ಬಸ್​​ನಲ್ಲೇ ರಣ ಚಂಡಿ ಅವತಾರ: ಕೀಟಲೆ ಕೊಟ್ಟ ಯುವಕನ ಗ್ರಹಚಾರ ಬಿಡಿಸಿದ ಯುವತಿ

ತನ್ನ ಮೇಲೆ ಕೈ ಹಾಕಿದ ಯುವಕನಿಗೆ ಯುವತಿ ಧರ್ಮದೇಟು ನೀಡಿರುವ ಘಟನೆ ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಸ್​​ನಲ್ಲೇ ರಣ ಚಂಡಿ ಅವತಾರ: ಕೀಟಲೆ ಕೊಟ್ಟ ಯುವಕನ ಗ್ರಹಚಾರ ಬಿಡಿಸಿದ ಯುವತಿ
ಯುವಕನಿಗೆ ಥಳಿಸಿದ ಯುವತಿ
Follow us
|

Updated on:Jun 05, 2023 | 10:32 AM

ಮಂಡ್ಯ: ಬಸ್​ಗಳಲ್ಲಿ​ ಕೆಲ ಕಿಡಿಗೇಡಿಗಳು ಮಹಿಳೆಯರಿಗೆ ತೊಂದರೆ ಕೊಡುತ್ತಿರುತ್ತಾರೆ. ಇದರಿಂದ ಕೆಲವು ಮಹಿಳೆಯರು ಸಿಟ್ಟಿಗೆದ್ದು ಸರಿಯಾಗಿ ಬಾರಿಸಿರುತ್ತಾರೆ. ಇನ್ನು ಕೆಲವರು ಅಸಹಾಯಕರಾಗಿ ಸುಮ್ಮನಾಗಿ ಬಿಡುತ್ತಾರೆ. ಆದರೆ ಇಲ್ಲಿ ಓರ್ವ ಯುವತಿ ಕಚೇಷ್ಟೆ ನೀಡಿದ ವ್ಯಕ್ತಿಗೆ ತಕ್ಕ ಶಾಸ್ತಿ ಮಾಡಿದ್ದಾಳೆ. ಹೌದು ತನ್ನ ಮೇಲೆ ಕೈ ಹಾಕಿದ ಯುವಕನಿಗೆ (Teen Boy) ಯುವತಿ (Teen Girl) ಧರ್ಮದೇಟು ನೀಡಿರುವ ಘಟನೆ ಮಂಡ್ಯದ (Mandya) ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಂಡ್ಯದಿಂದ ಪಾಂಡವಪುರಕ್ಕೆ (Pandavapura) ತೆರಳುವ ಬಸ್​ನಲ್ಲಿ ಯುವತಿ ಒಬ್ಬಳೆ ಕುಳಿತಿದ್ದಳು. ಯುವತಿ ಕುಳಿತಿದ್ದನ್ನು ಗಮನಿಸಿ ಹಿಂದಿನ ಸೀಟಿನಲ್ಲಿ ಬಂದು ಕುಳಿತ ಯುವಕ, ಮುಂದಿನ ಸೀಟಿನಲ್ಲಿ ಕುಳಿತಿದ್ದ ಯುವತಿಗೆ ಹಿಂದಿನಿಂದ ಕೀಟಲೆ ಕೊಡಲು ಶುರು ಮಾಡಿದ್ದಾನೆ. ಯುವತಿಗೆ ಕದ್ದು ಮುಚ್ಚಿ ಮುಟ್ಟುತ್ತ ಕುಚೇಷ್ಟೆ ಮಾಡಿದ್ದಾನೆ.

ಇದನ್ನೂ ಓದಿ: Viral Video: ರಾಮ್ತಾ ಜೋಗಿ ಹಾಡಿಗೆ ಸಕತ್ ಆಗಿ ಸ್ಟೆಪ್ಸ್ ಹಾಕಿದ ಕಾಲೇಜು ಯುವತಿಯರು

ಯುವಕನ ಕುಚೇಷ್ಟೆಗೆ ರೊಚ್ಚಿಗೆದ್ದ ಯುವತಿ ಬಸ್​ನಲ್ಲಿ ಎಲ್ಲರೆದುರು ಮುಖಕ್ಕೆ ಪಂಚ್ ಮಾಡಿದ್ದಾಳೆ. ನಂತರ ಯುವಕನ ಟೀ ಶರ್ಟ್ ಹಿಡಿದು ಹಿಗ್ಗಾ ಮುಗ್ಗ ಕೆನ್ನೆಗೆ ಬಾರಿಸಿದ್ದಾಳೆ. ಇನ್ನು ಯುವತಿ ನೀಡಿದ ಧರ್ಮಧೇಟು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವತಿ ಕೈಯಲ್ಲಿ ಏಟು ತಿಂದ ಯುವಕ ಬಸ್​​​ನಿಂದ ಪರಾರಿಯಾಗಿದ್ದಾನೆ.

ಮಹಿಳೆಯ ಜಡೆಗೆ ಕೈ ಹಾಕಿದ ಅನ್ಯಕೋಮಿನ ವ್ಯಕ್ತಿ; ವಿಡಿಯೋ ವೈರಲ್​

ಮಂಗಳೂರು: ಅನ್ಯಕೋಮಿನ ವ್ಯಕ್ತಿ ಮಹಿಳೆಯ ಜಡೆಗೆ ಕೈ ಹಾಕಿರುವ ಘಟನೆ ಮಂಗಳೂರು-ಧರ್ಮಸ್ಥಳ ಮಾರ್ಗವಾಗಿ ಸಂಚರಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್​​​​​ನಲ್ಲಿ ನಡೆದಿತ್ತು. ಅನ್ಯಕೋಮಿನ ವ್ಯಕ್ತಿ ಮಹಿಳೆಯ ಜಡೆಯನ್ನು ಸವರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಬಗ್ಗೆ ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ಬಂಟ್ವಾಳ ನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಇನ್ನು ಜಡೆ ಸವರಿದ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದ ಆರೋಪಿ ಹಮೀದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sat, 3 June 23

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್