AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣು ಕುಸಿತ ದುರಂತದಿಂದ ಎಚ್ಚೆತ್ತ ಮಂಗಳೂರು ಪಾಲಿಕೆ: ಮಳೆಗಾಲ ಮುಗಿಯುವವೆಗೂ ಕಟ್ಟಡ ಕಾಮಗಾರಿಗೆ ಬ್ರೇಕ್

ಮಂಗಳೂರಿನ ಬಲ್ಮಠ ರೋಡ್ ಸಮೀಪ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ವೇಳೆ ಭೂಕುಸಿತವಾಗಿ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದರು, ಮತ್ತೊಬ್ಬ ಪಾರಾಗಿದ್ದಾರೆ. ಸದ್ಯ ದುರಂತದಿಂದ ಎಚ್ಚೆತ್ತಿರುವ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಕ್ತಾಯದವರೆಗೆ ‌ಯಾವುದೇ ಕಟ್ಟಡ ಕಾಮಗಾರಿ ನಡೆಸದಂತೆ ಆಯುಕ್ತ ಆನಂದ್ ಸಿ.ಎಲ್ ಆದೇಶಿಸಿದ್ದಾರೆ.

ಮಣ್ಣು ಕುಸಿತ ದುರಂತದಿಂದ ಎಚ್ಚೆತ್ತ ಮಂಗಳೂರು ಪಾಲಿಕೆ: ಮಳೆಗಾಲ ಮುಗಿಯುವವೆಗೂ ಕಟ್ಟಡ ಕಾಮಗಾರಿಗೆ ಬ್ರೇಕ್
ಮಣ್ಣು ಕುಸಿತ ದುರಂತದಿಂದ ಎಚ್ಚೆತ್ತ ಮಂಗಳೂರು ಪಾಲಿಕೆ: ಮಳೆಗಾಲ ಮುಗಿಯುವವೆಗೂ ಕಟ್ಟಡ ಕಾಮಗಾರಿಗೆ ಬ್ರೇಕ್
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jul 03, 2024 | 9:30 PM

Share

ಮಂಗಳೂರು, ಜುಲೈ 03: ನಗರದ ಬಲ್ಮಠ ರೋಡ್ ಸಮೀಪ ನಿರ್ಮಾಣ ಹಂತದ ಕಟ್ಟಡದ ಬಳಿ ಮಣ್ಣು ಕುಸಿದು (Landslide) ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಹೀಗಾಗಿ ಮಂಗಳೂರು ಪಾಲಿಕೆ (Mangalore City Corporation) ವ್ಯಾಪ್ತಿಯಲ್ಲಿ ಮಳೆಗಾಲ ಮುಕ್ತಾಯದವರೆಗೆ ‌ಯಾವುದೇ ಕಟ್ಟಡ ಕಾಮಗಾರಿ ನಡೆಸದಂತೆ ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಕಟ್ಟಡ ನಿರ್ಮಾಣ ಸಂಸ್ಥೆಗಳಿಗೆ ಪಾಲಿಕೆ ಆಯುಕ್ತರಿದಂದ ಎಚ್ಚರಿಕೆ ನೀಡಲಾಗಿದೆ.

ಅವೈಜ್ಞಾನಿಕವಾಗಿ ಭೂ ಅಗೆತ‌ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ಮಾಡಲಾಗುತ್ತಿದೆ. ಭೂ ಕುಸಿತ ಉಂಟಾಗಿ ಜೀವ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಹೀಗಾಗಿ ಮಳೆಗಾಲ ಮುಕ್ತಾಯದವರೆಗೆ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಬಾರದು.

ಇದನ್ನೂ ಓದಿ: ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ: ಓರ್ವ ಸಾವು, ಮತ್ತೋರ್ವ ಪವಾಡಸದೃಶ್ಯ ರೀತಿ ಪಾರು

ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಕಾಮಗಾರಿ ನಿಲ್ಲಿಸಬೇಕು. ಇದನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪ್ರಸ್ತುತ ಮುಂಗಾರಿಗೆ ಅತ್ಯಧಿಕ ಮಳೆಯಾಗುವ ಸಾಧ್ಯತೆಗಳೊಂದಿಗೆ ರೆಡ್, ಆರೆಂಜ್, ಎಲ್ಲೊ ಅಲರ್ಟ್ ಬಗ್ಗೆ ಹವಮಾನ ಇಲಾಖೆಯಿಂದ ನಿರಂತರವಾಗಿ ಮುನ್ಸೂಚನೆ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ಮಳೆಗಾಲ ಮುಕ್ತಾಯವಾಗುವವರೆಗೆ ನಡೆಸದಂತೆ ತಿಳಿಸಲಾಗಿದೆ.

ಇದನ್ನೂ ಓದಿ: ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗ ಮಾರ್ಗದಿಂದಲೇ ಚಿಕಿತ್ಸೆ

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಪೈಕಿ ಒಬ್ಬನನ್ನ ರಕ್ಷಿಸಲಾಗಿದ್ದು, ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಸುಮಾರು 40 ಅಡಿಯಷ್ಟು ಗುಂಡಿ‌ ತೋಡಿದ್ದು, ಸುತ್ತಲೂ ಕಾಂಕ್ರೀಟ್ ತಡೆಗೋಡೆ ನಿರ್ಮಾಣವಾಗಿದೆ. ಮಧ್ಯಾಹ್ನ 12.30ರ ಸುಮಾರು. ಇದೇ ತಡೆಗೋಡೆಗೆ ಬಿಹಾರ ಮೂಲದ ರಾಜ್​ಕುಮಾರ್, ಉತ್ತರ ಪ್ರದೇಶ ಮೂಲದ ಚಂದನ್ ವಾಟರ್ ಪ್ರೂಫ್‌ ಕೆಮಿಕಲ್ ಬಳೀತಿದ್ರು. ಈ ವೇಳೆ ಏಕಾಏಕಿ ಕಾರ್ಮಿಕರ ಮೇಲೆ ಮಣ್ಣು ಕುಸಿದಿತ್ತು. 4-5 ದಿನದಿಂದ ಸುರಿಯುತ್ತಿರುವ ಮಳೆಯಿಂದ ಮಣ್ಣು ಸಡಿಲಗೊಂಡು ದುರಂತ ಸಂಭವಿಸಿತ್ತು.

ಎನ್​ಡಿಆರ್​ಎಫ್​, ಎಸ್​ಡಿಆರ್​​ಎಫ್​, ಅಗ್ನಿಶಾಮಕ ಸಿಬ್ಬಂದಿ ಸತತ 2 ಗಂಟೆಗಳ ಕಾಲ ಹರಸಾಹಸ ಪಟ್ಟು ಓರ್ವ ಕಾರ್ಮಿಕರ ಜೀವ ಉಳಿಸಿದ್ದರು. ಅರೆ ಪ್ರಜ್ಞೆಯಲ್ಲಿದ್ದ ಬಿಹಾರ ಮೂಲದ ಕಾರ್ಮಿಕ ರಾಜಕುಮಾರ್​ನ ರಕ್ಷಣೆ ಮಾಡಿ, ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು. ಆದರೆ ಸತತ ಆರು ಗಂಟೆ ಕಾರ್ಯಚರಣೆ ಮಾಡಿದರೂ ಚಂದನ್​ನನ್ನು ರಕ್ಷಣೆ ಮಾಡಲಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ