ಮಂಗಳೂರಿನಲ್ಲಿ ಗುಡ್ಡ ಕುಸಿತ, ಓರ್ವ ಸಾವು

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪುದ ತೇಜಸ್ವಿನಿ ಹಾಸ್ಪಿಟಲ್ ಗ್ರೂಪ್ಸ್ ಆಫ್ ಇನ್ಸ್ಟಿಟೂಷನ್ ಬಳಿ ಗುಡ್ಡ ಕುಸಿತವಾಗಿದೆ. ಗುಡ್ಡದ ಕೆಳಗೆ ಮೂವರು ಕಾರ್ಮಿಕರು‌ ಸಿಲುಕಿಕೊಂಡಿದ್ದರು. ಅವರಲ್ಲಿ ಮೂಡುಶೆಡ್ಡೆ ನಿವಾಸಿ ಶ್ಯಾಮ್ ಎಂಬಾತನನ್ನು ಹೊರ ತೆಗೆದು ಆಸ್ಪತ್ರೆಗೆ ಸಾಗಿಸುವಾಗ ಮೃತ ಪಟ್ಟಿದ್ದಾರೆ. ಇನ್ನು ಉಳಿದ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದು, ರಕ್ಷಣೆಯ ಕಾರ್ಯ ಮುಂದುವರಿದಿದೆ. ದುರಂತಕ್ಕೆ ಸಂಬಂಧಿಸಿ ಸಂಸ್ಥೆಯ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಗುಡ್ಡ ಕೊರೆತದಿಂದ ಅವಘಡ‌ ಸಂಭವಿಸಿದ್ದು, ಸ್ಥಳೀಯರಿಗೆ ಪ್ರತಿಕ್ರಿಯಿಸದೆ ಸಿಬ್ಬಂದಿ ನಿರ್ಲಕ್ಷ್ಯ […]

ಮಂಗಳೂರಿನಲ್ಲಿ ಗುಡ್ಡ ಕುಸಿತ, ಓರ್ವ ಸಾವು
ಸಾಧು ಶ್ರೀನಾಥ್​

Updated on: Nov 13, 2019 | 5:43 PM

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪುದ ತೇಜಸ್ವಿನಿ ಹಾಸ್ಪಿಟಲ್ ಗ್ರೂಪ್ಸ್ ಆಫ್ ಇನ್ಸ್ಟಿಟೂಷನ್ ಬಳಿ ಗುಡ್ಡ ಕುಸಿತವಾಗಿದೆ. ಗುಡ್ಡದ ಕೆಳಗೆ ಮೂವರು ಕಾರ್ಮಿಕರು‌ ಸಿಲುಕಿಕೊಂಡಿದ್ದರು. ಅವರಲ್ಲಿ ಮೂಡುಶೆಡ್ಡೆ ನಿವಾಸಿ ಶ್ಯಾಮ್ ಎಂಬಾತನನ್ನು ಹೊರ ತೆಗೆದು ಆಸ್ಪತ್ರೆಗೆ ಸಾಗಿಸುವಾಗ ಮೃತ ಪಟ್ಟಿದ್ದಾರೆ. ಇನ್ನು ಉಳಿದ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದು, ರಕ್ಷಣೆಯ ಕಾರ್ಯ ಮುಂದುವರಿದಿದೆ.

ದುರಂತಕ್ಕೆ ಸಂಬಂಧಿಸಿ ಸಂಸ್ಥೆಯ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಗುಡ್ಡ ಕೊರೆತದಿಂದ ಅವಘಡ‌ ಸಂಭವಿಸಿದ್ದು, ಸ್ಥಳೀಯರಿಗೆ ಪ್ರತಿಕ್ರಿಯಿಸದೆ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಸಂಸ್ಥೆಯ ಮುಖ್ಯಸ್ಥರು ಸ್ಥಳಕ್ಕೆ ಆಗಮಿಸಬೇಕು ಅಂತಾ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

Published On - 5:43 pm, Wed, 13 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us