AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದೊತ್ತಡ ತಪಾಸಣೆಗೆ ಹೋದ ನಿವೃತ್ತ ಬ್ಯಾಂಕ್ ಉದ್ಯೋಗಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Mangalore News: ರಕ್ತದೊತ್ತಡ ತಪಾಸಣೆ ನಡೆಸಿ ಬರುವುದಾಗಿ ಹೇಳಿ ಹೋಗಿದ್ದ ವ್ಯಕ್ತಿ ಮಂಗಳೂರು ಸಮೀಪದ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ನಿವೃತ್ತ ಬ್ಯಾಂಗ್ ಉದ್ಯೋಗಿ ವಿಶ್ವನಾಥ್ ಎಂದು ಗುರುತಿಸಲಾಗಿದೆ.

ರಕ್ತದೊತ್ತಡ ತಪಾಸಣೆಗೆ ಹೋದ ನಿವೃತ್ತ ಬ್ಯಾಂಕ್ ಉದ್ಯೋಗಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 25, 2022 | 3:02 PM

Share

ಮಂಗಳೂರು: ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಆದಂಕೂರು ಬಳಿಯ ನೇತ್ರಾವತಿ ನದಿಯಲ್ಲಿ ಭಾನುವಾರ ರಾತ್ರಿ 65 ವರ್ಷದ ನಿವೃತ್ತ ಬ್ಯಾಂಕ್ ಉದ್ಯೋಗಿಯ ಶವ  ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ವಿಶ್ವನಾಥ ಎಂದು ಗುರುತಿಸಲಾಗಿದೆ. ರಕ್ತದೊತ್ತಡ ತಪಾಸಣೆ ನಡೆಸಿ ಬರುವುದಾಗಿ ಹೇಳಿ ಹೋಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಸದ್ಯ ಮೃತದೇಹವನ್ನು ಪರೀಕ್ಷಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಶನಿವಾರ ಬೆಳಗ್ಗೆ ರಕ್ತದೊತ್ತಡವನ್ನು ಪರೀಕ್ಷೆ ಮಾಡಿ ಬರುವುದಾಗಿ ಹೇಳಿದ ಹೋಗಿದ್ದ ವಿಶ್ವನಾಥ್ ಅವರು ಮನೆಗೆ ವಾಪಸ್ಸಾಗಿಯೇ ಇಲ್ಲ. ಈ ವೇಳೆ ಗಾಬರಿಗೊಂಡ ಕುಟುಂಬಸ್ಥರು ಎಷ್ಟೇ ಹುಡುಕಾಟಿದರೂ, ಎಷ್ಟೇ ವಿಚಾರಿಸಿದರೂ ಸುಳಿವೇ ಸಿಕ್ಕಿಲ್ಲ. ಸಂಜೆಯಾಗುತ್ತಲೇ ಪೊಲೀಸ್ ಠಾಣಾ ಮೆಟ್ಟಿಲು ಹತ್ತಿದ ಕುಟುಂಬಸ್ಥರು ನಾಪತ್ತೆ ದೂರು ದಾಖಲಿಸಿದರು. ದುರಂತವೆಂದರೆ ಆ ವ್ಯಕ್ತಿ ಮತ್ತೆ ಸಿಕ್ಕಿದ್ದ ಭಾನುವಾರ ರಾತ್ರಿ ಶವವಾಗಿ.

ಜುಲೈ 24 ರಂದು ರಾತ್ರಿ 9 ಗಂಟೆಗೆ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ, ಮೃತರನ್ನು ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ವಿಶ್ವನಾಥ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ನಮಗೆ ತಿಳಿದುಬಂದಿತು. ಪರೀಕ್ಷಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ನಾವು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಹಿಂದೂಸ್ತಾನ್ ಟೈಮ್ಸ್ ಜೊತೆ ಮಂಗಳೂರಿನ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಂಗಳೂರಿನಲ್ಲಿ ರಕ್ತದೊತ್ತಡ ತಪಾಸಣೆಗೆ ಹೋಗುವುದಾಗಿ ವಿಶ್ವನಾಥ್ ಅವರು ಕುಟುಂಬಸ್ಥರಿಗೆ ತಿಳಿಸಿದ್ದರು. ಅವರು ಸಂಜೆಯಾದರೂ ಮನೆಗೆ ಬಾರದಿದ್ದಾಗ ಹುಡುಕಾಡಿದರು. ಅದಾಗ್ಯೂ ಸುಳಿವು ಸಿಗದಿದ್ದಾಗ ಸಂಜೆ ಠಾಣೆಗೆ ದೂರು ನೀಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆ ಭಾರೀ ಮಳೆಯಾಗಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿತ್ತು, ಹೀಗಾಗಿ ನದಿ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ನದಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿತ್ತು.

Published On - 3:00 pm, Mon, 25 July 22

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು