AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಹೊಸ ವರ್ಷಕ್ಕೆಂದು ತರಿಸಿದ್ದ 9 ಲಕ್ಷ ರೂ ಮೌಲ್ಯದ ಡ್ರಗ್ಸ್ ವಶಕ್ಕೆ, ಮೂವರ ಬಂಧನ

2025ರ ಹೊಸ ವರ್ಷ ಸ್ವಾಗತಿಸಲು ದಿನಗಣನೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ಎಲ್ಲೆಡೆ ಹೊಸವರ್ಷಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ ಯುವ ಸಮೂಹವಂತೂ ನ್ಯೂ ಇಯರ್ ಸೆಲೆಬ್ರೆಷನ್​​ಗೆ ಭರ್ಜರಿ ಪ್ಲಾನಿಂಗ್​ ನಡೆಸಿದ್ದಾರೆ. ಈ ಮಧ್ಯೆ ಡ್ರಗ್ಸ್ ಮತ್ತು ಮಾದಕವಸ್ತುಗಳನ್ನು ಸಂಗ್ರಹಿಸಿಡಲಾಗುತ್ತಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿದೆ. ಇದೀಗ ಬೆನ್ನಲ್ಲೇ ಮಂಗಳೂರಿನಲ್ಲಿ 9 ಲಕ್ಷ ರೂ ಮೌಲ್ಯದ ಮಾದಕವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು: ಹೊಸ ವರ್ಷಕ್ಕೆಂದು ತರಿಸಿದ್ದ 9 ಲಕ್ಷ ರೂ ಮೌಲ್ಯದ ಡ್ರಗ್ಸ್ ವಶಕ್ಕೆ, ಮೂವರ ಬಂಧನ
ಮಂಗಳೂರು: ಹೊಸ ವರ್ಷಕ್ಕೆಂದು ತರಿಸಿದ್ದ 9 ಲಕ್ಷ ರೂ ಮೌಲ್ಯದ ಡ್ರಗ್ಸ್ ವಶಕ್ಕೆ, ಮೂವರ ಬಂಧನ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Dec 18, 2024 | 9:22 PM

Share

ಮಂಗಳೂರು, ಡಿಸೆಂಬರ್​ 18: ನಗರದಲ್ಲಿ ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ ಮೌಲ್ಯದ ಮಾದಕ ವಸ್ತುವನ್ನು (Drugs)​​ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುಳೂರು ನದಿ ದಂಡೆಯಲ್ಲಿ ಡ್ರಗ್ಸ್ ಸ್ಕ್ವಾಡ್ ಹಾಗೂ ಕಾವೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ದೇವರಾಜ್, ಮೊಹಮ್ಮದ್ ಫರ್ವೆಜ್ ಉಮರ್, ಶೇಖ್ ತಹೀಮ್ ಬಂಧಿತ ಆರೋಪಿಗಳು.

5 ಕೆಜಿ ಗಾಂಜಾ, 100 ಗ್ರಾಂ ಎಂಡಿಎಂಎ, 7 ಗ್ರಾಂ ಕೋಕೆನ್, 17 ಗ್ರಾಂ ಎಂಡಿಎಂಎ ಪಿಲ್ಸ್, 100 ಗ್ರಾಂ ಚರಸ್, 8 ಗ್ರಾಂ ಹೈಡ್ರೋವಿಡ್ ಗಾಂಜಾ ಮತ್ತು 3 ಎಲ್​​ಎಸ್​ಡಿ ಸ್ಟ್ರಿಪ್ಸ್ ಸೇರಿದಂತೆ ಹರಿತವಾದ ಚಾಕು, ಮಾದಕ ವಸ್ತು ಸಾಗಾಟ ಮಾಡಲು ಉಪಯೋಗಿಸಿದ ಕಾರು ಮತ್ತು ಸ್ಕೂಟರ್ ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಇನ್ನಷ್ಟು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬಿಸಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಲ್ಲಿ 24 ಕೋಟಿ ರೂ ಮೌಲ್ಯದ ಡ್ರಗ್ಸ್ ಸೀಜ್

ಹೊಸ ವರ್ಷದ ಹೊತ್ತಲ್ಲೇ ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಡ್ರಗ್ಸ್ ಬೇಟೆ ಆಡಿದ್ದಾರೆ. ಚಿಕ್ಕ ಪ್ರಾವಿಷನ್ ಸ್ಟೋರ್ ಇಟ್ಕೊಂಡಿದ್ದ ನೈಜಿರಿಯಾ ಮೂಲದ ಮಹಿಳೆ ಡ್ರಗ್ಸ್ ದಂಧೆ ನಡೆಸುತ್ತಿದ್ದರು. ಸಿಸಿಬಿ ಕಣ್ಣಿಗೆ ಬಿದ್ದಿದ್ದೇ ಬರೋಬ್ಬರು 24 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿದೆ.

ಇದನ್ನೂ ಓದಿ: ಚಾಮರಾಜಪೇಟೆ ಅಂಚೆ ಕಚೇರಿಯಲ್ಲಿ ಡ್ರಗ್ಸ್​​ ಬಾಕ್ಸ್​ ಪತ್ತೆ ಕೇಸ್​: ಸಿಸಿಬಿ ತನಿಖೆಯಲ್ಲಿ ಸ್ಫೋಟಕ ಅಂಶಗಳು ಬಹಿರಂಗ

ಕೆ.ಆರ್ ಪುರಂನ ಟಿಸಿ ಪಾಳ್ಯದಲ್ಲಿ ಕಳೆದ ಐದು ವರ್ಷದಿಂದ ವಾಸವಿದ್ದ ರೋಜ್ಲೈಮ್, ಪ್ರಾವಿಷನ್ ಸ್ಟೋರ್ ನಡಿಸುತ್ತಿದ್ದರು. ಆದರೆ ಈ ಅಂಗಡಿಯಲ್ಲಿ ಮುಂಬೈನಿಂದ ಪ್ರಾವಿಷನ್ ಐಟಂಗಳ ಮೂಲಕ ಬರ್ತಿದ್ದ ಡ್ರಗ್ಸ್ ಇಟ್ಕೊಂಡು ಸ್ಥಳೀಯ ನಿವಾಸಿಗಳು, ನೈಜಿರಿಯನ್ ಪ್ರಜೆಗಳಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಸಿಸಿಬಿ ಪೊಲೀಸರು ಆಕೆಯನ್ನ ರೆಡ್ ಹ್ಯಾಂಡಗಿ ಹಿಡಿದು ಬರೋಬ್ಬರಿ 24 ಕೋಟಿ ಮೌಲ್ಯದ 12 kg ತೂಕದ ಬಿಳಿ, ಹಸಿರು ಬಣ್ಣದ ಎಂಡಿಎಂಎ ಡ್ರಗ್ಸ್ ಸೀಜ್ ಮಾಡಿದ್ದಾರೆ.

ಕಳೆದ ಶುಕ್ರವಾರ ಮುಂಬೈನಿಂದ ರೋಜ್ಲೈಮ್ ಅಂಗಡಿಗೆ ಜುಲಿಯೆಟ್ ಎಂಬ ಮತ್ತೊಬ್ಬ ವಿದೇಶಿ ಮಹಿಳೆ ಈ ಸರಕು ತಂದಿದ್ದರು. ಡೆಟಲ್ ಸೋಪ್, ಮುಂಗ್ ದಾಲ್ ಸೇರಿದಂತೆ ಇನ್ನಿತರ ಪ್ರಾವಿಷನ್ ಐಟಂಗಳಲ್ಲಿ ಡ್ರಗ್ಸ್ ತುಂಬಿ ಅಂಗಡಿಗೆ ಬಳಿ ಬರ್ತಿದ್ದಂತೆ ರೇಡ್ ಮಾಡಿದ ಸಿಸಿಬಿ ಪೊಲೀಸರು ಎಲ್ಲಾ ವಸ್ತುಗಳನ್ನು ಸೀಜ್ ಮಾಡಿ ಅಂಗಡಿ ಮಾಲೀಕೆ ರೋಜ್ಲೈಮ್ ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:19 pm, Wed, 18 December 24

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ