AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಬೆಂಗಳೂರು ರೈಲು ಸಂಚಾರ ಯಾವಾಗ ಪುನರಾರಂಭ? ಹಳಿ ದುರಸ್ತಿ ಕಾರ್ಯದ ಅಪ್​ಡೇಟ್ ಇಲ್ಲಿದೆ

ಸಕಲೇಶಪುರದ ದೋಣಿಗಲ್‌, ಎಡಕುಮೇರಿ ಮತ್ತು ಕಡಗರವಳ್ಳಿ ಮಧ್ಯೆ ಭೂಕುಸಿತ ಸಂಭವಿಸಿದ ಕಾರಣ ರೈಲು ಹಳಿಗಳಿಗೆ ಹಾನಿಯಾಗಿದ್ದು, ಬೆಂಗಳೂರು ಮಂಗಳೂರು ನಡುವಣ ರೈಲು ಸಂಚಾರ ಜುಲೈ 26ರಿಂದ ಸ್ಥಗಿತಗೊಂಡಿದೆ. ಇದು ಸಾವಿರಾರು ಪ್ರಯಾಣಿಕರಿಗೆ ಸಂಕಷ್ಟ ತಂದೊಡ್ಡಿದೆ. ಈ ಮಾರ್ಗದಲ್ಲಿ ಯಾವಾಗ ರೈಲು ಪುನರಾರಂಭಗೊಳ್ಳಲಿದೆ ಎಂದು ಜನ ಕಾತರದಿಂದಿದ್ದಾರೆ. ರೈಲು ಪುನರಾರಂಭದ ಬಗ್ಗೆ ಇದೀಗ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಮಂಗಳೂರು ಬೆಂಗಳೂರು ರೈಲು ಸಂಚಾರ ಯಾವಾಗ ಪುನರಾರಂಭ? ಹಳಿ ದುರಸ್ತಿ ಕಾರ್ಯದ ಅಪ್​ಡೇಟ್ ಇಲ್ಲಿದೆ
ಮಂಗಳೂರು ಬೆಂಗಳೂರು ರೈಲು ಸಂಚಾರ (ಸಂಗ್ರಹ ಚಿತ್ರ)
Ganapathi Sharma
|

Updated on:Aug 05, 2024 | 9:11 AM

Share

ಬೆಂಗಳೂರು, ಆಗಸ್ಟ್ 5: ಹಾಸನನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್‌, ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂಕುಸಿತ ಸಂಭವಿಸಿದ ಕಾರಣ ಬೆಂಗಳೂರು ಮಂಗಳೂರು ಮಧ್ಯೆ ಸಂಚರಿಸುವ ಎಲ್ಲ ರೈಲುಗಳ ಸಂಚಾರ ರದ್ದಾಗಿದೆ. ಕೆಲವು ರೈಲುಗಳನ್ನು ಪರ್ಯಾಯ ಮಾರ್ಗಗಳ ಮೂಲಕ ಕಳುಹಿಸಲಾಗುತ್ತಿದೆ. ಭೂಕುಸಿತ ಸಂಭವಿಸಿದ ಸ್ಥಳಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಅಂತಿಮ ಹಂತ ತಲುಪಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ. ಇದರಿಂದಾಗಿ ಶೀಘ್ರವೇ ರೈಲು ಸಂಚಾರ ಪುನಾರರಂಭಗೊಳ್ಳುವ ನಿರೀಕ್ಷೆ ಇದೆ.

ದುರಸ್ತಿ ಕಾರ್ಯ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ಸದ್ಯ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದೆ. ಭೂಕುಸಿತ ಸಂಭವಿಸಿದ ಸ್ಥಳದ ಕೆಳಗೆ ಬಂಡೆ ಮತ್ತು ಮರಳಿನ ಚೀಲಗಳಿಂದ ತಡೆಗೋಡೆ ನಿರ್ಮಿಸಿ ಕಬ್ಬಿಣದ ಬಲೆಯಿಂದ ಭದ್ರಪಡಿಸಲಾಗಿದೆ. ಹಳಿಯನ್ನು ಬಲಪಡಿಸುವ ಕೆಲಸ ಬಹುತೇಕ ಪೂರ್ಣಗೊಂಡಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ರೈಲ್ವೆ ಹಳಿಗಳಿಗೆ ಹೊಂದಿಕೊಂಡಂತೆ ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಕಾರ್ಯ ಈಗಷ್ಟೇ ಆರಂಭವಾಗಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

ಶೀಘ್ರ ಪ್ರಾಯೋಗಿಕ ಸಂಚಾರ

ದುರಸ್ತಿ ಕಾಮಗಾರಿ ಪೂರ್ಣಗೊಂಡ ಬಳಿಕ ಸುರಕ್ಷತಾ ತಪಾಸಣೆ ನಡೆಸಲಾಗುವುದು. ಬಳಿಕ ಅನುಮತಿ ದೊರೆತ ಕೂಡಲೇ ಎಂಜಿನ್​ಗಳ ಪ್ರಾಯೋಗಿಕ ಚಾಲನೆ ನಡೆಯಲಿದೆ.

ಇದನ್ನೂ ಓದಿ: ಮಂಗಳೂರು-ಯಶವಂತಪುರ ಎಕ್ಸಪ್ರೆಸ್​ ರೈಲು ಸಮಯದಲ್ಲಿ ಬದಲಾವಣೆ

ಪ್ರಸ್ತುತ ಆಗಸ್ಟ್ 6 ರವರೆಗೆ ಈ ಮಾರ್ಗದಲ್ಲಿ ರೈಲುಗಳ ಸಂಚಾರ ರದ್ದಾಗಿದೆ. ಜುಲೈ 26 ರಂದು ಭೂಕುಸಿತ ಸಂಭವಿಸಿತ್ತು. ಅಂದಿನಿಂದ, ಕಾರ್ಮಿಕರು ಮತ್ತು ಗ್ಯಾಂಗ್‌ಮೆನ್ ಸ್ಥಳದಲ್ಲಿ ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದಾರೆ. ಸುಮಾರು 600-700 ಮಂದಿ ಕಾಮಗಾರಿಯಲ್ಲಿ ತೊಡಗಿಕೊಂಡಿದ್ದಾರೆ.

ರದ್ದಾಗಿತ್ತು 14 ರೈಲುಗಳ ಸಂಚಾರ

ದಿನಗಟ್ಟಲೆ ಸುರಿದ ನಿರಂತರ ಮಳೆಯಿಂದಾಗಿ ಎಡಕುಮೇರಿ ಕಡಗರವಳ್ಳಿ ಮಧ್ಯೆ ಭೂಕುಸಿತ ಸಂಭವಿಸಿ ರೈಲು ಹಳಿಗಳ ಮೇಲೆ ಮಣ್ಣು ಬಿದ್ದ ಪರಿಣಾಮ ಜುಲೈ 26ರಿಂದ ಸುಮಾರು 14 ರೈಲುಗಳ ಸಂಚಾರ ಸ್ಥಗಿತಗೊಂಡಿತ್ತು. ಹಳಿಯ ಕೆಳಭಾಗದಲ್ಲಿ ಮಣ್ಣು ಭಾರಿ ಆಳಕ್ಕೆ ಕುಸಿದಿದ್ದರಿಂದ ಹಳಿಗೆ ಕೂಡ ಅಪಾಯ ಎದುರಾಗಿದೆ. ಜಡಿಮಳೆಯ ಕಾರಣ ದುರಸ್ತಿ ಕಾರ್ಯವೂ ವಿಳಂಬವಾಗುತ್ತಿದೆ.  ಆಗಸ್ಟ್ 10ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅನುಮಾನ ಎಂದು ಈ ಹಿಂದೆ ನೈಋತ್ಯ ರೈಲ್ವೆ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:04 am, Mon, 5 August 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ