AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕರಾವಳಿ-ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ?

ಶೀಘ್ರದಲ್ಲೇ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆದಿದೆ. ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಾಧ್ಯತೆ ಇದೆ. ನಟ ರಿಷಬ್ ಶೆಟ್ಟಿಯನ್ನ ಪ್ರವಾಸೋದ್ಯಮ ಅಭಿವೃದ್ಧಿ ರಾಯಭಾರಿಯಾಗಿ ನೇಮಕ ಮಾಡುವ ಸಾಧ್ಯತೆ ಇದೆ.

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕರಾವಳಿ-ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ?
ಸಿಎಂ ಡಿಕೆ ಶಿವಕುಮಾರ್​ ಸಭೆImage Credit source: x.com/DKShivakumar
ಗಂಗಾಧರ​ ಬ. ಸಾಬೋಜಿ
|

Updated on: Jun 19, 2026 | 9:17 PM

Share

ಬೆಂಗಳೂರು, ಜೂನ್​​ 19: ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ (development of coastal tourism) ಕುರಿತಂತೆ ಇಂದು ವಿಧಾನಸೌಧದಲ್ಲಿ ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಶೀಘ್ರದಲ್ಲೇ ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸಲು ಚಿಂತನೆ ನಡೆದಿದ್ದು, ಈ ವೇಳೆ ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಾಧ್ಯತೆ ಇದೆ.

ಮುಖ್ಯಾಂಶಗಳು

  • ಶೀಘ್ರದಲ್ಲೇ ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸಲು ಚಿಂತನೆ
  • ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ?
  • ನಟ ರಿಷಬ್ ಶೆಟ್ಟಿಯನ್ನೇ ರಾಯಭಾರಿಯಾಗಿ ನೇಮಕ ಮಾಡುವ ಸಾಧ್ಯತೆ

ಮೊದಲ ಬಾರಿಗೆ ಕರಾವಳಿ ನೀತಿಗೆ ಸರ್ಕಾರ ಚಿಂತನೆ

ಇದೇ ಮೊದಲ ಬಾರಿಗೆ ಕರಾವಳಿ ನೀತಿಗೆ ಸರ್ಕಾರ ಚಿಂತನೆ ನಡೆಸಿದೆ. ಹಾಗೆಯೇ ಕರಾವಳಿ ಆಪರೇಷನ್ ಮತ್ತು ಬ್ಯುಸಿನೆಸ್ ಹೇಗೆ ಮಾಡಬೇಕು ಎಂಬುವುದರ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಗೋವಾ, ಕರಾವಳಿ ರಿಲ್ಯಾಕ್ಸೇಶನ್ ಇದೆ. ಆದರೆ ಕರ್ನಾಟಕ ಕರಾವಳಿಯಲ್ಲಿ ರಿಲ್ಯಾಕ್ಷನ್ ಟೈಟ್ ಇದೆ. ಹೀಗಾಗಿ ಕೇಂದ್ರಕ್ಕೆ ಸಿಎಂ‌ ಡಿಕೆ ಶಿವಕುಮಾರ್​ ನಿಯೋಗದಿಂದ ಮನವಿಗೆ ಚಿಂತನೆ ನಡೆದಿದೆ. ಕರಾವಳಿ ಭಾಗದಲ್ಲಿ ಶೂಟಿಂಗ್ ಪ್ರಚಾರ ಮಾಡುವುದಕ್ಕೂ ತೀರ್ಮಾನಿಸಲಾಗಿದೆ.

ವಾಸೋದ್ಯಮವನ್ನು ಮತ್ತಷ್ಟು ಸಮೃದ್ಧಗೊಳಿಸುವುದೇ ನಮ್ಮ ಗುರಿ: ಡಿಕೆ ಶಿವಕುಮಾರ್

ಸಭೆಯಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್​, ಕರ್ನಾಟಕವನ್ನು ಜಾಗತಿಕ ಮಟ್ಟದ ಪ್ರಮುಖ ಕರಾವಳಿ ಪ್ರವಾಸಿ ತಾಣವಾಗಿ ರೂಪಿಸುವ ಉದ್ದೇಶದೊಂದಿಗೆ, ವಿಶ್ವದರ್ಜೆಯ ಸುಸ್ಥಿರ ಪ್ರವಾಸೋದ್ಯಮ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ಕರಾವಳಿ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಹಾಗೂ ನೈಸರ್ಗಿಕ ಸೌಂದರ್ಯವನ್ನು ಜಗತ್ತಿಗೆ ಪರಿಚಯಿಸುವ ಮೂಲಕ ಪ್ರವಾಸೋದ್ಯಮವನ್ನು ಮತ್ತಷ್ಟು ಸಮೃದ್ಧಗೊಳಿಸುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದರು.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ನಿಮ್ಮ ಮನೆಗೆ ಬರಲಿದ್ದಾರೆ ಚೆಕ್ಕಿಂಗ್ ಆಫೀರ್ಸ್

ಕರಾವಳಿಯಲ್ಲಿ ಕ್ಯಾಬಿನೆಟ್ ನಡೆಸುತ್ತೇವೆ. ಅಷ್ಟರೊಳಗೆ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಸಿದ್ಧವಿರಬೇಕು. ಸಿಆರ್‌ಝಡ್‌ ಮತ್ತು ಅರಣ್ಯ ಇಲಾಖೆಯಿಂದ ಆಗುತ್ತಿರುವ ತಾಂತ್ರಿಕ, ತಕರಾರುಗಳ ಬಗ್ಗೆ 15 ರಿಂದ 20 ದಿನಗಳಲ್ಲಿ ಸಮಸ್ಯೆಗಳು ಮತ್ತು ಪರಿಹಾರ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ.

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್​ ಖಡಕ್​ ಸೂಚನೆ

ಹೂಡಿಕೆದಾರರಿಗೆ ಸುಗಮವಾದ ಮತ್ತು ಸರಳವಾದ ಮಾರ್ಗಗಳನ್ನು ಸೃಜಿಸಬೇಕು. ಉದ್ಯಮಿಗಳಿಗೆ ಆಗುತ್ತಿರುವ ಇಲಾಖಾ ಕಿರಿಕಿರಿಗಳಿಗೆ ಪರಿಹಾರ ಕಂಡುಹಿಡಿಯಬೇಕು. ಕರಾವಳಿ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡಿ, ಕರಾವಳಿಯಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡುವಂತೆ ಸಿಎಂ ಸೂಚಿಸಿದ್ದಾರೆ.

ಅಭಿವೃದ್ಧಿ ಯೋಜನೆಗಳಿಗೆ ತಾಂತ್ರಿಕ ತೊಂದರೆ ಆಗದಂತೆ ನಾನಾ ಅನುಮತಿಗಳನ್ನು ಪಡೆಯಲು ಏಕ ಗವಾಕ್ಷಿ (ಸಿಂಗಲ್‌ ವಿಂಡೋ) ವ್ಯವಸ್ಥೆ ಜಾರಿಗೆ ಮತ್ತು ಹೆಲಿ ಟೂರಿಸಂ ಅಭಿವೃದ್ಧಿಗೆ ಒತ್ತು ನೀಡಲು ಸಿಎಂಗೆ ಉದ್ಯಮಿಗಳು ಮನವಿ ಮಾಡಿದರು. ಈ ವೇಳೆ ಕರ್ನಾಟಕ ಪ್ರವಾಸೋದ್ಯಮ ನೀತಿಯಡಿಯಲ್ಲಿ 718.63 ಕೋಟಿ ರೂ ಅಂದಾಜು ಹೂಡಿಕೆಯ 45 ಯೋಜನೆಗಳನ್ನು ಅನುಮೋದಿಸಲಾಗಿರುವ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದರು.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಿಎಂ ಕೊಟ್ಟ ಸೂಚನೆಗಳೇನು?

ಇನ್ನು ಕರಾವಳಿ ಪ್ರವಾಸೋದ್ಯಮ ವಲಯಗಳು ಮತ್ತು ಬೃಹತ್‌ ಪ್ರವಾಸೋದ್ಯಮ ಯೋಜನೆಗಳು, ಕರಾವಳಿ ಮೇಳಗಳು, ಉತ್ಸವಗಳು, ಕರಾವಳಿ ಸಂಸ್ಕೃತಿ, ಆಚರಣೆ, ಹೆಮ್ಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮತ್ತು ಪ್ರಚಾರ ಮಾಡಲು ಸರ್ಕಾರದ ಈ ಮಹತ್ವಾಕಾಂಕ್ಷೆಯನ್ನು ಸಾಧಿಸಲು ಮತ್ತು ಬಂಡವಾಳ ಆಕರ್ಷಿಸಲು ಬಡ್ಡಿ ಸಹಾಯಧನ ಮತ್ತು ರಿಯಾಯ್ತಿಗಳ ಮೂಲಕ ಪ್ರೋತ್ಸಾಹಗಳನ್ನು ನೀಡುವ ಬಗ್ಗೆ ಸಿಎಂ ಒತ್ತು ನೀಡಿದ್ದಾರೆ.

ರಾಜ್ಯ ಸರ್ಕಾರಕ್ಕೆ ನಟ ರಿಷಬ್ ಶೆಟ್ಟಿ ಮನವಿ

ಇನ್ನು ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿಯನ್ನ ನೇಮಕ ಮಾಡುವ ಸಾಧ್ಯತೆ ಇದೆ. ಸಭೆಯಲ್ಲಿ ಭಾಗಿಯಾಗಿದ್ದ ನಟ ರಿಷಬ್ ಶೆಟ್ಟಿ ಕಲೆಗೆ ಪ್ರಾಶಸ್ತ್ಯ ಹೆಚ್ಚಿಸಬೇಕು. ಕರಾವಳಿ ಜನಪದ ಕಲೆ, ಸಂಗೀತಕ್ಕೆ ಪ್ರೋತ್ಸಾಹಿಸಬೇಕು ಮತ್ತು ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ವರದಿ: ಈರಣ್ಣ ಬಸವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ