AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವು ಪ್ರಿಯರೇ ಎಚ್ಚರ! ಮಾರುಕಟ್ಟೆಗೆ ಬಂದಿವೆ ರಾಸಾಯನಿಕ ಮಿಶ್ರಿತ ಹಣ್ಣುಗಳು

ಮೂಡುಬಿದಿರೆ ಪುರಸಭೆ ಹಾಗೂ ಆಹಾರ ಸುರಕ್ಷತೆ ಗುಣಮಟ್ಟ ತಪಾಸಣೆ ಜಂಟಿ ಅಧಿಕಾರಿಗಳಿಂದ ಸಂತೆ‌ ವ್ಯಾಪಾರಿಗಳು ಹಾಗೂ ರಸ್ತೆ ಬದಿ ಹಣ್ಣು ವ್ಯಾಪಾರಿ ಮಳಿಗೆಗಳ ಮೇಲೆ ದಾಳಿ ಮಾಡಲಾಗಿದೆ. ದಾಳಿ ವೇಳೆ ಪತ್ತೆಯಾದ ರಾಸಾಯನಿಕ ಮಾವಿನ ಹಣ್ಣುಗಳ ರಾಶಿಯನ್ನು ಅಧಿಕಾರಿಗಳು ತೆರವು ಮಾಡಿದ್ದಾರೆ. ಹಣ್ಣು ಖರೀದಿ ಮಾಡುವಾಗಲೇ ಈ ಬಗ್ಗೆ ಪರೀಕ್ಷೆ ಮಾಡುವಂತೆ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ.  

ಮಾವು ಪ್ರಿಯರೇ ಎಚ್ಚರ! ಮಾರುಕಟ್ಟೆಗೆ ಬಂದಿವೆ ರಾಸಾಯನಿಕ ಮಿಶ್ರಿತ ಹಣ್ಣುಗಳು
ಮಾವು ಪ್ರೀಯರೇ ಎಚ್ಚರ! ಮಾರುಕಟ್ಟೆಗೆ ಬಂದಿವೆ ರಾಸಾಯನಿಕ ಮಿಶ್ರಿತ ಹಣ್ಣುಗಳು
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:May 10, 2024 | 5:52 PM

Share

ಮಂಗಳೂರು, ಮೇ 10: ಹಣ್ಣುಗಳ ರಾಜ ಮಾವಿನ ಹಣ್ಣು (Mango) ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಮಾವಿನ ಹಣ್ಣಿನ ಹೆಸರು ಕೇಳಿದರೇ ಸಾಕು ಬಾಯಲ್ಲಿ ನೀರು ಬರುವುದು ಸಹಜ. ಈಗಾಗಲೇ ಮಾವಿನ ಸುಗ್ಗಿ ಆರಂಭವಾಗಿದ್ದು, ಮಾರುಕಟ್ಟೆಗೆ ಬಗೆ ಬಗೆಯ ಮಾವಿನ ಹಣ್ಣು ಬರುತ್ತಿವೆ. ಆದರೆ ಇದರೊಂದಿಗೆ ರಾಸಾಯನಿಕ (Chemical) ಬಳಸಿ ಕೃತಕವಾಗಿ ಹಣ್ಣು ಮಾಡಿದ ಮಾವಿನ ಹಣ್ಣುಗಳು ಪತ್ತೆ ಆಗಿವೆ. ಹೀಗಾಗಿ  ಬಾಯಿ ಚಪ್ಪರಿಸುತ್ತ ಮಾವಿನ ಹಣ್ಣು ತಿನ್ನುವವರು ಎಚ್ಚರಿಕೆ ವಹಿಸಬೇಕಿದೆ.

ರಾಸಾಯನಿಕ ಬಳಸಿ ಕೃತಕವಾಗಿ ಮಾವಿನ ಕಾಯಿ ಹಣ್ಣು ಮಾಡುವ ಆರೋಪ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ತಪಾಸಣೆ ಅಧಿಕಾರಿಗಳ ಕಾರ್ಯಾಚರಣೆ ಮಾಡಿದ್ದು, ಮಾವಿನ ಹಣ್ಣು ಮಾರಾಟ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ: ನಕಲಿ ವೈದ್ಯರ ಹಾವಳಿ: ಬೆಳಗಾವಿಯ ನಾಲ್ಕು ಖಾಸಗಿ ಆಸ್ಪತ್ರೆ ಸೀಜ್​

ಮೂಡುಬಿದಿರೆ ಪುರಸಭೆ ಹಾಗೂ ಆಹಾರ ಸುರಕ್ಷತೆ ಗುಣಮಟ್ಟ ತಪಾಸಣೆ ಜಂಟಿ ಅಧಿಕಾರಿಗಳಿಂದ ಸಂತೆ‌ ವ್ಯಾಪಾರಿಗಳು ಹಾಗೂ ರಸ್ತೆ ಬದಿ ಹಣ್ಣು ವ್ಯಾಪಾರಿ ಮಳಿಗೆಗಳ ಮೇಲೆ ದಾಳಿ ಮಾಡಲಾಗಿದೆ. ದಾಳಿ ವೇಳೆ ಪತ್ತೆಯಾದ ರಾಸಾಯನಿಕ ಮಾವಿನ ಹಣ್ಣುಗಳ ರಾಶಿಯನ್ನು ಅಧಿಕಾರಿಗಳು ತೆರವು ಮಾಡಿದ್ದಾರೆ.

ಹಣ್ಣು ಖರೀದಿ ಮಾಡುವಾಗಲೇ ಈ ಬಗ್ಗೆ ಪರೀಕ್ಷೆ ಮಾಡುವಂತೆ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂದೆ ಕೃತಕವಾಗಿ ಹಣ್ಣು ಮಾಡಿದ ಮಾವಿನ ಹಣ್ಣುಗಳ ಮಾರಾಟ ಮಾಡದಂತೆ ವ್ಯಾಪಾರಸ್ಥರಿಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: KGF: ಕೆಜಿಎಫ್​ನಲ್ಲಿ ಈಗಲೂ ಚಿನ್ನ ಇದೆಯೇ?: ಕೋಲಾರದ ಚಿನ್ನದ ಗಣಿ ಮುಚ್ಚಲು ಏನು ಕಾರಣ..?

ಟಿವಿ9 ಜೊತೆ ಅಧಿಕಾರಿಯೊಬ್ಬರು ಮಾತನಾಡಿದ್ದು, ಮೂಡುಬಿದರೆಯಲ್ಲಿ ರಸ್ತೆ ಬದಿಯಲ್ಲಿ ವಾಹನಗಳಲ್ಲಿ ಹಣ್ಣಿನ ವ್ಯಾಪಾರ ಮಾಡುವವರು ಮಾವಿನ ಹಣ್ಣು ಸೇರಿದಂತೆ ರಾಸಾಯನಿಕ ಬಳಸಿ ಕೃತಕವಾಗಿ ಹಣ್ಣು ಮಾಡುತ್ತಿರುವ ಆರೋಪ ಹಿನ್ನೆಲೆ ರೈಡ್​ ಮಾಡಲಾಗಿದೆ. ರಾಸಾಯನಿಕ ಬಳಸಿ ಕೃತಕವಾಗಿ ಹಣ್ಣಾಗಿರುವ ಹಣ್ಣುಗಳನ್ನು ಪತ್ತೆ ಮಾಡಿ ತೆರವು ಮಾಡಲಾಗಿದ್ದು ಮತ್ತು ಮುಂದೆ ಈ ರೀತಿ ಮಾಡದಂತೆ ವ್ಯಾಪಾರಸ್ಥರಿಗೆ ಎಚ್ಚರಿಕೆಯನ್ನು ನೀಡಿದ್ದೇವೆ ಎಂದು ಹೇಳಿದ್ದಾರೆ.

ವ್ಯಾಪಾರಸ್ಥರು ತಾವು ಖರೀದಿ ಮಾಡುವ ಮೊದಲು ಅದಕ್ಕೆ ಕೃತಕವಾಗಿ ಹಣ್ಣಾಗುವ ರಾಸಾಯನಿಕ ಬಳಕೆ ಮಾಡಲಾಗಿದೇಯೆ ಎಂಬುವುದನ್ನು ಮೊದಲೇ ಪರೀಕ್ಷೆ ಮಾಡಿಕೊಳ್ಳಬೇಕು. ಬಳಿಕ ಅದನ್ನು ತಂದು ಗ್ರಾಹಕರಿಗೆ ಮಾರಾಟ ಮಾಡಬಹುದು ಎಂದು ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:50 pm, Fri, 10 May 24

Follow Us
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್