AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಮಹಿಳೆಯರ ಜೊತೆ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮಂತ್ರಿ ಜವಾಬ್ದಾರಿ ಬಳಿಕ ಮೊದಲು ಮಂಡ್ಯಕ್ಕೆ ಬಂದಿದ್ದೇನೆ. ಪ.ಜಾ, ಪ.ಪಂ ಮಹಿಳೆಯರು ಸೇರಿದಂತೆ ಎಲ್ಲಾ ಜಾತಿ, ವರ್ಗಗಳಿಗೆ ಸಚಿವ ಸ್ಥಾನ ನೀಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವುದು ಪ್ರಧಾನಿಗಳ ಆಶಯ.

ಮಂಡ್ಯದಲ್ಲಿ ಮಹಿಳೆಯರ ಜೊತೆ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
TV9 Web
| Edited By: sandhya thejappa|

Updated on:Aug 16, 2021 | 2:45 PM

Share

ಮಂಡ್ಯ: ಜನಾಶೀರ್ವಾದ ಯಾತ್ರೆ ಹಿನ್ನೆಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಇಂದು (ಆಗಸ್ಟ್ 16) ಮಂಡ್ಯಕ್ಕೆ (Mandya) ಆಗಮಿಸಿದರು. ಮೊದಲು ಜಿಲ್ಲೆಯ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಪರಿಶೀಲನೆ ಮಾಡಿದರು. ನಂತರ ಹೊನಗನಹಳ್ಳಿಯ ಗದ್ದೆಯಲ್ಲಿ ಮಹಿಳೆಯರ ಭತ್ತ ನಾಟಿ ಮಾಡಿದರು. ಇದೇ ವೇಳೆ ಸಚಿವ ನಾರಾಯಣಗೌಡ ನಾಟಿ ಯಂತ್ರಕ್ಕೆ ಚಾಲನೆ ನೀಡಿದರು. ಇನ್ನು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಶೋಭಾ ಕರಂದ್ಲಾಜೆ, ರೈತ ಮಹಿಳೆಗೆ ದೇಶದ ಕೃಷಿ ಮಂತ್ರಿಯಾಗುವ ಅವಕಾಶ ಸಿಕ್ಕಿದೆ. ಅವಕಾಶ ಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದ ಎಂದು ಹೇಳಿದರು.

ಮಂತ್ರಿ ಜವಾಬ್ದಾರಿ ಬಳಿಕ ಮೊದಲು ಮಂಡ್ಯಕ್ಕೆ ಬಂದಿದ್ದೇನೆ. ಪ.ಜಾ, ಪ.ಪಂ ಮಹಿಳೆಯರು ಸೇರಿದಂತೆ ಎಲ್ಲಾ ಜಾತಿ, ವರ್ಗಗಳಿಗೆ ಸಚಿವ ಸ್ಥಾನ ನೀಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವುದು ಪ್ರಧಾನಿಗಳ ಆಶಯ. ಚಿಕ್ಕ-ಚಿಕ್ಕ ರೈತರನ್ನ ಒಟ್ಟಗೂಡಿಸಿ ಕೃಷಿಗೆ ಉತ್ತೇಜನ ನೀಡಬೇಕು. ಕೃಷಿ ಮೂಲಭೂತ ಸೌಕರ್ಯ ನಿಧಿಯಲ್ಲಿ 1 ಲಕ್ಷ ಕೋಟಿ ಮೀಸಲಿಡಲಾಗಿದೆ. ಸಬ್ಸಿಡಿ, ಸಾಲ, ಕೃಷಿ ಉತ್ಪನ್ನಗಳನ್ನ ಒದಗಿಸಿ ಕೃಷಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಆತ್ಮನಿರ್ಭರ ಯೋಜನೆಯಡಿ ಸಾವಯವ ಬೆಲ್ಲ ಹೆಚ್ಚು ರಫ್ತಾಗಬೇಕು ಎಂದು ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.

ಆಧುನಿಕರಣದತ್ತ ರೈತರನ್ನ ಕರೆದೊಯ್ಯಬೇಕು. ಕೊರೊನಾ ಸಂಕಷ್ಟದ ವೇಳೆ ದೇಶದಲ್ಲಿ ಯಾವುದೇ ಆಹಾರ ಕೊರತೆ ಆಗಿಲ್ಲ. ಆ ಶ್ರೇಯಸ್ಸು ನಮ್ಮ ರೈತರಿಗೆ ಸಲ್ಲಬೇಕು. ಇದು ಆರಂಭಿಕ ಪ್ರವಾಸ. ಮುಂಬರುವ ದಿನಗಳಲ್ಲಿ ಅಧಿಕಾರಿಗಳ ಜೊತೆ ಬಂದು ಸಮಸ್ಯೆಗಳ ಕುರಿತು ಚರ್ಚೆ ಮಾಡುತ್ತೀನಿ ಎಂದು ಕೇಂದ್ರ ಸಚಿವೆ ತಿಳಿಸಿದರು.

ಸ್ವಪಕ್ಷೀಯರಿಂದಲೇ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರತಿಭಟನೆ ಖಾಸಗಿ ಸಮೂದಾಯ ಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಗೆ ಬಿಜೆಪಿ ಮುಖಂಡ ಚಂದಗಾಲು ಶಿವಣ್ಣರನ್ನು ಆಹ್ವಾನಿಸಿಲ್ಲ ಅಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಕಾರ್ಯಕರ್ತರು ಸಭೆಯ ಮಧ್ಯ ಎದ್ದು ಕಿರುಚಾಡಿದರು. ಈ ವೇಳೆ ಶೋಭಾ ಕರಂದ್ಲಾಜೆ ಕಾರ್ಯಕರ್ತರನ್ನು ಸಮಾಧಾನ ಮಾಡಲು‌ ಮುಂದಾದರು. ಆದರೆ ಸಚಿವೆ ಮಾತಿಗೂ ತಲೆ ಕಡೆಸಿಕೊಳ್ಳದೇ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ಬೊಮ್ಮಾಯಿ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ತಿರುಗೇಟು ನೀಡಿದ್ದಾರೆ. ಕೈಗೆ ಸಿಗದ ದ್ರಾಕ್ಷಿ ಹುಳಿ ಅಂತಾರೆ ಹಾಗಿದೆ ಇವರ ಹೇಳಿಕೆ. ಸಿದ್ದರಾಮಯ್ಯಗೆ ಅಧಿಕಾರ ಇಲ್ಲ, ಹೀಗಾಗಿ ಮಾತಾಡುತ್ತಾರೆ. ನಮ್ಮ ಸರ್ಕಾರವೇ ಇರುತ್ತೆ, ಒಳ್ಳೆಯ ಕೆಲಸ ಮಾಡುತ್ತೆ ಅಂತ ಶೋಭಾ ಕರಂದ್ಲಾಜೆ ಹೇಳಿದರು. ಇನ್ನು ಮೇಕೆದಾಟು ಯೋಜನೆಗೆ ತಮಿಳುನಾಡು ಕ್ಯಾತೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಹಾಗೂ ನಮ್ಮ ರಾಜ್ಯದ ನಿಲುವು ಬಹಳ ಸ್ಪಷ್ಟವಿದೆ. ಮೇಕೆದಾಟು ಯೋಜನೆಯಿಂದ ನಮಗೂ ಅನುಕೂಲವಾಗುತ್ತೆ. ತಮಿಳುನಾಡಿಗೂ ಅನುಕೂಲವಾಗುತ್ತೆ. ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆ ಇಲ್ಲ. ತಮಿಳುನಾಡಿಗೆ ಬಿಡಬೇಕಾಗಿರುವ ನೀರು ಬಿಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ

ರಾಯಚೂರು: ಕೊವಿಡ್ ಲಸಿಕೆ ನಿರಾಕರಿಸಿದವರಿಗೆ ಪಡಿತರ ಕಟ್!

ಭಾರತದಿಂದ ಸಂಕಷ್ಟದಲ್ಲಿರುವ ಶ್ರೀಲಂಕಾ ಕ್ರಿಕೆಟ್​ಗೆ 107 ಕೋಟಿ ಆದಾಯ: ದ್ರಾವಿಡ್​ಗೆ ಧನ್ಯವಾದ ಎಂದ ಮಂಡಳಿ

(Union Minister Shobha Karandlaje worked with women in paddy ground at Mandya)

Published On - 12:55 pm, Mon, 16 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು