AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆ; ಹಣಕ್ಕಾಗಿ ಬೇಡಿಕೆ

ಖದೀಮರು ನಕಲಿ ವಾಟ್ಸಾಪ್ ಮತ್ತು ಫೇಸ್​ಬುಕ್​​ ಖಾತೆಗೆ ಮಂಡ್ಯ ಜಿಲ್ಲಾಧಿಕಾರಿ ಎಸ್. ಅಶ್ವತಿ ಫೋಟೋ ಹಾಕಿ ಮೆಸೇಜ್ ಮಾಡುತ್ತಾರೆ. ಅರ್ಜೆಂಟ್ ಹಣ ಬೇಕಿದೆ ಎಂದು ಕೆಲವರಿಗೆ ಸಂದೇಶ ಕಳುಹಿಸುತ್ತಾರೆ.

ಮಂಡ್ಯ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆ; ಹಣಕ್ಕಾಗಿ ಬೇಡಿಕೆ
ಮಂಡ್ಯ ಡಿಸಿ ಎಸ್. ಅಶ್ವತಿ
TV9 Web
| Edited By: |

Updated on:Jul 17, 2022 | 11:02 AM

Share

ಮಂಡ್ಯ: ಟೆಕ್ನಾಲಜಿ ಬೆಳೆದಂತೆ ಸಮಸ್ಯೆಗಳು ಕೂಡಾ ಹುಟ್ಟಿಕೊಳ್ಳುತ್ತವೆ. ಇದಕ್ಕೆ ಉತ್ತಮ ಉದಾಹಾರಣೆ ಅಂದರೆ ಹ್ಯಾಕ್ (Hack). ಟ್ವಿಟರ್, ಫೇಸ್​ಬುಕ್​ ನಂತಹ ಸಾಮಾಜಿಕ ಜಾಲತಾಣದಲ್ಲಿ (Social Media) ಬಹುತೇಕರು ಕಾಲ ಕಳೆಯುತ್ತಾರೆ. ಜೊತೆಗೆ ದಿನದಿತ್ಯದ ಸುದ್ದಿ, ಸಂದೇಶಗಳನ್ನ ಗ್ರಹಿಸುತ್ತಾರೆ. ಆದರೆ ಕೆಲ ಕಿಡಿಗೇಡಿಗಳು ಖಾತೆಗಳನ್ನ ಹ್ಯಾಕ್ ಮಾಡುವ ಮೂಲಕ ದುರುಪಯೋಗ ಮಾಡಿಕೊಳ್ಳುತ್ತಾರೆ. ಇದೀಗ ಕಿಡಿಗೇಡಿಗಳು ಮಂಡ್ಯ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಮತ್ತು ಫೇಸ್​ಬುಕ್​ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.

ಖದೀಮರು ನಕಲಿ ವಾಟ್ಸಾಪ್ ಮತ್ತು ಫೇಸ್​ಬುಕ್​ ಖಾತೆಗೆ ಮಂಡ್ಯ ಜಿಲ್ಲಾಧಿಕಾರಿ ಎಸ್. ಅಶ್ವತಿ ಫೋಟೋ ಹಾಕಿ ಮೆಸೇಜ್ ಮಾಡುತ್ತಾರೆ. ಅರ್ಜೆಂಟ್ ಹಣ ಬೇಕಿದೆ ಎಂದು ಕೆಲವರಿಗೆ ಸಂದೇಶ ಕಳುಹಿಸುತ್ತಾರೆ. ಈ ಬಗ್ಗೆ ಸೈಬರ್ ಕ್ರೈಂಗೆ ದೂರು ಕೊಟ್ಟಿರುವ ಡಿಸಿ, ಯಾರು ಹಣ ನೀಡದಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: T20 Blast Final: ರಣರೋಚಕ ಫೈನಲ್: ಗೆದ್ದು ಸಂಭ್ರಮಿಸಿದ ಬಳಿಕ ಅಂಪೈರ್ ನೋಬಾಲ್ ಅಂದ್ರು..!

ಇದನ್ನೂ ಓದಿ
Image
IND vs ENG: ತೃತೀಯ ಏಕದಿನಕ್ಕೆ ಟೀಮ್ ಇಂಡಿಯಾ ಸಜ್ಜು: ಮೈದಾನದಲ್ಲಿ ಕೊಹ್ಲಿ ಭರ್ಜರಿ ಅಭ್ಯಾಸ
Image
Ice Cream Day 2022: ನೀವು ಕೂಡ ಐಸ್​ಕ್ರೀಂ ಪ್ರಿಯರೇ? ಹಾಗಿದ್ರೆ ಈ ಸುದ್ದಿ ಓದಲೇಬೇಕು
Image
Viral Video: 8ಲಕ್ಷಕ್ಕೆ ಮಾರಾಟವಾದ ಮೇಕೆ ಮಾಲೀಕನನ್ನು ತಬ್ಬಿಕೊಂಡು ಮನುಷ್ಯರಂತೆ ಕೂಗಿದ ವಿಡಿಯೋ ವೈರಲ್
Image
Ayurveda Tips: ವಾಕರಿಕೆ ಸಮಸ್ಯೆ ಕಡಿಮೆ ಮಾಡಲು ಇಲ್ಲಿವೆ ಬೆಸ್ಟ್​ ಆಯುರ್ವೇದ ಸಲಹೆಗಳು

ಇನ್ನು ಈ ಹಿಂದೆ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಟ್ವಿಟರ್ ಖಾತೆ ಹ್ಯಾಕ್ ಆಗಿರುವ ಬಗ್ಗೆ ಶಾಸಕಿ ಮಾಹಿತಿ ನೀಡಿದ್ದರು. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಾಗೇ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಈ ಕುರಿತು ಶಾಸಕರೇ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದರು. ನನ್ನ ಖಾತೆ ಇದ್ದಕ್ಕಿದ್ದಂತೆ ನಿಷ್ಕ್ರಿಯವಾಗಿದೆ. ಖಾತೆಯನ್ನು ತೆರೆಯದಂತೆ ನಿಯಂತ್ರಣ ತಪ್ಪಿಸಿಲಾಗಿದೆ ಎಂದು ತಿಳಿಸಿದ್ದರು. ನನ್ನ ಖಾತೆಯಿಂದ ಯಾವುದೇ ಅಸಂಬದ್ಧ ಪೋಸ್ಟ್ ಕಂಡುಬಂದರೆ ಅದು ನನ್ನದಾಗಿರಲ್ಲ ಎಂದು ತಿಳಿಯಬೇಕು ಅಂತ ಮನವಿ ಮಾಡಿದ್ದರು.

ಇದನ್ನೂ ಓದಿ: ENG vs IND ODI: ಮೂರನೇ ಏಕದಿನಕ್ಕೆ ಒಂದು ಬದಲಾವಣೆ: ಪದಾರ್ಪಣೆಗೆ ಸಜ್ಜಾದ ಮತ್ತೊಬ್ಬ ಐಪಿಎಲ್ ಹೀರೋ

Published On - 10:56 am, Sun, 17 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್