ಶ್ರೀರಂಗಪಟ್ಟಣ: 50ಕ್ಕೂ ಹೆಚ್ಚು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಹೆಸರು, ಅನ್ನದಾತರ ಅರೆಬೆತ್ತಲೆ ಧರಣಿ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅನೇಕ ಗ್ರಾಮಗಳಲ್ಲಿನ ರೈತರ ಜಮೀನ ಪಹಣಿಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಹೆಸರು ನಮೂದಾಗಿದೆ. ಶ್ರೀರಂಗಪಟ್ಟಣ ತಾಲೂಕು ಒಂದರಲ್ಲೇ ಒಟ್ಟು 70ಕ್ಕೂ ಹೆಚ್ಚು ಭೂಮಿಗಳ ಪಹಣಿಯಲ್ಲಿ ವಕ್ಫ್ ಮಂಡಳಿಯ ಹೆಸರು ಇದೆ. ಇದರಿಂದ ರೈತರು ಆತಂಕಕ್ಕೀಡಾಗಿದ್ದು, ಸಾಲ ಪಡೆಯಲು, ಜಮೀನು ಮಾರಾಟ ಮತ್ತು ಖರೀದಿಗೆ ತೊಂದರೆಯಾಗಿದೆ.

ಶ್ರೀರಂಗಪಟ್ಟಣ: 50ಕ್ಕೂ ಹೆಚ್ಚು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಹೆಸರು, ಅನ್ನದಾತರ ಅರೆಬೆತ್ತಲೆ ಧರಣಿ
ಪಹಣಿಯಲ್ಲಿ ವಕ್ಫ್​ ಹೆಸರು
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on:Jan 12, 2025 | 8:24 AM

ಮಂಡ್ಯ, ಜನವರಿ 12: ಕರ್ನಾಟಕದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ, ರಾಜಕೀಯ ವಾಗ್ಯುದ್ಧಕ್ಕೂ ಕಾರಣವಾಗಿದ್ದ ಕರ್ನಾಟಕ ರಾಜ್ಯ ವಕ್ಫ್​​ ಮಂಡಳಿ (Karnataka State Waqf Board) ​ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಪುರಾತನ ಮಂಟಪಗಳು, ಸ್ಮಾರಕಗಳು ಹಾಗೂ ಪುರಾತತ್ವ ಇಲಾಖೆಯ ಆಸ್ತಿ ಮತ್ತು ರೈತರ ಜಮೀನೂ ಸೇರಿದಂತೆ 70ಕ್ಕೂ ಹೆಚ್ಚು ಭೂಮಿ ಪಹಣಿಯಲ್ಲಿ “ಕರ್ನಾಟಕ ರಾಜ್ಯ ವಕ್ಫ್​ ಮಂಡಳಿ” ಎಂದು ನಮೂದು ಆಗಿದೆ.

ಕಿರಂಗೂರ, ಕೆ.ಶೆಟ್ಟಹಳ್ಳಿ, ಬಾಬಾರಾಯನಕೊಪ್ಪಲು, ದರಸಕುಪ್ಪೆ ಗ್ರಾಮಗಳ 50ಕ್ಕೂ ಹೆಚ್ಚು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಮಂಡಳಿ ಅಂತ ನಮೂದಾಗಿದೆ. ರಾಜ್ಯ ಸರ್ಕಾರದ ಈ ಯಡವಟ್ಟಿಗೆ ಅನ್ನದಾತರು ಕಂಗಾಲಾಗಿದ್ದಾರೆ.

ಪಹಣಿಯಲ್ಲಿನ ಸ್ವಾಧೀನದಾರರ ಕಾಲಂನಲ್ಲಿ ರೈತರ ಹೆಸರಿದ್ದರೂ, ಋಣ ಕಲಂ ಅಂದರೆ ಕಲಂ 11ರಲ್ಲಿ ನಲ್ಲಿ ವಕ್ಫ್‌ ಮಂಡಳಿ ಹೆಸರು ಇದೆ. ಸಾಮಾನ್ಯವಾಗಿ ಜಮೀನಿನ ಮೇಲೆ ಸಾಲ ತೆಗೆದುಕೊಂಡರೆ ಅಥವಾ ನಂಬಿಕೆ ಕ್ರಯ ಮಾಡಿಸಿದರೆ ಮಾತ್ರ ಋಣ ಕಾಲಂನಲ್ಲಿ ಆ ಬ್ಯಾಂಕ್ ಅಥವಾ ವ್ಯಕ್ತಿಯ ಹೆಸರು ನಮೂದಿಸಲಾಗುತ್ತದೆ‌. ವಕ್ಫ್‌ ಮಂಡಳಿ ಹೆಸರು ನಮೂದಾಗಿರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದು, ಎಲ್ಲೂ ಸಾಲ ಸಿಗದೆ, ಜಮೀನು ಮಾರಾಟ ಮತ್ತು ಕೊಂಡುಕೊಳ್ಳಲೂ ಆಗದೆ ಪರದಾಡುತ್ತಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಗೆ ಕಾಲಿಟ್ಟ ವಕ್ಫ್​​: ಮನೆ, ಸರ್ಕಾರಿ ಕಟ್ಟಡಗಳಿಗೆ ನೋಟಿಸ್, ಕಾನೂನು ಹೋರಾಟಕ್ಕೆ ಗ್ರಾಮಸ್ಥರು ಸಿದ್ಧ

ಜಮೀನಿನ ಪಹಣಿಯಲ್ಲಿ ವಕ್ಫ್​​ ​ಹೆಸರು ನಮೂದುಗೊಂಡಿದ್ದಕ್ಕೆ ಆಕ್ರೋಶ ಗೊಂಡಿರುವ ರೈತರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಹೀಗಾಗಿ, ರೈತರ ಪರವಾಗಿ ವಿಶ್ವ ಹಿಂದೂ ಪರಿಷತ್, ಭಜರಂಗ ದಳ, ರೈತಸಂಘ, ಮಂಡ್ಯ ರಕ್ಷಣಾ ವೇದಿಕೆ ಸೇರಿದಂತೆ‌ ವಿವಿಧ ಸಂಘಟನೆಗಳು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದು, ಜನವರಿ 20ರಂದು ಶ್ರೀರಂಗಪಟ್ಟಣ ಸ್ವಯಂ ಪ್ರೇರಿತ ಬಂದ್​ಗೆ ಕರೆ ನೀಡಿವೆ. ಅನ್ನದಾತರು ಜಾನುವಾರುಗಳೊಂದಿಗೆ ಬೀದಿಗಿಳಿಯಲಿದ್ದಾರೆ.

ಸರ್ಕಾರಿ ಶಾಲೆ ಮೇಲೂ ವಕ್ಫ್​ ದೃಷ್ಟಿ

ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದಲ್ಲಿನ ಸರ್ಕಾರ ಶಾಲೆಯ ಸರ್ವೆ ನಂ 215ರ 30 ಗುಂಟೆ ಜಮೀನಲ್ಲಿ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗಿತ್ತು. ವಕ್ಫ್ ಆಸ್ತಿ ಅಂತ 2015ರಲ್ಲೇ ಆಗಿದ್ದು, ಪಹಣಿ ಪರಿಶೀಲಿಸಿದಾಗ ತಿಳಿದುಬಂದಿತ್ತು. ವಕ್ಫ್​ ಮಂಡಳಿ ಶಾಲೆ ಜಾಗ ಕಬಳಿಕೆಗೆ ಮುಂದಾಗಿದೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದರು. ವಕ್ಫ ಆಸ್ತಿ ಅಂತ ನಮೂದು ಆಗಿದ್ದನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:17 am, Sun, 12 January 25

ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ