AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಗದ್ದೆಗಿಳಿದು ಭತ್ತ ನಾಟಿ ಮಾಡಲಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಎಲ್ಲಿ? ಯಾವಾಗ?

2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಖುದ್ದು ಕುಮಾರಸ್ವಾಮಿ ಅವರೇ ಗದ್ದೆಗಿಳಿದು ನಾಟಿ ಮಾಡಿದ್ದರು. ಇದೀಗ ಕೇಂದ್ರ ಸಚಿವರಾದ ನಂತರ ಮತ್ತೆ ಗದ್ದೆಗೆ ಇಳಿದು ಭತ್ತ ನಾಟಿ ಮಾಡಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನಲೆ ಮುಂಚಿತವಾಗಿಯೇ ಹೆಚ್‌ಡಿಕೆ ನಾಟಿ ಮಾಡುವ ಜಮೀನನ್ನು ಪುತ್ರ ನಿಖಿಲ್ ಕುಮಾರಸ್ವಾಮಿ ವೀಕ್ಷಿಸಿದ್ದಾರೆ. ಎಲ್ಲಿ? ಯಾವಾಗ ಅಂತೀರಾ? ಈ ಸ್ಟೋರಿ ಓದಿ.

ಮತ್ತೆ ಗದ್ದೆಗಿಳಿದು ಭತ್ತ ನಾಟಿ ಮಾಡಲಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಎಲ್ಲಿ? ಯಾವಾಗ?
ಭತ್ತ ನಾಟಿ ಮಾಡಲಿರುವ ಕೇಂದ್ರ ಸಚಿವ ಕುಮಾರಸ್ವಾಮಿ
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 01, 2024 | 5:52 PM

Share

ಮಂಡ್ಯ, ಆ.01: ರೈತ ನಾಯಕ, ಮಣ್ಣಿನ ಮಗ, ಕೇಂದ್ರ ಸಚಿವರಾಗಿರುವ ಹೆಚ್​​.ಡಿ ಕುಮಾರಸ್ವಾಮಿ(H. D. Kumaraswamy) ಅವರು ಇದೇ ಆಗಸ್ಟ್​. 11ರಂದು ಮಂಡ್ಯ ಜಿಲ್ಲೆಯ ಪಾಂಡವಪುರ (Pandavapura) ತಾಲೂಕಿನ ಸೀತಾಪುರದ ಜಮೀನೊಂದರಲ್ಲಿ ಭತ್ತ ನಾಟಿ ಮಾಡಲಿದ್ದಾರೆ. ಈ ಹಿನ್ನಲೆ 10 ದಿನ ಮುಂಚೆಯೇ ಹೆಚ್‌ಡಿಕೆ ನಾಟಿ ಮಾಡುವ ಜಮೀನನ್ನು ಪುತ್ರ ನಿಖಿಲ್ ಕುಮಾರಸ್ವಾಮಿ ವೀಕ್ಷಿಸಿದ್ದಾರೆ.

ಕಾವೇರಿ ನದಿಗೆ ಮೊದಲು ಪೂಜೆ

ಆಗಸ್ಟ್ 11ರಂದು ಭತ್ತ ನಾಟಿ ಮಾಡುವ ಮೊದಲು ಪಕ್ಕದಲ್ಲೇ ಇರುವ ಕಾವೇರಿ ನದಿಗೆ ಪೂಜೆ ಸಲ್ಲಿಸಲಿದ್ದಾರೆ. ಕಾವೇರಿ ಪೂಜೆ ಬಳಿಕ ಭತ್ತದ ನಾಟಿ ಕಾರ್ಯದಲ್ಲಿ ಪಾಲ್ಗೊಂಡು, ಭತ್ತವನ್ನು ನಾಟಿ ಮಾಡಲಿದ್ದಾರೆ. ಇನ್ನು ಭತ್ತ ನಾಟಿ ಮಾಡುವ ಜಾಗವನ್ನು ವೀಕ್ಷಿಸುತ್ತಿರುವ ನಿಖಿಲ್​ಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸಾಥ್ ಕೊಟ್ಟಿದ್ದಾರೆ.

ಇದನ್ನೂ ಓದಿ:ಕರ್ನಾಟಕ ಬಿಜೆಪಿ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಮುನಿಸಿಗೆ ಇವೆ ಹಲವು ಕಾರಣ!

2018ರಲ್ಲಿ ಸಿಎಂ ಆಗಿದ್ದಾಗಲೂ ಗದ್ದೆಗಿಳಿದು ನಾಟಿ ಮಾಡಿದ್ದ ಹೆಚ್‌ಡಿಕೆ

ಈ ಹಿಂದೆ 2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗಲೂ ಕುಮಾರಸ್ವಾಮಿ ಅವರು ಗದ್ದೆಗಿಳಿದು ನಾಟಿ ಮಾಡಿದ್ದರು. ಕೇಂದ್ರ ಸಚಿವರಾದ ನಂತರ ಮತ್ತೆ ಗದ್ದೆಗೆ ಇಳಿದು ನಾಟಿ ಮಾಡಲು ನಿರ್ಧಾರ ಮಾಡಿದ್ದಾರೆ. ಇನ್ನು 2018 ರಲ್ಲಿ ಹೆಚ್​ಡಿಕೆ ಸಿಎಂ ಆಗಿದ್ದ  3 ವರ್ಷಗಳ ಹಿಂದೆ ಉತ್ತಮ ಮಳೆಯಾಗಿರಲಿಲ್ಲ. ವರುಣನ ಅವಕೃಪೆಯಿಂದ ಭೀಕರ ಬರಗಾಲ ಎದುರಾಗಿತ್ತು. ಹೀಗಾಗಿ ರೈತರು ಭತ್ತ ನಾಟಿ ಮಾಡಲು ಸಾಧ್ಯವಾಗಿರಲಿಲ್ಲ. ಕೆಲ ರೈತರು ಆತ್ಮಹತ್ಯೆಯ ಹಾದಿ ಹಿಡಿದಿದ್ದರು. ಆದರೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿ. ಭತ್ತ ನಾಟಿ ಮಾಡುವ ಕಾರ್ಯಕ್ರಮಗಳಲ್ಲಿ ಖುದ್ದು ಭಾಗಿಯಾಗಿದ್ದರು. ಇದೀಗ ಕೇಂದ್ರ ಸಚಿವರಾದ ಮೇಲೂ ಮತ್ತೆ ಭತ್ತ ನಾಟಿ ಮಾಡಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Thu, 1 August 24

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ