AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಮಂಗಳೂರು ವಿವಿ ಪ್ರೊ. ಅರಬಿ ವಜಾ, ವರದಿ ಮುಚ್ಚಿಟ್ಟ ಖಾನ್ ವಿರುದ್ಧ ದೂರು

ಮಂಗಳೂರು: ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಅರಬಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. 2018ರಲ್ಲಿ ಮಹಿಳಾ ಆಯೋಗಕ್ಕೆ ಸಂಶೋಧನಾ ವಿದ್ಯಾರ್ಥಿನಿ ಸಾಕ್ಷ್ಯ ಸಮೇತ ದೂರು ನೀಡಿದ್ದರು. ಆಯೋಗ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಸಮಿತಿಯಿಂದ ತನಿಖೆ ಶುರುವಾಗಿತ್ತು. ಬಳಿಕ 2018ರ ಡಿಸೆಂಬರ್​ನಲ್ಲೇ  ಆಡಳಿತ ಸಮಿತಿ ವರದಿಯನ್ನು ಸಲ್ಲಿಸಿತ್ತು. ಆದರೆ ವಿವಿ ಕುಲಸಚಿವ ಎಂ.ಎಂ. ಖಾನ್ ವರದಿ ತೆರೆಯದೇ ಮುಚ್ಚಿಟ್ಟಿದ್ದರು. ಆದರೆ […]

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಮಂಗಳೂರು ವಿವಿ ಪ್ರೊ. ಅರಬಿ ವಜಾ, ವರದಿ ಮುಚ್ಚಿಟ್ಟ ಖಾನ್ ವಿರುದ್ಧ ದೂರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 29, 2020 | 1:48 PM

Share

ಮಂಗಳೂರು: ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಅರಬಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.

2018ರಲ್ಲಿ ಮಹಿಳಾ ಆಯೋಗಕ್ಕೆ ಸಂಶೋಧನಾ ವಿದ್ಯಾರ್ಥಿನಿ ಸಾಕ್ಷ್ಯ ಸಮೇತ ದೂರು ನೀಡಿದ್ದರು. ಆಯೋಗ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಸಮಿತಿಯಿಂದ ತನಿಖೆ ಶುರುವಾಗಿತ್ತು. ಬಳಿಕ 2018ರ ಡಿಸೆಂಬರ್​ನಲ್ಲೇ  ಆಡಳಿತ ಸಮಿತಿ ವರದಿಯನ್ನು ಸಲ್ಲಿಸಿತ್ತು. ಆದರೆ ವಿವಿ ಕುಲಸಚಿವ ಎಂ.ಎಂ. ಖಾನ್ ವರದಿ ತೆರೆಯದೇ ಮುಚ್ಚಿಟ್ಟಿದ್ದರು.

ಆದರೆ ಇತ್ತೀಚೆಗೆ ಮಹಿಳಾ ಆಯೋಗ ಈ ವರದಿ ಬಗ್ಗೆ ಕೇಳಿತ್ತು. ಹೀಗಾಗಿ ಸಿಂಡಿಕೇಟ್ ಎದುರು ಈ ವರದಿ ಬಗ್ಗೆ ಪ್ರಸ್ತಾಪ ಮಾಡಲಾಯಿತು. ವರದಿಯಲ್ಲಿ ಪ್ರೊ. ಅರಬಿ ತಪ್ಪಿತಸ್ಥ ಎಂಬುವುದು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನ ಸೇವೆಯಿಂದ ವಜಾ ಮಾಡಲಾಗಿದೆ. ಜೊತೆಗೆ ವರದಿ ಮುಚ್ಚಿಟ್ಟಿದ್ದಕ್ಕೆ ಎಂ.ಎಂ. ಖಾನ್ ವಿರುದ್ಧವೂ ಸರ್ಕಾರಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ.

Published On - 1:48 pm, Thu, 29 October 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು