ತೀರ್ಥಹಳ್ಳಿಯನ್ನು ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೂವಾರಿ

ಉಗ್ರ ಅರಾಫತ್ ತೀರ್ಥಹಳ್ಳಿಯನ್ನ ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದನು. ಈ ವಿಚಾರ ಆತನ ಬಂಧನದ ಬಳಿಕ ಬಹಿರಂಗವಾಗಿದೆ. ಈ ಹಿಂದೆ ಭಟ್ಕಳ ಸಹೋದರರಿಂದ ಭಟ್ಕಳ ತಾಲೂಕು ಉಗ್ರವಾದಕ್ಕೆ ಕುಖ್ಯಾತಿ ಪಡೆದಿತ್ತು.

ತೀರ್ಥಹಳ್ಳಿಯನ್ನು ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೂವಾರಿ
ಮಂಗಳೂರು ಕುಕ್ಕರ್​ ಬಾಂಬ್​ ಸ್ಪೋಟ
Follow us
| Updated By: ವಿವೇಕ ಬಿರಾದಾರ

Updated on:Sep 17, 2023 | 11:47 AM

ಬೆಂಗಳೂರು ಸೆ.17: ಮಂಗಳೂರಿನಲ್ಲಿ (Mangaluru) ಕಳೆದ ವರ್ಷ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ (Cooker Bomb) ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ (ISIS) ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದ್ದು, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಾಯಿ ಬಿಟ್ಟಿದ್ದಾನೆ. ಉಗ್ರಗಾಮಿಗಳು ಭಟ್ಕಳ ಮಾದರಿಯಲ್ಲೇ ತೀರ್ಥಹಳ್ಳಿಯನ್ನು ಉಗ್ರರ ನಕ್ಷೆಗೆ ಸೇರಿಸಲು ಪಣ ತೊಟ್ಟಿದ್ದಾರೆ ಎಂಬ ಆಘಾತಕಾರಿ ಅಂಶ ಬಹಿರಂಗವಾಗಿದೆ.

ಉಗ್ರ ಅರಾಫತ್ ತೀರ್ಥಹಳ್ಳಿಯನ್ನ ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದನು. ಈ ವಿಚಾರ ಆತನ ಬಂಧನದ ಬಳಿಕ ಬಹಿರಂಗವಾಗಿದೆ. ಈ ಹಿಂದೆ ಭಟ್ಕಳ ಸಹೋದರರಿಂದ ಭಟ್ಕಳ ತಾಲೂಕು ಉಗ್ರವಾದಕ್ಕೆ ಕುಖ್ಯಾತಿ ಪಡೆದಿತ್ತು. ಇದೇರೀತಿ ತೀರ್ಥಹಳ್ಳಿ ಮೂಲದವರಾದ ಮಾಜ್ ಮುನೀರ್, ಶಾರೀಕ್, ಅರಾಫತ್ ಅಲಿ, ಅಬ್ದುಲ್ ಮತೀನ್ ನಾಲ್ವರು ತೀರ್ಥಹಳ್ಳಿಯನ್ನು ಉಗ್ರರ ನೆಲೆಯಾಗಿಸಲು ಸಂಚು ರೂಪಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್​ಗೆ ಐಸೀಸ್​ ನಂಟಿನ ಶಂಕೆ

ಆರೋಪಿ ಅರಾಫತ್ ಈ ವಿಚಾರವನ್ನು ಪದೇ ಪದೇ ಮಾಜ್ ಹಾಗೂ ಶಾರೀಕ್​​ಗೆ ಹೇಳುತ್ತಿದ್ದನು. ಈ ಬಗ್ಗೆ ಎನ್​ಐಎಗೆ ಬೇಕಾದ ಮೋಸ್ಟ್​ ವಾಟೆಂಡ್​​ ಟೆರರಿಸ್ಟ್​​ ಅಬ್ದುಲ್ ಮತೀನ್, ಅರಾಫತ್ ಅಲಿಯ ತಲೆಯಲ್ಲಿ ತುಂಬುತ್ತಿದ್ದನು. ಸದ್ಯ ಮೂವರನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದು, ಅಬ್ದುಲ್ ಮತೀನ್ ಬಂಧನ ಆಗಬೇಕಿದೆ‌‌. ಈ ನಾಲ್ವರು ತೀರ್ಥಹಳ್ಳಿ ಬ್ರದರ್ಸ್ ಅಂತ ಹೆಸರರಾಗಬೇಕು ಅಂದುಕೊಂಡಿದ್ದರು.

ಯಾರು ಈ ಭಟ್ಕಳ್​ ಸಹೋದರರು

ಯಾಸಿನ್ ಭಟ್ಕಳ​​, ರಿಯಾಜ್ ಭಟ್ಕಳ​​​, ಇಕ್ಬಾಲ್​ ಭಟ್ಕಳ​. ಭಟ್ಕಳ​ ಸಹೋದರರು ಎಂದೇ ಖ್ಯಾತಿ ಪಡೆದಿದ್ದಾರೆ. ಇವರು ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್​ ಸಂಘಟನೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇವರಿಂದ ಭಟ್ಕಳ ತಾಲೂಕು ಉಗ್ರವಾದಕ್ಕೆ ಕುಖ್ಯಾತಿ ಪಡೆದಿದೆ. ಯಾಸಿನ್​ ಭಟ್ಕಳನನ್ನು 2013ರ ಆಗಸ್ಟ್​ 28 ರಂದು ಭಾರತೀಯ ಗುಪ್ತಚರ ಅಧಿಕಾರಿಗಳು ಭಾರತ-ನೇಪಾಳ ಗಡಿಯಲ್ಲಿ ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:45 am, Sun, 17 September 23

ತಾಜಾ ಸುದ್ದಿ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ