂಪತ್ತು ಭರಿತವಾದ ಖಜಾನೆ. ಇಂತಹ ಖಜಾನೆಯನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಈ ಸರ್ಕಾರ ಮಾಡುತ್ತಿಲ್ಲ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ