AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೆಡೆ ದೀಪಾವಳಿ ಸಂಭ್ರಮ: ಇತ್ತ ಮೇಲುಕೋಟೆಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಕರಾಳ ದಿನಾಚರಣೆ

ಎಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದ್ರೆ ಇತ್ತ ಮೇಲುಕೋಟೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕರಾಳ ದಿನಾಚರಣೆ ಆಚರಿಸಿದ್ದಾರೆ.

ಎಲ್ಲೆಡೆ ದೀಪಾವಳಿ ಸಂಭ್ರಮ: ಇತ್ತ ಮೇಲುಕೋಟೆಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಕರಾಳ ದಿನಾಚರಣೆ
ಮೇಲುಕೋಟೆಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಕರಾಳ ದಿನಾಚರಣೆ
TV9 Web
| Edited By: |

Updated on: Oct 24, 2022 | 9:38 PM

Share

ಮಂಡ್ಯ: ಎಲ್ಲೆಡೆ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮನೆಮಾಡಿದೆ. ಮನೆ, ಅಂಗಡಿಗಳಲ್ಲಿ ಲಕ್ಷ್ಮೀ ಪೂಜೆ ಮಾಡಿ ಪಟಾಕಿ ಸಿಡಿಸಿ, ಸಿಹಿ ತಿಂದು ಸಂಭ್ರಮಿಸುತ್ತಿದ್ದಾರೆ. ಭಾರತೀಯ ಹಬ್ಬಗಳಲ್ಲಿ ದೀಪಾವಳಿ ಪ್ರಮುಖ ಹಬ್ಬವೆಂದು ಪರಿಗಣಿಸಲಾಗಿದೆ. ಈ ಹಬ್ಬವನ್ನು ಯುಗ-ಯುಗಗಳಿಂದಲೂ ಆಚರಿಸಲಾಗುತ್ತಿದೆ. ಇತ್ತ ಮಂಡ್ಯದ ಮೇಲುಕೋಟೆಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಕರಾಳ ದಿನಾಚರಣೆ ಆಚರಿಸಲಾಗಿದೆ.

ಮತಾಂತರಕ್ಕೆ ಒಪ್ಪದ ಹಿಂದೂಗಳನ್ನು ಟಿಪ್ಪು ಸುಲ್ತಾನ್ ಮಾರಣಹೋಮ ನಡೆಸಿದ್ದ . ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಪ್ರತಿವರ್ಷ ದೀಪಾವಳಿ ಹಬ್ಬದಂದು ಇಲ್ಲಿ ಕರಾಳ ದಿನಾಚರಣೆ ಆಚರಿಸಲಾಗುತ್ತದೆ. ಅದರಂತೆ ಬಿಜೆಪಿ ಯುವ ಮೋರ್ಚಾದಿಂದ ಇಂದು(ಅಕ್ಟೋಬರ್ 24) ಕರಾಳ ದಿನಾಚರಣೆ ಮಾಡಲಾಗಿದೆ. ಮೇಲುಕೋಟೆ ಪೊಲೀಸ್​ ಠಾಣೆ ಮುಂಭಾಗದಿಂದ ಚೆಲುವನಾರಾಯಣಸ್ವಾಮಿ ದೇವಸ್ಥಾನದವರೆಗೆ ಪಂಜಿನ ಮೆರವಣಿಗೆ ಮಾಡಿ ಟಿಪ್ಪು ಮತಾಂಧ ಎಂದು ಘೋಷಣೆ ಕೂಗಿದರು. ಬಳಿಕ ವೇದಿಕೆ ಮೇಲೆ ಭಾಷಣ ಮಾಡಿ ಬಿಜೆಪಿ ಕಾರ್ಯಕರ್ತರ, ಟಿಪ್ಪು ಸುಲ್ತಾನ್ ಹಾಗೂ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು,

ಟಿಪ್ಪು ಓರ್ವ ಮತಾಂಧ ಆತ ಯಾವ ಸ್ವಾತಂತ್ರ ಹೋರಾಟಗಾರನೂ ಅಲ್ಲ, ಟಿಪ್ಪುವನ್ನ ಕತ್ತರಿಸಿ ಎಸೆದಿದ್ದು ಇದೆ ಮಂಡ್ಯದ ಹುರಿ ಗೌಡ ಹಾಗೂ ಬೆಂಕಿ ಗೌಡರು. ಯಾವ ಬ್ರಿಟೀಷರು ಟಿಪ್ಪುವನ್ನ ಕೊಂದಿಲ್ಲ. ಕೊಂದಿದ್ದು ನಮ್ಮ ಸೇನಾನಿಗಳು. ಸಿದ್ದರಾಮಯ್ಯ ಮುಸ್ಲಿಂ ಮತವನ್ನ ಓಲೈಸೋ ಕೆಲಸ ಮಾಡ್ತಾರೆ. ಕಾಂಗ್ರೆಸ್ ನವರದ್ದು ಏನಿದ್ರು ಓಟ್ ಬ್ಯಾಂಕ್ ರಾಜಕಾರಣ. ಟಿಪ್ಪು ಓರ್ವ ಹೇಡಿ ಹಾಗೂ ಮತಾಂಧ ಎಂದು ವಾಗ್ದಾಳಿ ನಡೆಸಿದರು.

ಮೇಲುಕೋಟೆ ಪೊಲೀಸ್ ಠಾಣೆಯಿಂದ ಆರಂಭಗೊಂಡ ಮೆರವಣಿಗೆ ಚಲುಶನಾರಾಯಣ ದೇವಾಲಯದ ಬಳಿ ಅಂತ್ಯಗೊಂಡಿದ್ದು, ಪಂಜಿನ ಮೆರವಣಿಗೆಯಲ್ಲಿ ಸಹಸ್ರಾರುವ ಹಿಂದೂ ಕಾರ್ಯಕರ್ತರು, ಬಿಜೆಪಿ ಮುಖಂಡರು ಭಾಗವಹಿಸಿದ್ರು.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?