AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್ ವಿವಾದ: ಸರ್ಕಾರಿ ಶಾಲೆಯ ಭೂಮಿಯ ಪಹಣಿಯಲ್ಲಿ ವಕ್ಫ್​ ಹೆಸರು

ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದಲ್ಲಿನ ಸರ್ಕಾರ ಶಾಲೆಯ ಜಮೀನಿನ ಪಹಣಿಯಲ್ಲಿ ವಕ್ಫ್​ ಆಸ್ತಿ ಎಂದು ನಮುದು ಆಗಿದೆ. ಸರ್ಕಾರ ಮತ್ತು ವಕ್ಫ್​ ಮಂಡಳಿ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತು ಸಮಸ್ಯೆಯ ಪರಿಹಾರಕ್ಕಾಗಿ ಒತ್ತಾಯಿಸುತ್ತಿದ್ದಾರೆ.

ವಕ್ಫ್ ವಿವಾದ: ಸರ್ಕಾರಿ ಶಾಲೆಯ ಭೂಮಿಯ ಪಹಣಿಯಲ್ಲಿ ವಕ್ಫ್​ ಹೆಸರು
ಚಂದಗಾಲು ಗ್ರಾಮದಲ್ಲಿನ ಸರ್ಕಾರ ಶಾಲೆ
ಪ್ರಶಾಂತ್​ ಬಿ.
| Edited By: |

Updated on: Nov 03, 2024 | 11:38 AM

Share

ಮಂಡ್ಯ, ನವೆಂಬರ್​ 03: ರೈತರು, ಸರ್ಕಾರಿ ಕಚೇರಿ (Government Office) ಮತ್ತು ಮಠ ಬೆನ್ನಲ್ಲೇ ವಕ್ಫ್​​ ಮಂಡಳಿ (Waqf Board) ಕಣ್ಣು ಸರ್ಕಾರಿ ಶಾಲೆಯ (Government School) ಮೇಲೆ ಬಿದ್ದಿದೆ. ಶ್ರೀರಂಗಪಟ್ಟಣ (Srirangapattana) ತಾಲೂಕಿನ ಚಂದಗಾಲು ಗ್ರಾಮದಲ್ಲಿನ ಸರ್ಕಾರ ಶಾಲೆಯ ಸರ್ವೆ ನಂ 215ರ 30 ಗುಂಟೆ ಜಮೀನಲ್ಲಿ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗಿದೆ. ವಕ್ಫ್ ಆಸ್ತಿ ಅಂತ 2015ರಲ್ಲೇ ಆಗಿದ್ದು, ಪಹಣಿ ಪರಿಶೀಲಿಸಿದಾಗ ತಿಳಿದುಬಂದಿದೆ. ವಕ್ಫ್​ ಮಂಡಳಿ ಶಾಲೆ ಜಾಗ ಕಬಳಿಕೆಗೆ ಮುಂದಾಗಿದೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಕ್ಫ ಆಸ್ತಿ ಅಂತ ನಮೂದು ಆಗಿದ್ದನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ.

ನಾಗಮಂಗಲದ ರೈತರಿಗೆ ನೋಟಿಸ್​

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದ ಸರ್ವೆ ನಂ. 472ರಲ್ಲಿ 20 ಎಕರೆ ಜಾಮೀಯ ಮಸೀದಿಗೆ, 34 ಎಕರೆ 12ಗುಂಟೆ ಸೂಫಿ ಸಂತರಿಗೆ, ಸರ್ವೆ ನಂ 73ರಲ್ಲಿ 6 ಎಕರೆ 6 ಗುಂಟೆ ಖಬರಸ್ಥಾನ್‌ಗೆ ಪಹಣಿ ಮಾಡಲು ಪತ್ರದಲ್ಲಿ ಮನವಿ‌ ಮಾಡಲಾಗಿದೆ. 1921, 1932 ಹಾಗೂ 1940 ರಲ್ಲಿ ಮೈಸೂರು ಸರ್ಕಾರ ಮಸೀದಿ, ಖಬರಸ್ಥಾನ್ ಮತ್ತು ಸೂಫಿ ಸಂತರಿಗೆ ಜಮೀನು ನೀಡಿ ಆದೇಶಿಸಿದೆ.

ಆ ಜಮೀನುಗಳ ಸ್ಕೆಚ್ ಕೂಡ ಆಗಿದೆ ಎಂದು ಆದೇಶ ಸಂಖ್ಯೆಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಪತ್ರದಲ್ಲಿ ಉಲ್ಲೇಖಿಸಿರುವ ಸರ್ವೆ ನಂ. 472ರಲ್ಲಿ 14.24 ಗುಂಟೆ ಗೋಮಾಳ ಇದ್ದು, 5ಕ್ಕೂ ಹೆಚ್ಚು ರೈತರಿಗೆ ಸೇರಿದ 19.88 ಗುಂಟೆ ಜಮೀನು ಆಗಿದೆ. ಗೋಮಾಳ ಹಾಗೂ ರೈತರಿಗೆ ಜಮೀನುಗಳನ್ನು ತಮ್ಮ ಹೆಸರಿಗೆ ಪಹಣಿ ಮಾಡಲು ಕ್ರಮ ವಹಿಸುವಂತೆ ಮುಸ್ಲಿಮರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ವಕ್ಫ್‌​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ

ಮಠಕ್ಕೆ ನೋಟಿಸ್

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಬಿಕೆ ಗ್ರಾಮದ ಸಿದ್ದ ಶಂಕರಲಿಂಗ ಮಠದ ಆಸ್ತಿಗೆ ವಕ್ಫ್ ಮಂಡಳಿ ನೋಟಿಸ್ ಬಂದಿದೆ. ಮಠದ 8.16 ಏಕರೆ ಜಮೀನು ವಕ್ಫ್ ಪಾಲಾಗುವ ಆತಂಕ ಎದುರಾಗಿದೆ. 1952 ರಲ್ಲಿ ಸಿಂದಗಿಯ ಕುಲಕರ್ಣಿ ಮನೆತನದಿಂದ ಮಠಕ್ಕೆ ದಾನವಾಗಿ ನೀಡಿದ್ದ ಆಸ್ತಿ ಇದಾಗಿದೆ. 2018-19ರಲ್ಲಿ ಮಠದ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ಸೇರ್ಪಡೆಯಾಗಿತ್ತು.

ಶಂಕರಲಿಂಗ ಮಹಾಪುರುಷರ ಹೆಸರಿಲ್ಲಿರುವ 8 ಏಕರೆ 16 ಗುಂಟೆ ಜಮೀನಿನ ಪಹಣಿಯಲ್ಲಿ 2018ರಲ್ಲಿ ಯತಿಮ್ ಶಾ ವಾಲಿ ಜಾಮೀಯಾ ಮಸೀದ್ ಸುನ್ನಿ ವಕ್ಫ್ ಬೋರ್ಡ ಹೆಸರು ಸೇರ್ಪಡೆಯಾಗಿತ್ತು. ಈ ವಿಚಾರವಾಗಿ ಇದೀಗ ಮಠದ ಪೀಠಾಧಿಕಾರಿ ಸಿದ್ದರಾಜು ಸ್ವಾಮೀಜಿ ಆತಂಕ‌ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ