AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್‌ಎಸ್‌ ಡ್ಯಾಂನಿಂದ ನಾಳೆ ಕಾವೇರಿ ನದಿ ಹಾಗೂ ನಾಲೆಗಳಿಗೆ ನೀರು ಬಿಡುಗಡೆ

ಮೈಸೂರು, ಮಂಡ್ಯ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ನದಿ ಹಾಗೂ ನಾಲೆಗಳಿಗೆ ನೀರು ಹರಿಸಲು ಕಾವೇರಿ ನೀರಾವರಿ ನಿಗಮ ಮುಂದಾಗಿದ್ದು, ನಾಳೆಯೇ ನಾಲೆಗಳಿಗೆ ನೀರು ಬಿಡಲು ತೀರ್ಮಾನಿಸಲಾಗಿದೆ.

ಕೆಆರ್‌ಎಸ್‌ ಡ್ಯಾಂನಿಂದ ನಾಳೆ ಕಾವೇರಿ ನದಿ ಹಾಗೂ ನಾಲೆಗಳಿಗೆ ನೀರು ಬಿಡುಗಡೆ
ಕೆಆರ್‌ಎಸ್‌ ಡ್ಯಾಂ (ಸಂಗ್ರಹ ಚಿತ್ರ)
ಪ್ರಶಾಂತ್​ ಬಿ.
| Edited By: |

Updated on:Jul 21, 2023 | 10:47 PM

Share

ಮಂಡ್ಯ, ಜುಲೈ 21: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ‌ಕೆಆರ್​ಎಸ್ ಜಲಾಶಯ (KRS dam) ದಿಂದ ನದಿ ಹಾಗೂ ನಾಲೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದು, ನಾಳೆ ಬೆಳಗ್ಗೆ ನೀರು ಹರಿಸುವುದಾಗಿ ಕಾವೇರಿ ನೀರಾವರಿ ನಿಗಮದಿ‌ಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಕೆರೆ ಕಟ್ಟೆಗಳನ್ನು ತುಂಬಿಸಲು ನಾಲೆ ಹಾಗೂ ನದಿಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.

ಮೈಸೂರು, ಮಂಡ್ಯ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ನದಿ ಹಾಗೂ ನಾಲೆಗಳಿಗೆ ನೀರು ಹರಿಸಲು ಕಾವೇರಿ ನೀರಾವರಿ ನಿಗಮ ಮುಂದಾಗಿದೆ. ಜಲಾಶಯದಲ್ಲಿ ನೀರಿನ ಸಂಗ್ರಹಣೆ ಶೇ 32.10 ರಷ್ಟು ಇದೆ. ಹೊಸದಾಗಿ ಯಾವುದೇ ಬೆಳೆಗಳನ್ನ ಹಾಕದಂತೆ ರೈತರಿಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಬತ್ತಿದ ಕಾವೇರಿ: ಧಾರ್ಮಿಕ ವಿಧಿ ವಿಧಾನ ನೆರವೇರಿಸಿ ನದಿಯಲ್ಲಿ ಮುಳುಗಲಾಗದೆ ತಲೆ ಮೇಲೆ ಚಂಬು ನೀರು ಹಾಕಿಕೊಳ್ಳುತ್ತಿರುವ ಜನ

ಮಳೆ ಬಾರದೇ ಇದ್ದರೆ ಹತ್ತು ದಿನಗಳ ಕಾಲ‌ ನೀರು ಹರಿಸಲು ತೀರ್ಮಾನಿಸಿದ್ದು, ಸದ್ಯ ಜಲಾಶಯದಲ್ಲಿ 90.80 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಸಾಮಾರ್ಥ್ಯ 124.62 ಅಡಿ. ಜಲಾಶಯಕ್ಕೆ 4336 ಕ್ಯೂಸೆಸ್ ನೀರು ಒಳ ಹರಿವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:46 pm, Fri, 21 July 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ