AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಮೂಲಕ ಕೆನಡಾಕ್ಕೆ ಅಕ್ರಮವಾಗಿ ತೆರಳುತ್ತಿದ್ದ ಶ್ರೀಲಂಕಾ ಪ್ರಜೆಗಳ ಬಂಧನ; ಮಾನವ ಕಳ್ಳಸಾಗಣೆ ಜಾಲ ಪತ್ತೆಹಚ್ಚಿದ ಮಂಗಳೂರು ಪೊಲೀಸರು

Human Trafficking in Mangaluru: ತಮಿಳುನಾಡು ಚುನಾವಣೆ ನಡೆದ ಕಾರಣ ತಪಾಸಣೆ ಚುರುಕುಗೊಂಡಿದ್ದರಿಂದ ಅವರನ್ನು ಮಂಗಳೂರಿಗೆ ತಂದು ಬಿಡಲಾಗಿತ್ತು. ಮಂಗಳೂರಿಗೆ ಬಂದು ಇಲ್ಲಿನ ಲಾಡ್ಜ್ ಗಳಲ್ಲಿ ತಿಂಗಳಿನಿಂದ ವಾಸ್ತವ್ಯ ಹೂಡಿದ್ದರು.

ಭಾರತದ ಮೂಲಕ ಕೆನಡಾಕ್ಕೆ ಅಕ್ರಮವಾಗಿ ತೆರಳುತ್ತಿದ್ದ ಶ್ರೀಲಂಕಾ ಪ್ರಜೆಗಳ ಬಂಧನ; ಮಾನವ ಕಳ್ಳಸಾಗಣೆ ಜಾಲ ಪತ್ತೆಹಚ್ಚಿದ ಮಂಗಳೂರು ಪೊಲೀಸರು
ಮಾನವ ಕಳ್ಳಸಾಗಣೆ ಜಾಲ ಬಯಲಿಗೆಳೆದ ಮಂಗಳೂರು ಪೊಲೀಸರು
TV9 Web
| Updated By: guruganesh bhat|

Updated on: Jun 11, 2021 | 4:32 PM

Share

ಮಂಗಳೂರು: ಬೃಹತ್​ ಮಾನವ ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿರುವ ಮಂಗಳೂರು ಪೊಲೀಸರು ಶ್ರೀಲಂಕಾದ 38 ಪ್ರಜೆಗಳನ್ನು ಬಂಧಿಸಿದ್ದಾರೆ. ಸಮುದ್ರ ಮಾರ್ಗವಾಗಿ ತಮಿಳುನಾಡಿಗೆ ಬಂದಿದ್ದ ಶ್ರೀಲಂಕಾದ ಪ್ರಜೆಗಳು ನಂತರ ತಮಿಳುನಾಡಿನಿಂದ ಮಂಗಳೂರಿಗೆ 2 ತಿಂಗಳ ಹಿಂದೆ ಬಂದಿದ್ದರು. ಮಂಗಳೂರಿನಿಂದ ಕೆನಡಾಕ್ಕೆ ತೆರಳಲು ಪ್ರಯತ್ನಿಸುತ್ತಿದ್ದ ಶ್ರೀಲಂಕಾ ಪ್ರಜೆಗಳು ಲಾಕ್​ಡೌನ್ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೇ ಸಿಲುಕಿದ್ದರು.

ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ ಪ್ರಜೆಗಳ ಬಂಧನ ವಿಚಾರವಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಶ್ರೀಲಂಕಾದ ಪ್ರಜೆಗಳು ಅಕ್ರಮವಾಗಿ ದೇಶದೊಳಗೆ ನುಸುಳಿರುವುದು ಆಂತರಿಕಾ ಭದ್ರತಾ ವಿಚಾರವೂ ಆಗಿದೆ. ಅವರು ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ತೆರಳುವ ಯೋಜನೆ ಹೊಂದಿದ್ದರು. 6 ಲಕ್ಷ ಶ್ರೀಲಂಕಾ ರೂಪಾಯಿಗಳನ್ನು ಏಜೆಂಟ್ ಗೆ ಕೊಟ್ಟಿದ್ದಾಗಿ ಮಾಹಿತಿ ದೊರೆತಿದೆ. ತಮಿಳುನಾಡು ಚುನಾವಣೆ ನಡೆದ ಕಾರಣ ತಪಾಸಣೆ ಚುರುಕುಗೊಂಡಿದ್ದರಿಂದ ಅವರನ್ನು ಮಂಗಳೂರಿಗೆ ತಂದು ಬಿಡಲಾಗಿತ್ತು. ಮಂಗಳೂರಿಗೆ ಬಂದು ಇಲ್ಲಿನ ಲಾಡ್ಜ್ ಗಳಲ್ಲಿ ತಿಂಗಳಿನಿಂದ ವಾಸ್ತವ್ಯ ಹೂಡಿದ್ದರು ಎಂದು ತಿಳಿಸಿದರು.

ಹೀಗಾಗಿ ಸದ್ಯ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ 38 ಜನರನ್ನು ವಶಕ್ಕೆ ಪಡೆದಿದ್ದು, ಉಳಿದವರ ಹುಡುಕಾಟ ಮುಂದುವರೆದಿದೆ. ಮಂಗಳೂರಿನಲ್ಲಿ ಇವರಿಗೆ ಆಶ್ರಯ ಕೊಡಲು ನೆರವು ನೀಡಿದವರ ಬಗ್ಗೆಯೂ ತನಿಖೆ ಆರಂಭವಾಗಿದೆ. ಬೇರೆ ದೇಶದ ವ್ಯಕ್ತಿಗಳು ಮಂಗಳೂರಿಗೆ ಆಗಮಿಸಿ ಅಕ್ರಮ ಆಶ್ರಯ ಪಡೆದಿರುವ ಬಗ್ಗೆ ತನಿಖೆ ಮುಂದುವರೆದಿದೆ. ಇವರಿಗೆ ಆಶ್ರಯ ಕೊಟ್ಟ ಕಾರಣ ಮತ್ತು ನೆರವು ನೀಡಿದ ಕಾರಣ ಇಲ್ಲಿನ ಆರು ಜನರನ್ನು ವಶಕ್ಕೆ ಪಡೆಯಲಾಗಿದೆ.

ಶ್ರೀಲಂಕಾದಿಂದ ಮಾರ್ಚ್ 17ಕ್ಕೆ ಹೊರಟು ತಮಿಳುನಾಡಿಗೆ ಬಂದಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು. ಮಂಗಳೂರಿನ ಎರಡು ಲಾಡ್ಜ್ ಮತ್ತು ಎರಡು ಮನೆಗಳಲ್ಲಿ ವಾಸ್ತವ್ಯ ಹೂಡಿದ್ದರು. ತಮಿಳುನಾಡು ‌ಗುಪ್ತಚರ ಇಲಾಖೆ ಪ್ರಕಾರ ಇವರು ಕೆಲಸಕ್ಕಷ್ಟೇ ಕೆನಡಾಗೆ ತೆರಳುತ್ತಿದ್ದರು. ಇವರಿಗೆ ಶ್ರೀಲಂಕಾ ಮತ್ತು ತಮಿಳುನಾಡಿನಲ್ಲಿ ಇರುವ ಏಜೆಂಟ್​ಗಳು ಭಾರತದ ಮೂಲಕ ಕೆನಡಾಕ್ಕೆ ತೆರಳಲು ಸಹಾಯ ಮಾಡುತ್ತಿದ್ದರು. ಮಂಗಳೂರಿನಲ್ಲೂ ಇವರ ಏಜೆಂಟ್​ಗಳಿರುವ ಸಾಧ್ಯತೆ ಇದ್ದು, ಈ ಕುರಿತು ತನಿಖೆ ನಡೆಸುತ್ತೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಭಟ್ಕಳದಲ್ಲಿ 8 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ

ಹಣಕಾಸಿನ ಇತಿಮಿತಿ ನೋಡಿಕೊಂಡು ಕೊವಿಡ್​ಗೆ ಬಲಿಯಾದವರ ಕುಟುಂಬಕ್ಕೆ ಪರಿಹಾರದ ಕುರಿತು ನಿರ್ಧರಿಸುವೆ: ಸಿಎಂ ಯಡಿಯೂರಪ್ಪ

(Mangalore police tracking down human trafficking network Detained Sri Lankan nationals illegally migrating to Canada through India)

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್