AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಸುತ್ತಾಟ ಆರೋಪ: ಸ್ಥಳೀಯರ ಕೈಗೆ ಸಿಕ್ಕಿಬಿದ್ದ ವಿದ್ಯಾರ್ಥಿಗಳು

ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ ಕೇಳಿಬಂದಿದೆ. ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಎನ್ನಲಾಗಿದೆ. ಕಾರು ಅಪಘಾತದ ವೇಳೆ ಸಾರ್ವಜನಿಕರು ಅನ್ಯಕೋಮಿನ ಜೋಡಿ ಎಂಬುದು ಬೆಳಕಿಗೆ ಬಂದಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಸುತ್ತಾಟ ಆರೋಪ: ಸ್ಥಳೀಯರ ಕೈಗೆ ಸಿಕ್ಕಿಬಿದ್ದ ವಿದ್ಯಾರ್ಥಿಗಳು
ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಸುತ್ತಾಟ ಆರೋಪ: ಸ್ಥಳೀಯರ ಕೈಗೆ ಸಿಕ್ಕಿಬಿದ್ದ ವಿದ್ಯಾರ್ಥಿಗಳು
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 12, 2024 | 3:19 PM

Share

ಮಂಗಳೂರು, ಜೂನ್​ 12: ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ (Students) ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ ಮಾಡಲಾಗಿದ್ದು, ಕಾರಿನಲ್ಲಿದ್ದ ತಂಡವನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿರುವಂತಹ ಘಟನೆ ಮಂಗಳೂರು (Mangaluru) ಹೊರವಲಯದ ಮುಕ್ಕ ಎಂಬಲ್ಲಿ ನಡೆದಿದೆ. ಮುಕ್ಕ ಸಮೀಪ ಕಾರಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಇದ್ದಳು ಎನ್ನಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಯುವತಿಯೊಂದಿಗೆ ಬಿಎಂಡಬ್ಲ್ಯು ಕಾರಿನಲ್ಲಿ ಹೊಗುತ್ತಿರಬೇಕಾದರೆ, ಸ್ಕೂಲ್​​ ಬಸ್​ಗೆ ಡಿಕ್ಕಿ ಹೊಡೆದಿದ್ದಾರೆ. ಹೀಗಾಗಿ ಬಸ್ ಚಾಲಕ‌ನ ಜೊತೆ ತಂಡ ಜಗಳವಾಡುತ್ತಿದ್ದರು. ಜನ ಸೇರುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸಿದ್ದಾರೆ, ಆದರೆ ಕಾರು ಕೈಕೊಟ್ಟಿದೆ. ಬಳಿಕ ಜನರು ಇವರನ್ನು ಗಮನಿಸಿದ್ದು ಇದು ಅನ್ಯಕೋಮಿನ ಜೋಡಿ ಎಂಬುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು; ಮುಸ್ಲಿಂ ಯುವಕನ ಜತೆ ಮದುವೆಯಾಗಿ ಠಾಣೆಗೆ ಬಂದ ಯುವತಿ

BMW ಕಾರಿಗೆ ಫುಲ್ ಟಿಂಟ್ ಅಳವಡಿಸಿದ್ದು, ಹಲವು ಅನುಮಾನಕ್ಕೂ ಎಡೆಮಾಡಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಬಳಿಕ ಠಾಣೆಗೆ ಯುವತಿ ಪೋಷಕರನ್ನು ಕರೆಸಿ ಬಿಟ್ಟು ಕಳುಹಿಸಲಾಗಿದೆ.

ಇದನ್ನೂ ಓದಿ: ಲವ್ ಜಿಹಾದ್​​ ತಡೆಗೆ ಶ್ರೀರಾಮಸೇನೆಯಿಂದ ರಾಜ್ಯದ 6 ಕಡೆ ಸಹಾಯವಾಣಿ ಆರಂಭಿಸಲು ನಿರ್ಧಾರ

ಇನ್ನು ಇತ್ತೀಚೆಗೆ ಜಿಲ್ಲೆಯ ಕಾಸರಗೋಡಿನಲ್ಲಿ ಮತ್ತೆ ಲವ್​ ಜಿಹಾದ್​ ಸದ್ದು ಮಾಡಿತ್ತು. ಬದಿಯಡ್ಕದಲ್ಲಿ ಲವ್‌ ಜಿಹಾದ್ ಪ್ರಕರಣ ಬೆಳಕಿಗೆ ಬಂದಿತ್ತು. ಮುಸ್ಲಿಂ ಲೀಗ್ ನಾಯಕರೊಬ್ಬರು ಲವ್ ಜಿಹಾದ್​ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಾಸರಗೋಡಿನ ವಿಎಚ್​​​​ಪಿ ಸೇರಿ ಹಿಂದೂ ಪರ ಸಂಘಟನೆಗಳು ಆರೋಪಿಸಿದ್ದವು.

ಘಟನೆ ಹಿನ್ನೆಲೆ

ಮೇ 23ರಂದು ಮನೆಯಿಂದ ಹೋಗಿದ್ದ ಯುವತಿ ದಿಢೀರ್ ನಾಪತ್ತೆಯಾಗಿದ್ದರು. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಅನ್ಯಕೋಮಿನ ಯುವನೊಂದಿಗೆ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿತ್ತು. ರಿಜಿಸ್ಟರ್ ಕಚೇರಿಯಲ್ಲಿ ಯುವತಿ ಮತ್ತು ಮಿರ್ಶಾದ್ ಮದುವೆಯಾಗಿರುವುದು ತಿಳಿದುಬಂದಿತ್ತು. ಮದುವೆಯಾದ ನಂತರ ಮೇ 27ರಂದು ಬದಿಯಡ್ಕ ಠಾಣೆಗೆ ಜೋಡಿ ಹಾಜರಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ