AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀರ್ಥಹಳ್ಳಿಯನ್ನು ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೂವಾರಿ

ಉಗ್ರ ಅರಾಫತ್ ತೀರ್ಥಹಳ್ಳಿಯನ್ನ ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದನು. ಈ ವಿಚಾರ ಆತನ ಬಂಧನದ ಬಳಿಕ ಬಹಿರಂಗವಾಗಿದೆ. ಈ ಹಿಂದೆ ಭಟ್ಕಳ ಸಹೋದರರಿಂದ ಭಟ್ಕಳ ತಾಲೂಕು ಉಗ್ರವಾದಕ್ಕೆ ಕುಖ್ಯಾತಿ ಪಡೆದಿತ್ತು.

ತೀರ್ಥಹಳ್ಳಿಯನ್ನು ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೂವಾರಿ
ಮಂಗಳೂರು ಕುಕ್ಕರ್​ ಬಾಂಬ್​ ಸ್ಪೋಟ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Sep 17, 2023 | 11:47 AM

Share

ಬೆಂಗಳೂರು ಸೆ.17: ಮಂಗಳೂರಿನಲ್ಲಿ (Mangaluru) ಕಳೆದ ವರ್ಷ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ (Cooker Bomb) ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ (ISIS) ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದ್ದು, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಾಯಿ ಬಿಟ್ಟಿದ್ದಾನೆ. ಉಗ್ರಗಾಮಿಗಳು ಭಟ್ಕಳ ಮಾದರಿಯಲ್ಲೇ ತೀರ್ಥಹಳ್ಳಿಯನ್ನು ಉಗ್ರರ ನಕ್ಷೆಗೆ ಸೇರಿಸಲು ಪಣ ತೊಟ್ಟಿದ್ದಾರೆ ಎಂಬ ಆಘಾತಕಾರಿ ಅಂಶ ಬಹಿರಂಗವಾಗಿದೆ.

ಉಗ್ರ ಅರಾಫತ್ ತೀರ್ಥಹಳ್ಳಿಯನ್ನ ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದನು. ಈ ವಿಚಾರ ಆತನ ಬಂಧನದ ಬಳಿಕ ಬಹಿರಂಗವಾಗಿದೆ. ಈ ಹಿಂದೆ ಭಟ್ಕಳ ಸಹೋದರರಿಂದ ಭಟ್ಕಳ ತಾಲೂಕು ಉಗ್ರವಾದಕ್ಕೆ ಕುಖ್ಯಾತಿ ಪಡೆದಿತ್ತು. ಇದೇರೀತಿ ತೀರ್ಥಹಳ್ಳಿ ಮೂಲದವರಾದ ಮಾಜ್ ಮುನೀರ್, ಶಾರೀಕ್, ಅರಾಫತ್ ಅಲಿ, ಅಬ್ದುಲ್ ಮತೀನ್ ನಾಲ್ವರು ತೀರ್ಥಹಳ್ಳಿಯನ್ನು ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್​ಗೆ ಐಸೀಸ್​ ನಂಟಿನ ಶಂಕೆ

ಆರೋಪಿ ಅರಾಫತ್ ಈ ವಿಚಾರವನ್ನು ಪದೇ ಪದೇ ಮಾಜ್ ಹಾಗೂ ಶಾರೀಕ್​​ಗೆ ಹೇಳುತ್ತಿದ್ದನು. ಈ ಬಗ್ಗೆ ಎನ್​ಐಎಗೆ ಬೇಕಾದ ಮೋಸ್ಟ್​ ವಾಟೆಂಡ್​​ ಟೆರರಿಸ್ಟ್​​ ಅಬ್ದುಲ್ ಮತೀನ್, ಅರಾಫತ್ ಅಲಿಯ ತಲೆಯಲ್ಲಿ ತುಂಬುತ್ತಿದ್ದನು. ಸದ್ಯ ಮೂವರನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದು, ಅಬ್ದುಲ್ ಮತೀನ್ ಬಂಧನ ಆಗಬೇಕಿದೆ‌‌. ಈ ನಾಲ್ವರು ತೀರ್ಥಹಳ್ಳಿ ಬ್ರದರ್ಸ್ ಅಂತ ಹೆಸರರಾಗಬೇಕು ಅಂದುಕೊಂಡಿದ್ದರು.

ಯಾರು ಈ ಭಟ್ಕಳ್​ ಸಹೋದರರು

ಯಾಸಿನ್ ಭಟ್ಕಳ​​, ರಿಯಾಜ್ ಭಟ್ಕಳ​​​, ಇಕ್ಬಾಲ್​ ಭಟ್ಕಳ​. ಭಟ್ಕಳ​ ಸಹೋದರರು ಎಂದೇ ಖ್ಯಾತಿ ಪಡೆದಿದ್ದಾರೆ. ಇವರು ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್​ ಸಂಘಟನೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇವರಿಂದ ಭಟ್ಕಳ ತಾಲೂಕು ಉಗ್ರವಾದಕ್ಕೆ ಕುಖ್ಯಾತಿ ಪಡೆದಿದೆ. ಯಾಸಿನ್​ ಭಟ್ಕಳನನ್ನು 2013ರ ಆಗಸ್ಟ್​ 28 ರಂದು ಭಾರತೀಯ ಗುಪ್ತಚರ ಅಧಿಕಾರಿಗಳು ಭಾರತ-ನೇಪಾಳ ಗಡಿಯಲ್ಲಿ ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:45 am, Sun, 17 September 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!