AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಫಲಿಸಿದ ಪೂಜೆ; 120 ಅಡಿ ಸನಿಹಕ್ಕೆ ತಲುಪಿದ ಕೆಆರ್​ಎಸ್​ ಡ್ಯಾಂ ನೀರಿನ ಮಟ್ಟ

ಅಕ್ಟೋಬರ್ 1ರಂದು ಕೆಆರ್​ಎಸ್​ ನೀರಿನ ಮಟ್ಟ 112.72 ಅಡಿಗೆ ಕುಸಿದಿತ್ತು. ಇದರಿಂದ ಡ್ಯಾಂ ಅಚ್ಟುಕಟ್ಟು ಪ್ರದೇಶದಲ್ಲಿ ರೈತರಿಗೆ ಆತಂಕ ತರಿಸಿತ್ತು. ಬೆಂಗಳೂರಿಗೂ ನೀರಿನ ಕೊರತೆ ಭೀತಿ ಎದುರಾಗಿತ್ತು.

ಕೊನೆಗೂ ಫಲಿಸಿದ ಪೂಜೆ; 120 ಅಡಿ ಸನಿಹಕ್ಕೆ ತಲುಪಿದ ಕೆಆರ್​ಎಸ್​ ಡ್ಯಾಂ ನೀರಿನ ಮಟ್ಟ
ಕೆಆರ್​ಎಸ್​ ಡ್ಯಾಂ
TV9 Web
| Edited By: sandhya thejappa|

Updated on: Oct 19, 2021 | 11:07 AM

Share

ಮಂಡ್ಯ: ಕಾವೇರಿ ಜಲಾಶಯ ಪ್ರದೇಶದಲ್ಲಿ ಸಾಧಾರಣ ಮಳೆಯಾಗುತ್ತಿರುವ ಹಿನ್ನೆಲೆ ಕೆಆರ್​ಎಸ್​ (KRS) ನೀರಿನ ಮಟ್ಟ 120 ಅಡಿ ಸನಿಹಕ್ಕೆ ತಲುಪಿದೆ. ಮಳೆಯಿಂದ ನಿಧಾನವಾಗಿ ಡ್ಯಾಂ ನೀರಿನ ಮಟ್ಟ ಏರಿಕೆಯಾಗುತ್ತಿದೆ. ನೀರಿನ ಮಟ್ಟ ಏರಿಕೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮೂಡಿದೆ. ಈ ವರ್ಷ 121 ಅಡಿ ತುಂಬಿದ್ದೇ ಗರಿಷ್ಠ ಮಟ್ಟವಾಗಿತ್ತು. ಮಳೆ ಕಡಿಮೆಯಾಗಿದ್ದರಿಂದ ಒಳಹರಿವು ಇಳಿಮುಖವಾಗಿತ್ತು. ತಮಿಳುನಾಡು ಹಾಗೂ ರೈತರ ಬೆಳೆಗಳಿಗೆ ನೀರು ಹರಿಸಿದ ಪರಿಣಾಮ ಡ್ಯಾಂ ನೀರಿನ ಮಟ್ಟ ಕುಸಿದಿತ್ತು.

ಅಕ್ಟೋಬರ್ 1ರಂದು ಕೆಆರ್​ಎಸ್​ ನೀರಿನ ಮಟ್ಟ 112.72 ಅಡಿಗೆ ಕುಸಿದಿತ್ತು. ಇದರಿಂದ ಡ್ಯಾಂ ಅಚ್ಟುಕಟ್ಟು ಪ್ರದೇಶದಲ್ಲಿ ರೈತರಿಗೆ ಆತಂಕ ತರಿಸಿತ್ತು. ಬೆಂಗಳೂರಿಗೂ ನೀರಿನ ಕೊರತೆ ಭೀತಿ ಎದುರಾಗಿತ್ತು. ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಮಳೆಯಾಗುತ್ತಿರುವ ಹಿನ್ನೆಲೆ ಡ್ಯಾಂ ನೀರಿನ ಮಟ್ಟ 119.78 ಅಡಿಗೆ ಏರಿಕೆಯಾಗಿದೆ. ಡ್ಯಾಂ ಭರ್ತಿಗಾಗಿ ಇತ್ತೀಚೆಗೆ ವಿಶೇಷ ಪೂಜೆ ನೆರವೇರಿತ್ತು. ನೀರಿನ ಮಟ್ಟ ಏರಿಕೆಯಿಂದ ರೈತರಿಗೆ ಖುಷಿ ತಂದಿದೆ.

ಕೆಆರ್​ಎಸ್​ನ ಕಾವೇರಿ ಪ್ರತಿಮೆ ಬಳಿ ಪರ್ಜನ್ಯ ಜಪ ನಡೆದಿತ್ತು. ಖ್ಯಾತ ಜೋತಿಷಿ ಬಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಪರ್ಜನ್ಯ ಜಪ ನಡೆದಿತ್ತು. ಪೂಜೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು. ಪೂಜೆ ಬಳಿಕ ಕೆಆರ್​ಎಸ್​ ನೀರಿನ ಮಟ್ಟ ಭರ್ತಿಯತ್ತ ಸಾಗಿದೆ.

ಇಂದಿನ ನೀರಿನ ಮಟ್ಟ ಗರಿಷ್ಠ ನೀರಿನ ಮಟ್ಟ: 124.80 ಅಡಿ ಇಂದಿನ ನೀರಿನ ಮಟ್ಟ: 119.78 ಅಡಿ ಒಳಹರಿವು: 19785 ಕ್ಯೂಸೆಕ್ ಹೊರಹರಿವು: 5167 ಕ್ಯೂಸೆಕ್

ಇದನ್ನೂ ಓದಿ

Ajinkya Rahane: ಮುಂಬೈ ತಂಡಕ್ಕೆ ಹೊಸ ನಾಯಕನ ಘೋಷಣೆ: ಕ್ಯಾಪ್ಟನ್ ಪಟ್ಟತೊಟ್ಟ ಅಜಿಂಕ್ಯಾ ರಹಾನೆ

Shocking Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ 8 ತಿಂಗಳ ಗರ್ಭಿಣಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್